Hassan Mixi Blast: ನಿನ್ನೆ ಪತ್ನಿಗೆ ಅವಳಿ ಜವಳಿ ಮಕ್ಕಳಾಗಿದ್ದರೂ ಮುಖ ನೋಡಲಾಗಿಲ್ಲ: ಗಾಯಾಳು ಶಶಿ ಅಳಲು

Hassan Mixi Blast: ನಿನ್ನೆ ಪತ್ನಿಗೆ ಅವಳಿ ಜವಳಿ ಮಕ್ಕಳಾಗಿದ್ದರೂ ಮುಖ ನೋಡಲಾಗಿಲ್ಲ: ಗಾಯಾಳು ಶಶಿ ಅಳಲು

Published : Dec 28, 2022, 06:06 PM ISTUpdated : Dec 28, 2022, 06:07 PM IST

ಮಿಕ್ಸಿ ಸ್ಪೋಟ ಪ್ರಕರಣದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಆದರೆ, ನನ್ನ ಪತ್ನಿಗೆ ನಿನ್ನೆ ಬೇರೊಂದು ಆಸ್ಪತ್ರೆಯಲ್ಲಿ ಹೆರಿಗೆ ಆಗಿದ್ದು, ಅವಳಿ ಜವಳಿ ಮಕ್ಕಳು ಜನಿಸಿವೆ. ನಾನು ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಂಡತಿ ಮತ್ತು ಮಕ್ಕಳ ಮುಖ ನೋಡಲಾಗಿಲ್ಲ ಎಂದು ಗಾಯಾಳು ಶಶಿ ಅಳಲು ತೋಡಿಕೊಂಡಿದ್ದಾನೆ.

ಹಾಸನ (ಡಿ.28): ಕಳೆದ ಮೂರು ದಿನಗಳ ಹಿಂದೆ ಹಾಸನದಲ್ಲಿ ನಡೆದಿದ್ದ ಮಿಕ್ಸಿ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಕೋರಿಯರ್‌ ಮಳಿಗೆ ಮಾಲೀಕ ಶಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತನ ಕೈಗೆ ದೊಡ್ಡ ತೀವ್ರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವುದು ಅಗತ್ಯವಾಗಿದೆ. ಆದರೆ, ತನ್ನ ಪತ್ನಿಗೆ ನಿನ್ನೆ ಹೆರಿಗೆ ಆಗಿದ್ದು, ಅವಳಿ ಜವಳಿ ಮಕ್ಕಳು ಜನಿಸಿವೆ. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಂಡತಿ ಮತ್ತು ಮಕ್ಕಳ ಮುಖ ನೋಡಲಾಗಿಲ್ಲ ಎಂದು ಶಶಿ ಅಳಲು ತೋಡಿಕೊಂಡಿದ್ದಾನೆ.

ಹಾಸನ ನಗರದಲ್ಲಿ ಕೋರಿಯರ್‌ ಅಂಗಡಿಯೊಂದರಲ್ಲಿ ಡಿಸೆಂಬರ್ 26 ರಂದು ಮಿಕ್ಸಿ ಬ್ಲಾಸ್ಟ್‌ ಆಗಿತ್ತು. ಈ ಪ್ರಕರಣದ ಬಗ್ಗೆ ಮಾತನಾಡಿದ ಗಾಯಾಳು ಶಶಿ ಘಟನೆ ಬಗ್ಗೆ ಪೂರ್ಣ ವಿವರವನ್ನು ತಿಳಿಸಿದ್ದಾನೆ. ಬೆಂಗಳೂರಿನ ಪೀಣ್ಯದಿಂದ ಫ್ರಮ್ ಅಡ್ರೆಸ್ ಇಲ್ಲದೆ  ಕೊರಿಯರ್ ಬಂದಿತ್ತು. ಪಾರ್ಸೆಲ್ ಓಪನ್ ಮಾಡಿ ನಂತರ ನಮಗೆ ರಿಟರ್ನ್ ಮಾಡೋದಿಕ್ಕೆ ತಂದು ಕೊಟ್ಟರು. ಆಗ ಶಾಪ್‌ ಬಾಗಿಲು ಹಾಕಿ ಮನೆಗೆ ಹೋಗಬೇಕೆಂದುಕೊಂಡೆ. ಆಚೆ ಬರುವಾಗ ಟೇಬಲ್ ಮೇಲಿಂದ ಮಿಕ್ಸಿ ಕೆಳಗೆ ಬಿದ್ದು ಬ್ಲಾಸ್ಟ್ ಆಯಿತು ಎಂದು ಹೇಳಿದ್ದಾನೆ.

ಮಕ್ಕಳ ಮುಖ ನೋಡಲಾಗಿಲ್ಲ: ಡಿಸೆಂಬರ್ 17 ರಂದು ಬಂದಿತ್ತು. ಅದನ್ನು ಮಹಿಳೆಯ ಮನೆಗೂ ತಲುಪಿಸಲಾಗಿತ್ತು. ಆದರೆ, ಮಹಿಳೆ ವಸಂತಾ ಫ್ರಮ್‌ ವಿಳಾಸವಿಲ್ಲದ ಬಾಕ್ಸ್ ಅನ್ನು  26 ರ ಸಂಜೆ ರಿಟರ್ನ್ ಮಾಡಿದರು. ಜೊತೆಗೆ ಕೋರಿಯರ್‌ ವಾಪಸ್‌ ಕಳಿಸಲು 300 ರೂಪಾಯಿ ರಿಟರ್ನ್ ಚಾರ್ಚ್ ಕೇಳಿದರೂ ಕೊಡದೇ ಅದನ್ನು ಇಲ್ಲಿ ಬಿಟ್ಟು ಹೋದರು.  ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಜೀವಕ್ಕೆ ಅಪಾಯ ಆಗುತ್ತಿತ್ತು. ಈಗ ನನ್ನ ಜೀವನ ಹಾಳಾಯಿತು. ನನ್ನ ಪತ್ನಿಗೆ ನಿನ್ನೆ ಹೆರಿಗೆ ಆಗಿದೆ, ಅವಳಿ ಜವಳಿ ಮಕ್ಕಳು ಜನಿಸಿವೆ. ಮಕ್ಕಳ ಮುಖ ನೋಡಲಾಗಿಲ್ಲ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಗಾಯಾಳು ಶಶಿ ನೋವು ತೋಡಿಕೊಂಡಿದ್ದಾನೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more