ಪಿಂಕಿ ಈಸ್ ಕಿಲ್ಲಿಂಗ್ ಮೀ, ಶೀ ವಾಂಟ್ ಮೈ ಡೆತ್! ಶವದ ಪೆಟ್ಟಿಗೆ ಮೇಲೂ ಪತ್ನಿ ಕಿರುಕುಳದ ಉಲ್ಲೇಖ!

ಪಿಂಕಿ ಈಸ್ ಕಿಲ್ಲಿಂಗ್ ಮೀ, ಶೀ ವಾಂಟ್ ಮೈ ಡೆತ್! ಶವದ ಪೆಟ್ಟಿಗೆ ಮೇಲೂ ಪತ್ನಿ ಕಿರುಕುಳದ ಉಲ್ಲೇಖ!

Published : Jan 29, 2025, 08:46 PM IST

ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಪೀಟರ್, ಪತ್ನಿಯ ನಿರಂತರ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚರ್ಚ್‌ಗೆ ಹೋದ ಸಮಯದಲ್ಲಿ ಮನೆಯಲ್ಲಿದ್ದ ಪೀಟರ್, ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಡೆತ್‌ನೋಟ್‌ನಲ್ಲಿ ಪತ್ನಿಯ ಕಿರುಕುಳದ ಕಹಾನಿ ಬರೆದಿಟ್ಟಿದ್ದಾನೆ.

ಅದು ಕ್ರಿಶ್ಚಿಯನ್​​ ಫ್ಯಾಮಿಲಿ. ಅಪ್ಪ ಅಮ್ಮ. ಮಗ ಸೊಸೆ. ಎಲ್ಲರೂ ಖುಷಿಖುಷಿಯಾಗಿದ್ರು. ಮಗ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ರೆ. ಸೊಸೆ ಟೀಚರ್​​. ದುಡಿದಿದ್ದರಲ್ಲಿ ನೆಮ್ಮದಿಯಾಗಿದ್ರು. ಆದ್ರೆ ಆವತ್ತೊಂದು ದಿನ ಎಲ್ಲರೂ ಚರ್ಚ್​ಗೆ ಹೋಗಿದ್ದಾಗ. ಮನೆಯಲ್ಲಿ ಮಗನೊಬ್ಬನೇ ಇದ್ದ. ಆದ್ರೆ ಚರ್ಚ್​ನಿಂದ ವಾಪಸ್​ ಬಂದು ನೋಡಿದ್ರೆ ಮಗ ನೇಣಿಗೆ ಶರಣಾಗಿದ್ದ. ಒಂದು ಡೆತ್​ನೋಟ್​ ಬರೆದಿಟ್ಟು ಆತ ಪರಲೋಕ ಸೇರಿದ್ದ. ಅದ್ರೆ ಆ ಡೆತ್​ ನೋಟ್​ ನೋಡಿದಾಗಲೇ ನೋಡಿ ಅಲ್ಲಿಗೆ ಬರೋದು ಸೊಸೆಯ ಟಾರ್ಚರ್​ ಕಹನಿ. ಹೆಂಡತಿಯ ಕಾಟಕ್ಕೆ ಗಂಡ ಅಲ್ಲಿ ಪ್ರಾಣಬಿಟ್ಟಿದ್ದ. ಹೀಗೆ ಹೆಂಡತಿಯ ಕಾಟದಿಂದ ಪ್ರಾಣಬಿಟ್ಟ ಮತ್ತೊಬ್ಬ ಗಂಡಸಿನ ಕಥೆಯೇ ಇವತ್ತಿನ ಎಫ್​.ಐ.ಆರ್​​. 

 ಎಲ್ಲರೂ ಪ್ರಾರ್ಥನೆಗಾಗಿ ಚರ್ಚ್​ಗೆ ಹೋಗಿದ್ರೆ ಪೀಟರ್​​. ಸಾವಿನ ಮನೆಗೆ ಎಂಟ್ರಿ ಕೊಟ್ಟಿದ್ದ. ಆದ್ರೆ ಆತ ಸಾಯೋದಕ್ಕೂ ಮೊದಲು ಒಂದು ಡೆತ್​ನೋಟ್​​ ಬರೆದಿಟ್ಟಿದ್ದ. ಅಷ್ಟೇ ಅಲ್ಲ ತನ್ನ ಕೊನೆಯ ಆಸೆಯನ್ನೂ ಹೇಳಿದ್ದ. ಹಾಗಾದ್ರೆ ಆ ಡೆತ್​ನೋಟ್​ನಲ್ಲಿ ಏನಿತ್ತು.. ಏನು ಆ ಗಂಡ ಹೆಂಡತಿ ಜಗಳ? ಹೇಳ್ತೀನಿ ಚಿಕ್ಕ ಬ್ರೇಕ್​ ಆದ್ಮೇಲೆ. 

ಅವರಿಬ್ಬರು ಮದುವೆಯಾಗಿ 2 ವರ್ಷವಾಗಿದೆ ಅಷ್ಟೇ. ಆದ್ರೆ ಜೊತೆಗಿದ್ದಿದ್ದು ಒಂದು ವರ್ಷ ಮಾತ್ರ. ಟೀಚರ್​ ಕೆಲಸ ಮಾಡ್ತಿದ್ದ ಹೆಂಡತಿ ಬೆಳಗ್ಗೆ 8 ಗಂಟೆಗೆ ಮನೆ ಬಿಟ್ರೆ ವಾಪಸ್​​ ಬರ್ತಿದ್ದಿದ್ದು ತಡರಾತ್ರಿ. ಯಾಕಮ್ಮ ಲೇಟು ಅಂತ ಪೀಟರ್​​ ಹೆತ್ತವರು ಕೇಳಿದ್ರೆ ಯಾಕೆ ಟಾರ್ಚರ್​​ ಕೊಡ್ತೀರಾ. ಇದು ನನ್ನ ಪರ್ಸನಲ್​ ಅಂತ ಆವಾಜ್​ ಹಾಕುತ್ತಿದ್ದಳು. ಅಷ್ಟೇ ಅಲ್ಲ ಕೇಸ್​​ ಹಾಕಿಬಿಡ್ತೀನಿ ಅನ್ನೋ ಬೆದರಿಕೆ. ಇಷ್ಟಲ್ಲದೇ ಒಂದು ದಿನ ಎಲ್ಲರೂ ಹೊರಗೆ ಹೋಗಿದ್ದಾಗ ಈ ಹೆಂಡತಿ ಮತ್ತೊಬ್ಬನ ಜೊತೆ ಏಕಾಂತದಲ್ಲಿದ್ದಳು. ಆಗ ಈಕೆ ರೆಡ್​ ಹ್ಯಾಂಡಾಗೇ ತಗ್ಲಾಕಿಕೊಂಡಿದ್ಲು. ಯಾವಾಗ ತನ್ನ ವಿಚಾರ ಗೊತ್ತಾಯ್ತೋ ಆಕೆ ಸೀದಾ ತವರು ಮನೆಗೆ ಹೋಗಿ ಗಂಡನಿಗೆ ಡಿವೋರ್ಸ್​ ನೋಟೀಸ್​​ ಕಳಿಸಿದ್ಲು. ಅಷ್ಟೇ ಅಲ್ಲ ಗಂಡನಿಗೇ 20 ಲಕ್ಷಕ್ಕೆ ಬೇಡಿಕೆ ಇಟ್ಟಳು. ಆಮೇಲೆ ನಡೆದಿದ್ದೆಲ್ಲಾ ಕೇವಲ ಟಾರ್ಚರ್​​ ಅಷ್ಟೇ. 

 ಪೀಟರ್ ಬಲಿಯಾಗೋದಕ್ಕೆ  ಪಿಂಕಿ​ ಕಾರಣಳಾದಳು. ಆದ್ರೆ ಇಲ್ಲೂಸ್ ವಿವಾಹಿತ ಮಹಿಳೆಯರ ಮೇಲಿನ ದೌರ್ಜನ್ಯವನ್ನ ತಡೆಯಲು ಮಾಡಿದ್ದ ಕಾನೂನಗಳ ದುರ್ಬಳಕೆಯಾಗಿದ್ಯಾ ? ಪಿಂಕಿ ಅವನಿಗೆ ಹೇಗೆಲ್ಲಾ ಟಾರ್ಚರ್​​​ ಕೊಟ್ಟಿದ್ಲು ಅನ್ನೋದು ತನಿಖೆಯಿಂದ ಗೊತ್ತಾಗಬೇಕಿದೆ .

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more