ದಸರಾದಲ್ಲಿ ಭಾಗಿಯಾಗಿದ್ದ ಕಲಾವಿದರ ಅಸಮಾಧಾನ: ಸ್ಪರ್ಧೆಯಲ್ಲಿ ಗೆದ್ರೂ ಸಿಗದ ಬಹುಮಾನದ ಮೊತ್ತ !

ದಸರಾದಲ್ಲಿ ಭಾಗಿಯಾಗಿದ್ದ ಕಲಾವಿದರ ಅಸಮಾಧಾನ: ಸ್ಪರ್ಧೆಯಲ್ಲಿ ಗೆದ್ರೂ ಸಿಗದ ಬಹುಮಾನದ ಮೊತ್ತ !

Published : Nov 04, 2023, 10:10 AM IST

ಕಲಾವಿದರ ಹಲವು ಅಪಸ್ವರಗಳ ನಡುವೆ ಆರಂಭವಾದ ಈ ಬಾರಿಯ ದಸರಾ ಮುಕ್ತಾಯವಾದರೂ ಕಲಾವಿದರ ತೊಂದರೆಗಳು ತಪ್ಪಿಲ್ಲ. ದಸರಾ ಸ್ಪರ್ಧೆಯಲ್ಲಿ ಗೆದ್ದ ತಪ್ಪಿಗೆ ಬಹುಮಾನವನ್ನೂ ಪಡೆಯದೆ ದಂಡ ಕಟ್ಟುವ ಪರಿಸ್ಥಿತಿ ಬಂದಿದೆ. 
 

2023 ರ ವಿಶ್ವವಿಖ್ಯಾತ ಮೈಸೂರು ದಸರಾ ಮುಕ್ತಾಯ ಆದರೂ ಕಲಾವಿದರ ಅಸಮಾಧಾನ ನಿಂತಿಲ್ಲ. ದಸರಾ(Mysore dasara) ಆರಂಭದಲ್ಲೇ ಕಲಾವಿದರನ್ನು ಆಹ್ವಾನಿಸಲು ಅಧಿಕಾರಿಗಳು ಕಿಕ್‌ಬ್ಯಾಕ್ ಕೇಳಿದ ಆರೋಪಗಳು ಬಂದಿದ್ದವು. ಈಗ ದಸರಾ ಕಲಾವಿದರಿಗೆ(Artists) ನೀಡಿದ ಬಹುಮಾನದ ಚೆಕ್(Prize Check) ವಾಪಸ್ ಆಗಿದ್ದು, ಇದು ಸ್ಪರ್ಧೆಯಲ್ಲಿ ಗೆದ್ದ ಕಲಾವಿದನ ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರಿನ ಹವ್ಯಾಸಿ ಛಾಯಚಿತ್ರಗಾರ ಎನ್.ಜಿ ಸುಧೀರ್ ದಸರಾ ಲಲಿತ ಕಲೆ ಹಾಗೂ ಕರಕುಶಲ ಉಪಸಮಿತಿ ನಡೆಸಿದ ಛಾಯಾಚಿತ್ರ ಸ್ಪರ್ಧೆಯಲ್ಲಿ ಗೆದ್ದು ಬಹುಮಾನ ಪಡೆದಿದ್ದರು. ಬಹುಮಾನವಾಗಿ 7 ಸಾವಿರ ರೂ ಚೆಕ್ ನೀಡಲಾಗಿತ್ತು‌. ಅಕ್ಟೋಬರ್ 26 ರಂದು ಚೆಕ್ ನೀಡಲಾಗಿದ್ದು, 27 ರಂದು ಸುಧೀರ್ ಬ್ಯಾಂಕ್ಗೆ ಚೆಕ್ನ್ನು ಹಾಜರುಪಡಿಸಿದ್ರು. ಆದ್ರೆ ಅದೇ ಚೆಕ್ ಅಕ್ಟೋಬರ್ 30 ರಂದು ವಾಪಸ್ ಆಗಿದೆ. ವಾಪಸ್ ಆಗುವ ವೇಳೆ ಸುಧೀರ್ ಅಕೌಂಟ್ ನಿಂದ 118 ರುಪಾಯಿ ಕಟ್ ಮಾಡಲಾಗಿದೆ. ಎಲ್ಲಾ ಬೆಳವಣಿಗೆಯನ್ನು ಸುಧೀರ ಅವರು ನಮ್ಮ ಪ್ರತಿನಿಧಿ ಮಧು ಬಳಿ ವಿವರವಾಗಿ ವಿವರಿಸಿದ್ದಾರೆ ಕೇಳಿ. ಇನ್ನು ಚೆಕ್ ವಾಪಸ್ಸಾದ ಪ್ರಕರಣದ ಬಗ್ಗೆ ಸ್ಪಷ್ಟನೆ ಕೇಳಲು ಲಲಿತ ಕಲೆ ಹಾಗೂ ಕರಕುಶಲ ಉಪ ಸಮಿತಿ ಕಾರ್ಯದರ್ಶಿಯನ್ನು ಸಂಪರ್ಕಿಸುವ ಪ್ರಯತ್ನವೂ ನಡೆಯಿತು. ಆದರೆ ಅಧಿಕಾರಿ ಸಂಪರ್ಕಕ್ಕೆ ಸಿಗಲೇ ಇಲ್ಲ. ಬಹುಮಾನ ಬಂದರೂ ಬಹುಮಾನದ ಮೊತ್ತ ಮಾತ್ರ ಸಿಗಲೇ ಇಲ್ಲ. 

ಇದನ್ನೂ ವೀಕ್ಷಿಸಿ:  ಕಮಲ್ ಹುಟ್ಟುಹಬ್ಬಕ್ಕೆ ಇಂಡಿಯನ್ 2 ಗ್ಲಿಂಪ್ಸ್ ಉಡುಗೊರೆ: ‘ಸಕಲಕಲಾವಲ್ಲಭ’ನ ಜೊತೆಗೆ ಕನ್ನಡಿಗ ಸುದೀಪ್..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?