ದಸರಾದಲ್ಲಿ ಭಾಗಿಯಾಗಿದ್ದ ಕಲಾವಿದರ ಅಸಮಾಧಾನ: ಸ್ಪರ್ಧೆಯಲ್ಲಿ ಗೆದ್ರೂ ಸಿಗದ ಬಹುಮಾನದ ಮೊತ್ತ !

ದಸರಾದಲ್ಲಿ ಭಾಗಿಯಾಗಿದ್ದ ಕಲಾವಿದರ ಅಸಮಾಧಾನ: ಸ್ಪರ್ಧೆಯಲ್ಲಿ ಗೆದ್ರೂ ಸಿಗದ ಬಹುಮಾನದ ಮೊತ್ತ !

Published : Nov 04, 2023, 10:10 AM IST

ಕಲಾವಿದರ ಹಲವು ಅಪಸ್ವರಗಳ ನಡುವೆ ಆರಂಭವಾದ ಈ ಬಾರಿಯ ದಸರಾ ಮುಕ್ತಾಯವಾದರೂ ಕಲಾವಿದರ ತೊಂದರೆಗಳು ತಪ್ಪಿಲ್ಲ. ದಸರಾ ಸ್ಪರ್ಧೆಯಲ್ಲಿ ಗೆದ್ದ ತಪ್ಪಿಗೆ ಬಹುಮಾನವನ್ನೂ ಪಡೆಯದೆ ದಂಡ ಕಟ್ಟುವ ಪರಿಸ್ಥಿತಿ ಬಂದಿದೆ. 
 

2023 ರ ವಿಶ್ವವಿಖ್ಯಾತ ಮೈಸೂರು ದಸರಾ ಮುಕ್ತಾಯ ಆದರೂ ಕಲಾವಿದರ ಅಸಮಾಧಾನ ನಿಂತಿಲ್ಲ. ದಸರಾ(Mysore dasara) ಆರಂಭದಲ್ಲೇ ಕಲಾವಿದರನ್ನು ಆಹ್ವಾನಿಸಲು ಅಧಿಕಾರಿಗಳು ಕಿಕ್‌ಬ್ಯಾಕ್ ಕೇಳಿದ ಆರೋಪಗಳು ಬಂದಿದ್ದವು. ಈಗ ದಸರಾ ಕಲಾವಿದರಿಗೆ(Artists) ನೀಡಿದ ಬಹುಮಾನದ ಚೆಕ್(Prize Check) ವಾಪಸ್ ಆಗಿದ್ದು, ಇದು ಸ್ಪರ್ಧೆಯಲ್ಲಿ ಗೆದ್ದ ಕಲಾವಿದನ ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರಿನ ಹವ್ಯಾಸಿ ಛಾಯಚಿತ್ರಗಾರ ಎನ್.ಜಿ ಸುಧೀರ್ ದಸರಾ ಲಲಿತ ಕಲೆ ಹಾಗೂ ಕರಕುಶಲ ಉಪಸಮಿತಿ ನಡೆಸಿದ ಛಾಯಾಚಿತ್ರ ಸ್ಪರ್ಧೆಯಲ್ಲಿ ಗೆದ್ದು ಬಹುಮಾನ ಪಡೆದಿದ್ದರು. ಬಹುಮಾನವಾಗಿ 7 ಸಾವಿರ ರೂ ಚೆಕ್ ನೀಡಲಾಗಿತ್ತು‌. ಅಕ್ಟೋಬರ್ 26 ರಂದು ಚೆಕ್ ನೀಡಲಾಗಿದ್ದು, 27 ರಂದು ಸುಧೀರ್ ಬ್ಯಾಂಕ್ಗೆ ಚೆಕ್ನ್ನು ಹಾಜರುಪಡಿಸಿದ್ರು. ಆದ್ರೆ ಅದೇ ಚೆಕ್ ಅಕ್ಟೋಬರ್ 30 ರಂದು ವಾಪಸ್ ಆಗಿದೆ. ವಾಪಸ್ ಆಗುವ ವೇಳೆ ಸುಧೀರ್ ಅಕೌಂಟ್ ನಿಂದ 118 ರುಪಾಯಿ ಕಟ್ ಮಾಡಲಾಗಿದೆ. ಎಲ್ಲಾ ಬೆಳವಣಿಗೆಯನ್ನು ಸುಧೀರ ಅವರು ನಮ್ಮ ಪ್ರತಿನಿಧಿ ಮಧು ಬಳಿ ವಿವರವಾಗಿ ವಿವರಿಸಿದ್ದಾರೆ ಕೇಳಿ. ಇನ್ನು ಚೆಕ್ ವಾಪಸ್ಸಾದ ಪ್ರಕರಣದ ಬಗ್ಗೆ ಸ್ಪಷ್ಟನೆ ಕೇಳಲು ಲಲಿತ ಕಲೆ ಹಾಗೂ ಕರಕುಶಲ ಉಪ ಸಮಿತಿ ಕಾರ್ಯದರ್ಶಿಯನ್ನು ಸಂಪರ್ಕಿಸುವ ಪ್ರಯತ್ನವೂ ನಡೆಯಿತು. ಆದರೆ ಅಧಿಕಾರಿ ಸಂಪರ್ಕಕ್ಕೆ ಸಿಗಲೇ ಇಲ್ಲ. ಬಹುಮಾನ ಬಂದರೂ ಬಹುಮಾನದ ಮೊತ್ತ ಮಾತ್ರ ಸಿಗಲೇ ಇಲ್ಲ. 

ಇದನ್ನೂ ವೀಕ್ಷಿಸಿ:  ಕಮಲ್ ಹುಟ್ಟುಹಬ್ಬಕ್ಕೆ ಇಂಡಿಯನ್ 2 ಗ್ಲಿಂಪ್ಸ್ ಉಡುಗೊರೆ: ‘ಸಕಲಕಲಾವಲ್ಲಭ’ನ ಜೊತೆಗೆ ಕನ್ನಡಿಗ ಸುದೀಪ್..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?