Uttara Kannada: ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿರುವ ಚಿಟ್ಟೆ ಪಾರ್ಕ್..!

Uttara Kannada: ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿರುವ ಚಿಟ್ಟೆ ಪಾರ್ಕ್..!

Suvarna News   | Asianet News
Published : Feb 01, 2022, 11:47 AM IST

*  ಬಣ್ಣ ಬಣ್ಣದ ಚಿಟ್ಟೆಗಳ ಹಾಗೂ ಇತರ ಜೀವಿಗಳ ಪಾಲಿಗೆ ಸ್ವಚ್ಛಂದ ವಾಸಸ್ಥಾನ
*  ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಚಿಟ್ಟೆಗಳಿಗೋಸ್ಕರವೇ  ಪಾರ್ಕ್ ನಿರ್ಮಾಣ 
*  ಅರಣ್ಯ ಇಲಾಖೆ ಹಾಗೂ ಎನ್‌ಪಿಸಿಐಎಲ್ ಕೈಗಾದ ಸಿಎಸ್ಆರ್ ಅನುದಾನ
 

ಕಾರವಾರ(ಫೆ.01):  ಒಂದೆಡೆ ಹೆಕ್ಟೇರ್‌ಗೂ ಹೆಚ್ಚು ವಿಸ್ತಾರವಾದ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಗಾರ್ಡನ್. ಇನ್ನೊಂದೆಡೆ ಪಟ ಪಟನೇ ರೆಕ್ಕೆ ಬಡಿಯುತ್ತಾ ಹೂವಿಂದ ಹೂವಿಗೆ ಹಾರಿ ಮಕರಂದ ಹೀರುತ್ತಿರುವ ಪತಂಗಗಳು. ಮತ್ತೊಂದೆಡೆ ಈ ಸುಂದರ ಚಿಟ್ಟೆಗಳ ಹಾರಾಟ ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋಟೆಗಾಳಿಯಲ್ಲಿ.

ಹೌದು, ಅರಣ್ಯ ಇಲಾಖೆ ಹಾಗೂ ಎನ್‌ಪಿಸಿಐಎಲ್ ಕೈಗಾದ ಸಿಎಸ್ಆರ್ ಅನುದಾನದಲ್ಲಿ ಸುಮಾರು ಒಂದು ಹೆಕ್ಟೇರ್ ಪ್ರದೇಶದಲ್ಲಿ ಚಿಟ್ಟೆಗಳಿಗಾಗಿಯೇ ಚಿಟ್ಟೆ ಪಾರ್ಕ್ ನಿರ್ಮಾಣ ಮಾಡಲಾಗಿದ್ದು, ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಸಮೃದ್ಧವಾಗಿರುವ ಪರಿಸರದಲ್ಲಿ ಹೇರಳವಾಗಿರುವ ಚಿಟ್ಟೆಗಳಿಗೆ ಉತ್ತಮ ವಾಸಸ್ಥಾನ ಕಲ್ಪಿಸುವ ಹಾಗೂ ಅವುಗಳಿಗೆ ಪೂರಕವಾದ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ, ಗಾರ್ಡನ್ ನಲ್ಲಿ ಚಿಟ್ಟೆಗಳ ಪ್ರಮುಖ ಆಹಾರ ಸಸ್ಯಗಳಾದ ತೇರಿನ ಹೂವು, ಪೆಂಟಾಸ್, ಮಿಲ್ಕ್ ಫೀಡ್, ಗೊಂಡೆ  ಸೇರಿದಂತೆ 20ಕ್ಕೂ ಅಧಿಕ ಬಗೆಯ ಹೂವಿನ ಗಿಡಗಳನ್ನು ಬೆಳೆಸಲಾಗಿದೆ. ಹೀಗಾಗಿ, ಪ್ರಮುಖ ಚಿಟ್ಟೆ ಪ್ರಭೇದಗಳಾದ ಆ್ಯಂಗ್ಲೆಡ್ ಪಿರೋಟ್, ಗ್ರೇ ಕೌಂಟ್, ಪಿಕೋಕ್ ಫೆನ್ಸಿ, ಗ್ರೇ ಫೆನ್ಸಿ, ಎಲ್ಲೋ ಫೆನ್ಸಿ, ಕ್ಲೇನ್ ಟೈಗರ್, ಸ್ಟ್ರೈಲ್ ಟೈಗರ್, ಸ್ಟ್ರೈಪ್ಡ್ ಬ್ಲ್ಯೂನಂತಹ ಅನೇಕ ಜಾತಿಯ ಚಿಟ್ಟೆಗಳು ಇಲ್ಲಿ ಕಾಣಿಸಿಕೊಳ್ಳುತ್ತಿದೆ. ಈ ಭಾಗದಲ್ಲಿ ಉತ್ತಮ ವಾತಾವರಣ ಇರುವ ಕಾರಣ ಇದೆಲ್ಲವೂ ಸಾಧ್ಯವಾಗಿದೆ ಎನ್ನುತ್ತಾರೆ ಅಧಿಕಾರಿಗಳು. 

Bidar: ಮೈಲಾರ ಮಲ್ಲಣ್ಣ ದೇವಸ್ಥಾನದ ಅಭಿವೃದ್ಧಿಗೆ ಅಧಿಕಾರಿಗಳೇ ಕಂಟಕ..!

ಕಾರವಾರ- ಬೆಳಗಾವಿ ರಾಜ್ಯ ಹೆದ್ದಾರಿ ಸಾಗುವ ಗೊಟೆಗಾಳಿ ಬಳಿ ಈ ಚಿಟ್ಟೆ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಈ ಹಿಂದೆ ಈ ಪ್ರದೇಶ ಗಿಡಗಂಟಿಗಳಿಂದ ತುಂಬಿದ್ದ ಪಾಳು ಬಿದ್ದ ಪ್ರದೇಶವಾಗಿತ್ತು. ಆದರೆ ಇದೀಗ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಚಿಟ್ಟೆಗಳಿಗೋಸ್ಕರವೇ ಇಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ, ಜನರು ಈ ಸೊಬಗನ್ನು ಸವಿಯಲೂ ಅನುಕೂಲವಾಗುವಂತೆ ವಾಕಿಂಗ್ ಪಾಥ್, ಕುಳಿತುಕೊಳ್ಳಲು ಆಸನ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪಾರ್ಕ್ ಗೆ ಸ್ಥಳೀಯರು ಮಾತ್ರವಲ್ಲದೇ, ಪ್ರವಾಸಿಗರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇನ್ನು ಚಿಟ್ಟೆಗಳು ಹೇರಳವಾಗಿರುವ ಈ ಪ್ರದೇಶದಲ್ಲಿ ಇದೀಗ ಪಾರ್ಕ್ ನಿರ್ಮಾಣದಿಂದ ಅವುಗಳಿಗೆ ಒಂದಿಷ್ಟು ಅನುಕೂಲವಾಗಲಿದೆ. ಅವುಗಳ ಸಂತಾನೋತ್ಪತ್ತಿ, ಆಹಾರ ಕ್ರಮ ಇದರಿಂದ ಸಹಕಾರಿಯಾಗುವ ಭರವಸೆ ಇದೆ. ಅಲ್ಲದೇ, ಕಾಡುಗಳು ಆರೋಗ್ಯವಾಗಿದ್ದರೇ ಚಿಟ್ಟೆಗಳು ಹೇರಳವಾಗಿರುತ್ತವೆ ಎನ್ನುತ್ತಾರೆ ಚಿಟ್ಟೆಗಳ ಕುರಿತು ಸಂಶೋಧನೆ ನಡೆಸಿದವರು. 

ಒಟ್ಟಿನಲ್ಲಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಿರ್ಮಾಣಗೊಂಡಿರುವ ಚಿಟ್ಟೆ ಪಾರ್ಕ್ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಹೆದ್ದಾರಿ ಪಕ್ಕದಲ್ಲಿಯೇ ಪಾರ್ಕ್ ಇರುವ ಕಾರಣ ನೋಡುಗರಿಗೆ ಹೆಚ್ಚು ಅನುಕೂಲಕರವಾಗಿದ್ದು, ರಾಜ್ಯ ಹಾಗೂ ಹೊರ ರಾಜ್ಯದ ಜನರು ಕೂಡಾ ಆರಾಮವಾಗಿ ಈ ಸ್ಥಳಕ್ಕೆ ಭೇಟಿ ನೀಡಿ ಸಮಯ ಕಳೆದು ಪ್ರಕೃತಿಯ ಸೊಬಗು ಅನುಭವಿಸಬಹುದಾಗಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more