News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!

News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!

Published : Aug 09, 2025, 03:40 PM IST
ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿ ಹೊಸ ಸ್ಥಳಗಳಲ್ಲಿ ಶೋಧ ಮುಂದುವರಿಸಿದೆ. ಜಿಪಿಆರ್ ತಂತ್ರಜ್ಞಾನ ಬಳಸಲು ನಿರ್ಧರಿಸಿದ್ದು, ಉಪ್ಪಿನ ಮೂಟೆಗಳ ಬಳಕೆ ಕುತೂಹಲ ಮೂಡಿಸಿದೆ. ಅಸ್ಥಿಪಂಜರದ ಡಿಎನ್‌ಎ ವರದಿಗಾಗಿ ಕಾಯಲಾಗುತ್ತಿದೆ.

ಮಂಗಳೂರು (ಆ,9): ಧರ್ಮಸ್ಥಳ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ, ನಿಗೂಢ ಹೆಜ್ಜೆಗಳನ್ನು ಇಡುತ್ತಿದ್ದು, ಹೊಸ ಸ್ಥಳಗಳಲ್ಲಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖವಾಗಿ, ಬೆಂಗಳೂರಿನಿಂದ ಜಿಪಿಆರ್ (Ground Penetrating Radar) ತಂತ್ರಜ್ಞಾನವನ್ನು ತರಿಸಲು ನಿರ್ಧರಿಸಿದೆ. ಇದು ಅತ್ಯಂತ ದುಬಾರಿ ತಂತ್ರಜ್ಞಾನವಾಗಿದ್ದು, ಮಳೆಗಾಲದ ಕಾರಣ ಜೌಗು ಪ್ರದೇಶಗಳಲ್ಲಿ ಇದರ ಬಳಕೆಗೆ ಸವಾಲು ಎದುರಾಗಬಹುದು ಎನ್ನಲಾಗಿದೆ.

ಇತ್ತ, 14ನೇ ಸ್ಪಾಟ್‌ನಲ್ಲಿ ಸಿಕ್ಕಿದ ಅಸ್ಥಿಪಂಜರದ ಕುರಿತು ತನಿಖೆ ಚುರುಕುಗೊಂಡಿದ್ದು, ಡಿಎನ್‌ಎ ವರದಿಗಾಗಿ ಕಾಯಲಾಗುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳದಿಂದ 2 ಕಿ.ಮೀ ದೂರದಲ್ಲಿರುವ ಬೊಳಿಯಾರ್ ಅರಣ್ಯ ಪ್ರದೇಶದ 15ನೇ ಪಾಯಿಂಟ್‌ನಲ್ಲಿ ಎಸ್‌ಐಟಿ ಶೋಧ ನಡೆಸುತ್ತಿದೆ. ಈ ಪ್ರದೇಶದಲ್ಲಿ 1986ರಲ್ಲಿ ಕೊಲೆಯಾದ ಪದ್ಮಲತಾ ಅಥವಾ 2010ರಲ್ಲಿ ಅತ್ಯಾಚಾರಕ್ಕೊಳಗಾದ ಶಾಲಾ ಬಾಲಕಿಯ ಮೃತದೇಹ ಹೂತಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಶೋಧ ಕಾರ್ಯಕ್ಕಾಗಿ ಎಸ್‌ಐಟಿ ಉಪ್ಪಿನ ಮೂಟೆಗಳನ್ನು ಬಳಸುತ್ತಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಮೂಲಕ, ಹೊಸ ಸುಳಿವುಗಳ ಆಧಾರದ ಮೇಲೆ ಎಸ್‌ಐಟಿ ತನ್ನ ತನಿಖೆಯನ್ನು ನಿಗೂಢವಾಗಿ ಮುಂದುವರಿಸಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more