News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!

News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!

Published : Aug 09, 2025, 03:40 PM IST
ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿ ಹೊಸ ಸ್ಥಳಗಳಲ್ಲಿ ಶೋಧ ಮುಂದುವರಿಸಿದೆ. ಜಿಪಿಆರ್ ತಂತ್ರಜ್ಞಾನ ಬಳಸಲು ನಿರ್ಧರಿಸಿದ್ದು, ಉಪ್ಪಿನ ಮೂಟೆಗಳ ಬಳಕೆ ಕುತೂಹಲ ಮೂಡಿಸಿದೆ. ಅಸ್ಥಿಪಂಜರದ ಡಿಎನ್‌ಎ ವರದಿಗಾಗಿ ಕಾಯಲಾಗುತ್ತಿದೆ.

ಮಂಗಳೂರು (ಆ,9): ಧರ್ಮಸ್ಥಳ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ, ನಿಗೂಢ ಹೆಜ್ಜೆಗಳನ್ನು ಇಡುತ್ತಿದ್ದು, ಹೊಸ ಸ್ಥಳಗಳಲ್ಲಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖವಾಗಿ, ಬೆಂಗಳೂರಿನಿಂದ ಜಿಪಿಆರ್ (Ground Penetrating Radar) ತಂತ್ರಜ್ಞಾನವನ್ನು ತರಿಸಲು ನಿರ್ಧರಿಸಿದೆ. ಇದು ಅತ್ಯಂತ ದುಬಾರಿ ತಂತ್ರಜ್ಞಾನವಾಗಿದ್ದು, ಮಳೆಗಾಲದ ಕಾರಣ ಜೌಗು ಪ್ರದೇಶಗಳಲ್ಲಿ ಇದರ ಬಳಕೆಗೆ ಸವಾಲು ಎದುರಾಗಬಹುದು ಎನ್ನಲಾಗಿದೆ.

ಇತ್ತ, 14ನೇ ಸ್ಪಾಟ್‌ನಲ್ಲಿ ಸಿಕ್ಕಿದ ಅಸ್ಥಿಪಂಜರದ ಕುರಿತು ತನಿಖೆ ಚುರುಕುಗೊಂಡಿದ್ದು, ಡಿಎನ್‌ಎ ವರದಿಗಾಗಿ ಕಾಯಲಾಗುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳದಿಂದ 2 ಕಿ.ಮೀ ದೂರದಲ್ಲಿರುವ ಬೊಳಿಯಾರ್ ಅರಣ್ಯ ಪ್ರದೇಶದ 15ನೇ ಪಾಯಿಂಟ್‌ನಲ್ಲಿ ಎಸ್‌ಐಟಿ ಶೋಧ ನಡೆಸುತ್ತಿದೆ. ಈ ಪ್ರದೇಶದಲ್ಲಿ 1986ರಲ್ಲಿ ಕೊಲೆಯಾದ ಪದ್ಮಲತಾ ಅಥವಾ 2010ರಲ್ಲಿ ಅತ್ಯಾಚಾರಕ್ಕೊಳಗಾದ ಶಾಲಾ ಬಾಲಕಿಯ ಮೃತದೇಹ ಹೂತಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಶೋಧ ಕಾರ್ಯಕ್ಕಾಗಿ ಎಸ್‌ಐಟಿ ಉಪ್ಪಿನ ಮೂಟೆಗಳನ್ನು ಬಳಸುತ್ತಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಮೂಲಕ, ಹೊಸ ಸುಳಿವುಗಳ ಆಧಾರದ ಮೇಲೆ ಎಸ್‌ಐಟಿ ತನ್ನ ತನಿಖೆಯನ್ನು ನಿಗೂಢವಾಗಿ ಮುಂದುವರಿಸಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more