ಕರಗ ಮಹೋತ್ಸವ: ನಿಖಿಲ್‌ಗೆ ಗರ್ಭಗುಡಿ ಪ್ರವೇಶ ನಿಷೇಧ, ನೆಟ್ಟಿಗರ ಆಕ್ರೋಶ

ಕರಗ ಮಹೋತ್ಸವ: ನಿಖಿಲ್‌ಗೆ ಗರ್ಭಗುಡಿ ಪ್ರವೇಶ ನಿಷೇಧ, ನೆಟ್ಟಿಗರ ಆಕ್ರೋಶ

Published : Apr 27, 2022, 02:42 PM ISTUpdated : Apr 27, 2022, 02:49 PM IST

 ಹೊರವಲಯದ ಆನೇಕಲ್ ( Anekal) ತಾಲೂಕಿನ ಮಾಯಸಂದ್ರದಲ್ಲಿ ಇದೇ ತಿಂಗಳ 14 ರಂದು ಕರಗ ಮಹೋತ್ಸವ (Karaga Mahothsava)ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗಮಿಸಿದ್ದರು. 

ಬೆಂಗಳೂರು (ಏ.27): ಹೊರವಲಯದ ಆನೇಕಲ್ ( Anekal) ತಾಲೂಕಿನ ಮಾಯಸಂದ್ರದಲ್ಲಿ ಇದೇ ತಿಂಗಳ 14 ರಂದು ಕರಗ ಮಹೋತ್ಸವ (Karaga Mahothsava)ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗಮಿಸಿದ್ದರು. ಈ ವೇಳೆ, ನಿಖಿಲ್ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ದರ್ಶನಕ್ಕೆ ತೆರಳಿದ್ದಾಗ ಗರ್ಭಗುಡಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದು ಚರ್ಚೆಗೆ ಗ್ರಾಸವಾಗಿದೆ. 

ಮಾತ್ರವಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಗರ್ಭಗುಡಿ ಪ್ರವೇಶಕ್ಕೆ ನಿಖಿಲ್ ಕುಮಾರಸ್ವಾಮಿಗೆ ನಿರ್ಬಂಧಿಸುವ ವಿಡಿಯೋ ವೈರಲ್ (Video Viral) ಆಗಿದ್ದು, ನೆಟ್ಟಿಗರು ಆಕ್ರೋಶ ಸಹ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಕರಗದಲ್ಲಿ ಇಲ್ಲದ ಸಂಪ್ರದಾಯ ಇಲ್ಲಿ ಏನು ಎಂದು ನೆಟ್ಟಿಗರು (Netizens) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಧರ್ಮರಾಯಸ್ವಾಮಿ ದರ್ಶನಕ್ಕೆ ತೆರಳಿದ್ದ ವೇಳೆ ನಿಖಿಲ್ ಕುಮಾರ್ ಸ್ವಾಮಿಯವರು ಒಳಗೆ  ಹೋಗಬಹುದಾ ಎಂದು ಕಾರ್ಯಕರ್ತರನ್ನು ಪ್ರಶ್ನಿಸುತ್ತಾರೆ.  ಈ ವೇಳೆ ಇಲ್ಲ ಸರ್ ಅಲ್ಲಿಗೆ ಹೋಗುವ ಹಾಗಿಲ್ಲ ಎಂದು ತಿಳಿಸಿದ್ದಾರೆ. ಕೊನೆಗೆ ಗರ್ಭಗುಡಿ ಹೊರಭಾಗದಲ್ಲಿ ನಿಲ್ಲಿಸಿ ಮಂಗಳಾರತಿ ನೀಡಿದ್ದು,  ಗರ್ಭಗುಡಿ ಹೊಸ್ತಿಲಲ್ಲಿ ನಿಂತು ಮಂಗಳಾರತಿ ಪಡೆದು , ಕಾಣಿಕೆ ಹಾಕಿ ದೇವರಿಗೆ ನಮಸ್ಕರಿಸಿ ನಿಖಿಲ್ ಕುಮಾರಸ್ವಾಮಿ ಹೊರ ನಡೆದಿದ್ದಾರೆ. 

ಇನ್ನೂ ಇಲ್ಲಿನ ಸ್ಥಳೀಯರ ಮಾಹಿತಿ ಪ್ರಕಾರ ಕರಗ ಮಹೋತ್ಸವ ನಡೆಸುವ ವಹ್ನಿಕುಲಸ್ಥರು ಬಿಟ್ಟು ಬೇರೆ ಸಮುದಾಯಕ್ಕೆ ಧರ್ಮರಾಯಸ್ವಾಮಿ ದೇವಾಲಯ ಗರ್ಭಗುಡಿ ಪ್ರವೇಶಕ್ಕೆ ನಿರ್ಬಂಧವಿದ್ದು,  ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ ಎನ್ನುತ್ತಾರೆ. ಇನ್ನೂ ಈ  ಹಿಂದೆ ಸಹ ಮಾಜಿ ಸಚಿವ ರಾಮಲಿಂಗಾರೆಡ್ಡಿಯರಿಗೂ ಸಹ ಇದೆ ರೀತಿ ಧರ್ಮರಾಯಸ್ವಾಮಿ ದೇವಾಲಯ ಗರ್ಭಗುಡಿ ಪ್ರವೇಶಕ್ಕೆ ಅವಕಾಶ ನೀಡಿರಲಿಲ್ಲ. ಅಂದು ಸಹ ಸ್ಥಳೀಯ ಸಂಪ್ರದಾಯ ಗೌರವಿಸಿ ದೇವರ ದರ್ಶನ ಪಡೆದು ವಾಪಸ್ಸಾಗಿದ್ದರು ಎನ್ನಲಾಗಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more