ಕರಗ ಮಹೋತ್ಸವ: ನಿಖಿಲ್‌ಗೆ ಗರ್ಭಗುಡಿ ಪ್ರವೇಶ ನಿಷೇಧ, ನೆಟ್ಟಿಗರ ಆಕ್ರೋಶ

ಕರಗ ಮಹೋತ್ಸವ: ನಿಖಿಲ್‌ಗೆ ಗರ್ಭಗುಡಿ ಪ್ರವೇಶ ನಿಷೇಧ, ನೆಟ್ಟಿಗರ ಆಕ್ರೋಶ

Published : Apr 27, 2022, 02:42 PM ISTUpdated : Apr 27, 2022, 02:49 PM IST

 ಹೊರವಲಯದ ಆನೇಕಲ್ ( Anekal) ತಾಲೂಕಿನ ಮಾಯಸಂದ್ರದಲ್ಲಿ ಇದೇ ತಿಂಗಳ 14 ರಂದು ಕರಗ ಮಹೋತ್ಸವ (Karaga Mahothsava)ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗಮಿಸಿದ್ದರು. 

ಬೆಂಗಳೂರು (ಏ.27): ಹೊರವಲಯದ ಆನೇಕಲ್ ( Anekal) ತಾಲೂಕಿನ ಮಾಯಸಂದ್ರದಲ್ಲಿ ಇದೇ ತಿಂಗಳ 14 ರಂದು ಕರಗ ಮಹೋತ್ಸವ (Karaga Mahothsava)ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗಮಿಸಿದ್ದರು. ಈ ವೇಳೆ, ನಿಖಿಲ್ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ದರ್ಶನಕ್ಕೆ ತೆರಳಿದ್ದಾಗ ಗರ್ಭಗುಡಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದು ಚರ್ಚೆಗೆ ಗ್ರಾಸವಾಗಿದೆ. 

ಮಾತ್ರವಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಗರ್ಭಗುಡಿ ಪ್ರವೇಶಕ್ಕೆ ನಿಖಿಲ್ ಕುಮಾರಸ್ವಾಮಿಗೆ ನಿರ್ಬಂಧಿಸುವ ವಿಡಿಯೋ ವೈರಲ್ (Video Viral) ಆಗಿದ್ದು, ನೆಟ್ಟಿಗರು ಆಕ್ರೋಶ ಸಹ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಕರಗದಲ್ಲಿ ಇಲ್ಲದ ಸಂಪ್ರದಾಯ ಇಲ್ಲಿ ಏನು ಎಂದು ನೆಟ್ಟಿಗರು (Netizens) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಧರ್ಮರಾಯಸ್ವಾಮಿ ದರ್ಶನಕ್ಕೆ ತೆರಳಿದ್ದ ವೇಳೆ ನಿಖಿಲ್ ಕುಮಾರ್ ಸ್ವಾಮಿಯವರು ಒಳಗೆ  ಹೋಗಬಹುದಾ ಎಂದು ಕಾರ್ಯಕರ್ತರನ್ನು ಪ್ರಶ್ನಿಸುತ್ತಾರೆ.  ಈ ವೇಳೆ ಇಲ್ಲ ಸರ್ ಅಲ್ಲಿಗೆ ಹೋಗುವ ಹಾಗಿಲ್ಲ ಎಂದು ತಿಳಿಸಿದ್ದಾರೆ. ಕೊನೆಗೆ ಗರ್ಭಗುಡಿ ಹೊರಭಾಗದಲ್ಲಿ ನಿಲ್ಲಿಸಿ ಮಂಗಳಾರತಿ ನೀಡಿದ್ದು,  ಗರ್ಭಗುಡಿ ಹೊಸ್ತಿಲಲ್ಲಿ ನಿಂತು ಮಂಗಳಾರತಿ ಪಡೆದು , ಕಾಣಿಕೆ ಹಾಕಿ ದೇವರಿಗೆ ನಮಸ್ಕರಿಸಿ ನಿಖಿಲ್ ಕುಮಾರಸ್ವಾಮಿ ಹೊರ ನಡೆದಿದ್ದಾರೆ. 

ಇನ್ನೂ ಇಲ್ಲಿನ ಸ್ಥಳೀಯರ ಮಾಹಿತಿ ಪ್ರಕಾರ ಕರಗ ಮಹೋತ್ಸವ ನಡೆಸುವ ವಹ್ನಿಕುಲಸ್ಥರು ಬಿಟ್ಟು ಬೇರೆ ಸಮುದಾಯಕ್ಕೆ ಧರ್ಮರಾಯಸ್ವಾಮಿ ದೇವಾಲಯ ಗರ್ಭಗುಡಿ ಪ್ರವೇಶಕ್ಕೆ ನಿರ್ಬಂಧವಿದ್ದು,  ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ ಎನ್ನುತ್ತಾರೆ. ಇನ್ನೂ ಈ  ಹಿಂದೆ ಸಹ ಮಾಜಿ ಸಚಿವ ರಾಮಲಿಂಗಾರೆಡ್ಡಿಯರಿಗೂ ಸಹ ಇದೆ ರೀತಿ ಧರ್ಮರಾಯಸ್ವಾಮಿ ದೇವಾಲಯ ಗರ್ಭಗುಡಿ ಪ್ರವೇಶಕ್ಕೆ ಅವಕಾಶ ನೀಡಿರಲಿಲ್ಲ. ಅಂದು ಸಹ ಸ್ಥಳೀಯ ಸಂಪ್ರದಾಯ ಗೌರವಿಸಿ ದೇವರ ದರ್ಶನ ಪಡೆದು ವಾಪಸ್ಸಾಗಿದ್ದರು ಎನ್ನಲಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more