ಕರಗ ಮಹೋತ್ಸವ: ನಿಖಿಲ್‌ಗೆ ಗರ್ಭಗುಡಿ ಪ್ರವೇಶ ನಿಷೇಧ, ನೆಟ್ಟಿಗರ ಆಕ್ರೋಶ

ಕರಗ ಮಹೋತ್ಸವ: ನಿಖಿಲ್‌ಗೆ ಗರ್ಭಗುಡಿ ಪ್ರವೇಶ ನಿಷೇಧ, ನೆಟ್ಟಿಗರ ಆಕ್ರೋಶ

Published : Apr 27, 2022, 02:42 PM ISTUpdated : Apr 27, 2022, 02:49 PM IST

 ಹೊರವಲಯದ ಆನೇಕಲ್ ( Anekal) ತಾಲೂಕಿನ ಮಾಯಸಂದ್ರದಲ್ಲಿ ಇದೇ ತಿಂಗಳ 14 ರಂದು ಕರಗ ಮಹೋತ್ಸವ (Karaga Mahothsava)ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗಮಿಸಿದ್ದರು. 

ಬೆಂಗಳೂರು (ಏ.27): ಹೊರವಲಯದ ಆನೇಕಲ್ ( Anekal) ತಾಲೂಕಿನ ಮಾಯಸಂದ್ರದಲ್ಲಿ ಇದೇ ತಿಂಗಳ 14 ರಂದು ಕರಗ ಮಹೋತ್ಸವ (Karaga Mahothsava)ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗಮಿಸಿದ್ದರು. ಈ ವೇಳೆ, ನಿಖಿಲ್ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ದರ್ಶನಕ್ಕೆ ತೆರಳಿದ್ದಾಗ ಗರ್ಭಗುಡಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದು ಚರ್ಚೆಗೆ ಗ್ರಾಸವಾಗಿದೆ. 

ಮಾತ್ರವಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಗರ್ಭಗುಡಿ ಪ್ರವೇಶಕ್ಕೆ ನಿಖಿಲ್ ಕುಮಾರಸ್ವಾಮಿಗೆ ನಿರ್ಬಂಧಿಸುವ ವಿಡಿಯೋ ವೈರಲ್ (Video Viral) ಆಗಿದ್ದು, ನೆಟ್ಟಿಗರು ಆಕ್ರೋಶ ಸಹ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಕರಗದಲ್ಲಿ ಇಲ್ಲದ ಸಂಪ್ರದಾಯ ಇಲ್ಲಿ ಏನು ಎಂದು ನೆಟ್ಟಿಗರು (Netizens) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಧರ್ಮರಾಯಸ್ವಾಮಿ ದರ್ಶನಕ್ಕೆ ತೆರಳಿದ್ದ ವೇಳೆ ನಿಖಿಲ್ ಕುಮಾರ್ ಸ್ವಾಮಿಯವರು ಒಳಗೆ  ಹೋಗಬಹುದಾ ಎಂದು ಕಾರ್ಯಕರ್ತರನ್ನು ಪ್ರಶ್ನಿಸುತ್ತಾರೆ.  ಈ ವೇಳೆ ಇಲ್ಲ ಸರ್ ಅಲ್ಲಿಗೆ ಹೋಗುವ ಹಾಗಿಲ್ಲ ಎಂದು ತಿಳಿಸಿದ್ದಾರೆ. ಕೊನೆಗೆ ಗರ್ಭಗುಡಿ ಹೊರಭಾಗದಲ್ಲಿ ನಿಲ್ಲಿಸಿ ಮಂಗಳಾರತಿ ನೀಡಿದ್ದು,  ಗರ್ಭಗುಡಿ ಹೊಸ್ತಿಲಲ್ಲಿ ನಿಂತು ಮಂಗಳಾರತಿ ಪಡೆದು , ಕಾಣಿಕೆ ಹಾಕಿ ದೇವರಿಗೆ ನಮಸ್ಕರಿಸಿ ನಿಖಿಲ್ ಕುಮಾರಸ್ವಾಮಿ ಹೊರ ನಡೆದಿದ್ದಾರೆ. 

ಇನ್ನೂ ಇಲ್ಲಿನ ಸ್ಥಳೀಯರ ಮಾಹಿತಿ ಪ್ರಕಾರ ಕರಗ ಮಹೋತ್ಸವ ನಡೆಸುವ ವಹ್ನಿಕುಲಸ್ಥರು ಬಿಟ್ಟು ಬೇರೆ ಸಮುದಾಯಕ್ಕೆ ಧರ್ಮರಾಯಸ್ವಾಮಿ ದೇವಾಲಯ ಗರ್ಭಗುಡಿ ಪ್ರವೇಶಕ್ಕೆ ನಿರ್ಬಂಧವಿದ್ದು,  ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ ಎನ್ನುತ್ತಾರೆ. ಇನ್ನೂ ಈ  ಹಿಂದೆ ಸಹ ಮಾಜಿ ಸಚಿವ ರಾಮಲಿಂಗಾರೆಡ್ಡಿಯರಿಗೂ ಸಹ ಇದೆ ರೀತಿ ಧರ್ಮರಾಯಸ್ವಾಮಿ ದೇವಾಲಯ ಗರ್ಭಗುಡಿ ಪ್ರವೇಶಕ್ಕೆ ಅವಕಾಶ ನೀಡಿರಲಿಲ್ಲ. ಅಂದು ಸಹ ಸ್ಥಳೀಯ ಸಂಪ್ರದಾಯ ಗೌರವಿಸಿ ದೇವರ ದರ್ಶನ ಪಡೆದು ವಾಪಸ್ಸಾಗಿದ್ದರು ಎನ್ನಲಾಗಿದೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more