Bidar: ಮೈಲಾರ ಮಲ್ಲಣ್ಣ ದೇವಸ್ಥಾನದ ಅಭಿವೃದ್ಧಿಗೆ ಅಧಿಕಾರಿಗಳೇ ಕಂಟಕ..!

Bidar: ಮೈಲಾರ ಮಲ್ಲಣ್ಣ ದೇವಸ್ಥಾನದ ಅಭಿವೃದ್ಧಿಗೆ ಅಧಿಕಾರಿಗಳೇ ಕಂಟಕ..!

Suvarna News   | Asianet News
Published : Feb 01, 2022, 11:06 AM IST

*  ಪ್ರತಿವರ್ಷ ಲಕ್ಷಾಂತರ ಮಂದಿ ಭಕ್ತರು ಭೇಟಿ ಕೊಡುವ ದೇಗುಲದಲ್ಲಿ ಇಲ್ಲ ಮೂಲಭೂತ ಸೌಕರ್ಯ
*  ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ರಸ್ತೆಗಳು ಇಲ್ಲದೇ ಭಕ್ತರ ಪರದಾಟ
*  ಈ ಭಾಗದಲ್ಲಿ ದಕ್ಷಿಣ ಕಾಶಿ ಎಂದು ಖ್ಯಾತಿ ಹೊಂದಿರುವ ಮೈಲಾರ ಮಲ್ಲಣ್ಣ ದೇವಸ್ಥಾನ
 

ಬೀದರ್(ಫೆ.01):  ಗಡಿ ಜಿಲ್ಲೆ ಬೀದರ್‌ನ ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದಲ್ಲಿರುವ ಮೈಲಾರ ಮಲ್ಲಣ್ಣ ದೇವಸ್ಥಾನ ಈ ಭಾಗದಲ್ಲಿ ಅತೀ ಹೆಚ್ಚು ಭಕ್ತರು ಹೊಂದಿರುವ ದೇವಸ್ಥಾನ. ಮಾರ್ತಾಂಡ ರೂಪದಲ್ಲಿ ಬಂದು ಅಸುರರನ್ನ ಸಂಹಾರ ಮಾಡಿ ಮೈಲಾರ ಮಲ್ಲಣ್ಣ ಇಲ್ಲೇ ನೆಲೆಸಿದ್ದಾನೆಂದು ಭಕ್ತರ ನಂಬಿಕೆಯಾಗಿದೆ. ಪ್ರತಿ ವರ್ಷ ಚಟ್ಟಿ ಅಮಾವಾಸೆಯಿಂದ ಎಳ್ಳ ಅಮಾವಾಸೆವರೆಗೂ ಒಂದು ತಿಂಗಳುಗಳ ಕಾಲ ಇಲ್ಲಿ ಜಾತ್ರೆ ನಡೆಯುತ್ತದೆ. ಜಾತ್ರೆಗೆ ರಾಜ್ಯ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಹಲವೆಡೆಯಿಂದ ಲಕ್ಷಾಂತರ ಜನ ಭಕ್ತರು ಹರಿದು ಬರುತ್ತಾರೆ. ಅರಸಿಣ ಮತ್ತು ಕೊಬ್ಬರಿ ಮಿಶ್ರಿತ ಬಂಡಾರ ಎರಚಿ ದರ್ಶನ ಪಡೆದು ಪುನೀತರಾಗುತ್ತಾರೆ,. ಹೀಗೆ ಬರುವ ಭಕ್ತರಿಗೆ ಇಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೇ ಪರಿತಪ್ಪುವಂತಾಗಿದೆ.

Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

ಇನ್ನು ಇಲ್ಲಿನ ಅಭಿವೃದ್ಧಿಗೆ ದೇವಸ್ಥಾನದ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಸಾಕಷ್ಟು ಬಾರಿ ಪ್ರಯತ್ನ ಮಾಡಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಸುತ್ತಲಿನ ಜಾಗ ನಮ್ಮದ್ದು ಎಂದು ಅಡ್ಡಿ ಪಡಿಸುತ್ತಿದ್ದಾರೆ. ಇಲ್ಲಿ ಈಗಲೂ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ರಸ್ತೆಗಳ ನಿರ್ಮಾಣ ಸೇರಿದಂತೆ ಹತ್ತಾರು ಸಮಸ್ಯೆಗಳು ಇವೆ. ಯಾವುದೇ ಒಂದು ಕಾಮಗಾರಿ ಕೈಗೆತ್ತಿಕೊಂಡಿದ್ದರು ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸುವ ಮೂಲಕ ದೇವಸ್ಥಾನದ ಅಭಿವೃದ್ಧಿ ಕಂಟಕವಾಗಿದ್ದಾರೆ. ಇನ್ನು ಈ ಹಿಂದೆ ಸುಮಾರು ವರ್ಷಗಳ ಹಿಂದೆ ದೇವಸ್ಥಾನದ ಕೆಳಗೆ ನೂರಾರು ಎಕರೆ ಭೂಮಿ ಇತ್ತು, ಆದರೆ ಅದು ಈಗ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಪಾಲಾಗಿದ್ದು ದೇವಸ್ಥಾನದ ಹೆಸರಲ್ಲಿ ಕೇವಲ ಆರೇಳು ಎಕರೆ ಭೂಮಿ ಮಾತ್ರ ಉಳಿದುಕೊಂಡಿದೆ. ದೇವಸ್ಥಾನ ಅಭಿವೃದ್ಧಿಗೆ ಅರಣ್ಯ ಇಲಾಖೆ ಅಧಿಕಾರಿಗಳು ವಿಲನ್ ಆಗಿದ್ದು ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ಅಸುರರ ಸಂಹಾರಕ್ಕಾಗಿ ಈ ಭಾಗದಲ್ಲಿ ಮಾರ್ತಾಂಡ ರೂಪದಲ್ಲಿ ಬಂದ ಮೈಲಾರ ಮಲ್ಲಣ್ಣನ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಸುರರಂತೆ ಕಾಡುತ್ತಿದ್ದಾರೆ. ಈಗಲಾದರೂ ದಕ್ಷಿಣ ಕಾಶಿ ಎಂದೇ ಖ್ಯಾತಿಯ ಈ ದೇವಾಲಯದ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸುತ್ತಾರಾ ಕಾದು ನೋಡಬೇಕಾಗಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more