Bidar: ಮೈಲಾರ ಮಲ್ಲಣ್ಣ ದೇವಸ್ಥಾನದ ಅಭಿವೃದ್ಧಿಗೆ ಅಧಿಕಾರಿಗಳೇ ಕಂಟಕ..!

Bidar: ಮೈಲಾರ ಮಲ್ಲಣ್ಣ ದೇವಸ್ಥಾನದ ಅಭಿವೃದ್ಧಿಗೆ ಅಧಿಕಾರಿಗಳೇ ಕಂಟಕ..!

Suvarna News   | Asianet News
Published : Feb 01, 2022, 11:06 AM IST

*  ಪ್ರತಿವರ್ಷ ಲಕ್ಷಾಂತರ ಮಂದಿ ಭಕ್ತರು ಭೇಟಿ ಕೊಡುವ ದೇಗುಲದಲ್ಲಿ ಇಲ್ಲ ಮೂಲಭೂತ ಸೌಕರ್ಯ
*  ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ರಸ್ತೆಗಳು ಇಲ್ಲದೇ ಭಕ್ತರ ಪರದಾಟ
*  ಈ ಭಾಗದಲ್ಲಿ ದಕ್ಷಿಣ ಕಾಶಿ ಎಂದು ಖ್ಯಾತಿ ಹೊಂದಿರುವ ಮೈಲಾರ ಮಲ್ಲಣ್ಣ ದೇವಸ್ಥಾನ
 

ಬೀದರ್(ಫೆ.01):  ಗಡಿ ಜಿಲ್ಲೆ ಬೀದರ್‌ನ ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದಲ್ಲಿರುವ ಮೈಲಾರ ಮಲ್ಲಣ್ಣ ದೇವಸ್ಥಾನ ಈ ಭಾಗದಲ್ಲಿ ಅತೀ ಹೆಚ್ಚು ಭಕ್ತರು ಹೊಂದಿರುವ ದೇವಸ್ಥಾನ. ಮಾರ್ತಾಂಡ ರೂಪದಲ್ಲಿ ಬಂದು ಅಸುರರನ್ನ ಸಂಹಾರ ಮಾಡಿ ಮೈಲಾರ ಮಲ್ಲಣ್ಣ ಇಲ್ಲೇ ನೆಲೆಸಿದ್ದಾನೆಂದು ಭಕ್ತರ ನಂಬಿಕೆಯಾಗಿದೆ. ಪ್ರತಿ ವರ್ಷ ಚಟ್ಟಿ ಅಮಾವಾಸೆಯಿಂದ ಎಳ್ಳ ಅಮಾವಾಸೆವರೆಗೂ ಒಂದು ತಿಂಗಳುಗಳ ಕಾಲ ಇಲ್ಲಿ ಜಾತ್ರೆ ನಡೆಯುತ್ತದೆ. ಜಾತ್ರೆಗೆ ರಾಜ್ಯ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಹಲವೆಡೆಯಿಂದ ಲಕ್ಷಾಂತರ ಜನ ಭಕ್ತರು ಹರಿದು ಬರುತ್ತಾರೆ. ಅರಸಿಣ ಮತ್ತು ಕೊಬ್ಬರಿ ಮಿಶ್ರಿತ ಬಂಡಾರ ಎರಚಿ ದರ್ಶನ ಪಡೆದು ಪುನೀತರಾಗುತ್ತಾರೆ,. ಹೀಗೆ ಬರುವ ಭಕ್ತರಿಗೆ ಇಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೇ ಪರಿತಪ್ಪುವಂತಾಗಿದೆ.

Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

ಇನ್ನು ಇಲ್ಲಿನ ಅಭಿವೃದ್ಧಿಗೆ ದೇವಸ್ಥಾನದ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಸಾಕಷ್ಟು ಬಾರಿ ಪ್ರಯತ್ನ ಮಾಡಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಸುತ್ತಲಿನ ಜಾಗ ನಮ್ಮದ್ದು ಎಂದು ಅಡ್ಡಿ ಪಡಿಸುತ್ತಿದ್ದಾರೆ. ಇಲ್ಲಿ ಈಗಲೂ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ರಸ್ತೆಗಳ ನಿರ್ಮಾಣ ಸೇರಿದಂತೆ ಹತ್ತಾರು ಸಮಸ್ಯೆಗಳು ಇವೆ. ಯಾವುದೇ ಒಂದು ಕಾಮಗಾರಿ ಕೈಗೆತ್ತಿಕೊಂಡಿದ್ದರು ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸುವ ಮೂಲಕ ದೇವಸ್ಥಾನದ ಅಭಿವೃದ್ಧಿ ಕಂಟಕವಾಗಿದ್ದಾರೆ. ಇನ್ನು ಈ ಹಿಂದೆ ಸುಮಾರು ವರ್ಷಗಳ ಹಿಂದೆ ದೇವಸ್ಥಾನದ ಕೆಳಗೆ ನೂರಾರು ಎಕರೆ ಭೂಮಿ ಇತ್ತು, ಆದರೆ ಅದು ಈಗ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಪಾಲಾಗಿದ್ದು ದೇವಸ್ಥಾನದ ಹೆಸರಲ್ಲಿ ಕೇವಲ ಆರೇಳು ಎಕರೆ ಭೂಮಿ ಮಾತ್ರ ಉಳಿದುಕೊಂಡಿದೆ. ದೇವಸ್ಥಾನ ಅಭಿವೃದ್ಧಿಗೆ ಅರಣ್ಯ ಇಲಾಖೆ ಅಧಿಕಾರಿಗಳು ವಿಲನ್ ಆಗಿದ್ದು ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ಅಸುರರ ಸಂಹಾರಕ್ಕಾಗಿ ಈ ಭಾಗದಲ್ಲಿ ಮಾರ್ತಾಂಡ ರೂಪದಲ್ಲಿ ಬಂದ ಮೈಲಾರ ಮಲ್ಲಣ್ಣನ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಸುರರಂತೆ ಕಾಡುತ್ತಿದ್ದಾರೆ. ಈಗಲಾದರೂ ದಕ್ಷಿಣ ಕಾಶಿ ಎಂದೇ ಖ್ಯಾತಿಯ ಈ ದೇವಾಲಯದ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸುತ್ತಾರಾ ಕಾದು ನೋಡಬೇಕಾಗಿದೆ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more