Bidar: ಮೈಲಾರ ಮಲ್ಲಣ್ಣ ದೇವಸ್ಥಾನದ ಅಭಿವೃದ್ಧಿಗೆ ಅಧಿಕಾರಿಗಳೇ ಕಂಟಕ..!

Bidar: ಮೈಲಾರ ಮಲ್ಲಣ್ಣ ದೇವಸ್ಥಾನದ ಅಭಿವೃದ್ಧಿಗೆ ಅಧಿಕಾರಿಗಳೇ ಕಂಟಕ..!

Suvarna News   | Asianet News
Published : Feb 01, 2022, 11:06 AM IST

*  ಪ್ರತಿವರ್ಷ ಲಕ್ಷಾಂತರ ಮಂದಿ ಭಕ್ತರು ಭೇಟಿ ಕೊಡುವ ದೇಗುಲದಲ್ಲಿ ಇಲ್ಲ ಮೂಲಭೂತ ಸೌಕರ್ಯ
*  ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ರಸ್ತೆಗಳು ಇಲ್ಲದೇ ಭಕ್ತರ ಪರದಾಟ
*  ಈ ಭಾಗದಲ್ಲಿ ದಕ್ಷಿಣ ಕಾಶಿ ಎಂದು ಖ್ಯಾತಿ ಹೊಂದಿರುವ ಮೈಲಾರ ಮಲ್ಲಣ್ಣ ದೇವಸ್ಥಾನ
 

ಬೀದರ್(ಫೆ.01):  ಗಡಿ ಜಿಲ್ಲೆ ಬೀದರ್‌ನ ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದಲ್ಲಿರುವ ಮೈಲಾರ ಮಲ್ಲಣ್ಣ ದೇವಸ್ಥಾನ ಈ ಭಾಗದಲ್ಲಿ ಅತೀ ಹೆಚ್ಚು ಭಕ್ತರು ಹೊಂದಿರುವ ದೇವಸ್ಥಾನ. ಮಾರ್ತಾಂಡ ರೂಪದಲ್ಲಿ ಬಂದು ಅಸುರರನ್ನ ಸಂಹಾರ ಮಾಡಿ ಮೈಲಾರ ಮಲ್ಲಣ್ಣ ಇಲ್ಲೇ ನೆಲೆಸಿದ್ದಾನೆಂದು ಭಕ್ತರ ನಂಬಿಕೆಯಾಗಿದೆ. ಪ್ರತಿ ವರ್ಷ ಚಟ್ಟಿ ಅಮಾವಾಸೆಯಿಂದ ಎಳ್ಳ ಅಮಾವಾಸೆವರೆಗೂ ಒಂದು ತಿಂಗಳುಗಳ ಕಾಲ ಇಲ್ಲಿ ಜಾತ್ರೆ ನಡೆಯುತ್ತದೆ. ಜಾತ್ರೆಗೆ ರಾಜ್ಯ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಹಲವೆಡೆಯಿಂದ ಲಕ್ಷಾಂತರ ಜನ ಭಕ್ತರು ಹರಿದು ಬರುತ್ತಾರೆ. ಅರಸಿಣ ಮತ್ತು ಕೊಬ್ಬರಿ ಮಿಶ್ರಿತ ಬಂಡಾರ ಎರಚಿ ದರ್ಶನ ಪಡೆದು ಪುನೀತರಾಗುತ್ತಾರೆ,. ಹೀಗೆ ಬರುವ ಭಕ್ತರಿಗೆ ಇಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೇ ಪರಿತಪ್ಪುವಂತಾಗಿದೆ.

Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

ಇನ್ನು ಇಲ್ಲಿನ ಅಭಿವೃದ್ಧಿಗೆ ದೇವಸ್ಥಾನದ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಸಾಕಷ್ಟು ಬಾರಿ ಪ್ರಯತ್ನ ಮಾಡಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಸುತ್ತಲಿನ ಜಾಗ ನಮ್ಮದ್ದು ಎಂದು ಅಡ್ಡಿ ಪಡಿಸುತ್ತಿದ್ದಾರೆ. ಇಲ್ಲಿ ಈಗಲೂ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ರಸ್ತೆಗಳ ನಿರ್ಮಾಣ ಸೇರಿದಂತೆ ಹತ್ತಾರು ಸಮಸ್ಯೆಗಳು ಇವೆ. ಯಾವುದೇ ಒಂದು ಕಾಮಗಾರಿ ಕೈಗೆತ್ತಿಕೊಂಡಿದ್ದರು ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸುವ ಮೂಲಕ ದೇವಸ್ಥಾನದ ಅಭಿವೃದ್ಧಿ ಕಂಟಕವಾಗಿದ್ದಾರೆ. ಇನ್ನು ಈ ಹಿಂದೆ ಸುಮಾರು ವರ್ಷಗಳ ಹಿಂದೆ ದೇವಸ್ಥಾನದ ಕೆಳಗೆ ನೂರಾರು ಎಕರೆ ಭೂಮಿ ಇತ್ತು, ಆದರೆ ಅದು ಈಗ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಪಾಲಾಗಿದ್ದು ದೇವಸ್ಥಾನದ ಹೆಸರಲ್ಲಿ ಕೇವಲ ಆರೇಳು ಎಕರೆ ಭೂಮಿ ಮಾತ್ರ ಉಳಿದುಕೊಂಡಿದೆ. ದೇವಸ್ಥಾನ ಅಭಿವೃದ್ಧಿಗೆ ಅರಣ್ಯ ಇಲಾಖೆ ಅಧಿಕಾರಿಗಳು ವಿಲನ್ ಆಗಿದ್ದು ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ಅಸುರರ ಸಂಹಾರಕ್ಕಾಗಿ ಈ ಭಾಗದಲ್ಲಿ ಮಾರ್ತಾಂಡ ರೂಪದಲ್ಲಿ ಬಂದ ಮೈಲಾರ ಮಲ್ಲಣ್ಣನ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಸುರರಂತೆ ಕಾಡುತ್ತಿದ್ದಾರೆ. ಈಗಲಾದರೂ ದಕ್ಷಿಣ ಕಾಶಿ ಎಂದೇ ಖ್ಯಾತಿಯ ಈ ದೇವಾಲಯದ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸುತ್ತಾರಾ ಕಾದು ನೋಡಬೇಕಾಗಿದೆ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more