Koppal: 300 ವಿದ್ಯಾರ್ಥಿಗಳು, ಇರುವುದು 3 ತರಗತಿಗಳು ಮಾತ್ರ, ಸರ್ಕಾರಿ ಮಾದರಿ ಶಾಲೆಯ ದುಸ್ಥಿತಿ!

Koppal: 300 ವಿದ್ಯಾರ್ಥಿಗಳು, ಇರುವುದು 3 ತರಗತಿಗಳು ಮಾತ್ರ, ಸರ್ಕಾರಿ ಮಾದರಿ ಶಾಲೆಯ ದುಸ್ಥಿತಿ!

Suvarna News   | Asianet News
Published : Nov 23, 2021, 05:34 PM IST

- 2016ರಲ್ಲಿ ಆರಂಭವಾಗಿರುವ ಮೌಲಾನಾ‌ ಅಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ 

- 300 ವಿದ್ಯಾರ್ಥಿಗಳಿಗೆ ಇಲ್ಲಿ ಇರುವುದು ಕೇವಲ ಮೂರೇ ಮೂರು ತರಗತಿಗಳು ಮಾತ್ರ!

- 60 ಲಕ್ಷ ಅನುದಾನ ಬಿಡುಗಡೆಯಾಗಿದ್ರೂ, ಅಧಿಕಾರಿಗಳಿಂದ ಜಾಗದ ಕೊರತೆಯ ನೆಪ

- ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಹ ಯಾವುದೇ ಪ್ರಯೋಜನವಾಗಿಲ್ಲ 

ಕೊಪ್ಪಳ (ನ. 23): ಸರಕಾರ ಅಲ್ಪಸಂಖ್ಯಾತರ (Minority) ಮಕ್ಕಳ ಶೈಕ್ಷಣಿಕ ಬೆಳವಣಿಗೆ ದೃಷ್ಟಿಯಿಂದ 2016 ರಲ್ಲಿ ಮೌಲಾನಾ ಅಜಾದ್ ( Moulana Azad) ಮಾದರಿ ಆಂಗ್ಲ ಮಾದ್ಯಮ ಶಾಲೆಯನ್ನು ಆರಂಭ ಮಾಡಿದೆ. ಈ ಶಾಲೆಯಲ್ಲಿ 6 ರಿಂದ 10 ನೇ ತರಗತಿವರೆಗೆ ಒಟ್ಟು 300 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 

ಆದರೆ 300 ವಿದ್ಯಾರ್ಥಿಗಳಿಗೆ ಇಲ್ಲಿ ಇರುವುದು ಕೇವಲ ಮೂರೇ ಮೂರು ತರಗತಿಗಳು ಮಾತ್ರ. ಇದರಿಂದಾಗಿ ಒಂದು ತರಗತಿಯಲ್ಲಿ ಎರಡೆರಡು ತರಗತಿಗಳನ್ನು ನಡೆಸಲಾಗುತ್ತಿದ್ದು, ಇನ್ನುಳಿದ ಕೆಲ ತರಗತಿಗಳಲ್ಲಿ ವಿದ್ಯಾರ್ಥಿಗಳು ಹೊರಗಡೆ ಕುಳಿತು ಪಾಠ ಕೇಳಬಹುದಾದ ಅನಿವಾರ್ಯತೆ ಉಂಟಾಗಿದೆ. ಇನ್ನು ವಿದ್ಯಾರ್ಥಿಗಳು ತರಗತಿಯ ಹೊರಗಡೆ ಕುಳಿತು ಪಾಠ ಕೇಳುವುದರಿಂದ‌ ಅವರಿಗೆ ಶಿಕ್ಷಕರು ಹೇಳುವ ಪಾಠ ಸರಿಯಾಗಿ ಅರ್ಥ ಆಗದಂತಾಗುತ್ತದೆ. ಜೊತೆಗೆ ಪಕ್ಕದಲ್ಲೇ ಪದವಿ ಕಾಲೇಜು ಇರುವುದರಿಂದ ಆ ಕಾಲೇಜಿನ ಗದ್ದಲಕ್ಕೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಮಾಡುವ ಪಾಠ ಸರಿಯಾಗಿ ಕೇಳಿಸುವುದೇ ಇಲ್ಲ.  ಇದರಿಂದಾಗಿ ವಿದ್ಯಾರ್ಥಿಗಳು ಪಡಬಾರದ ಕಷ್ಟಪಡುತ್ತಿದ್ದಾರೆ.

ಇನ್ನು ಈ ಮೌಲಾನಾ ಅಜಾದ್ ಶಾಲೆಗೆ ಸ್ವತಃ ಕಟ್ಟಡವಿಲ್ಲ. ಹೀಗಾಗಿ ಸದ್ಯ ಸರಕಾರಿ ಉರ್ದು ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿ‌ನ ಕಟ್ಟಡಗಳಲ್ಲಿ ತರಗತಿಗಳು ನಡೆಯುತ್ತಿದ್ದು, ಕೊಠಡಿಗಳು ಚಿಕ್ಕದಾಗಿವೆ. ಜೊತೆಗೆ ಇಕ್ಕಟ್ಟಿನ ಜಾಗದಲ್ಲಿ ತರಗತಿ ಕೊಠಡಿ ಇರುವುದರಿಂದ ಕಷ್ಟಪಟ್ಟು ವಿದ್ಯಾರ್ಥಿಗಳು ತರಗತಿಗೆ ಹೋಗಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳಿಗೆ ತಲೆದೊರಿದೆ. 

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more