Koppal: 300 ವಿದ್ಯಾರ್ಥಿಗಳು, ಇರುವುದು 3 ತರಗತಿಗಳು ಮಾತ್ರ, ಸರ್ಕಾರಿ ಮಾದರಿ ಶಾಲೆಯ ದುಸ್ಥಿತಿ!

Koppal: 300 ವಿದ್ಯಾರ್ಥಿಗಳು, ಇರುವುದು 3 ತರಗತಿಗಳು ಮಾತ್ರ, ಸರ್ಕಾರಿ ಮಾದರಿ ಶಾಲೆಯ ದುಸ್ಥಿತಿ!

Suvarna News   | Asianet News
Published : Nov 23, 2021, 05:34 PM IST

- 2016ರಲ್ಲಿ ಆರಂಭವಾಗಿರುವ ಮೌಲಾನಾ‌ ಅಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ 

- 300 ವಿದ್ಯಾರ್ಥಿಗಳಿಗೆ ಇಲ್ಲಿ ಇರುವುದು ಕೇವಲ ಮೂರೇ ಮೂರು ತರಗತಿಗಳು ಮಾತ್ರ!

- 60 ಲಕ್ಷ ಅನುದಾನ ಬಿಡುಗಡೆಯಾಗಿದ್ರೂ, ಅಧಿಕಾರಿಗಳಿಂದ ಜಾಗದ ಕೊರತೆಯ ನೆಪ

- ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಹ ಯಾವುದೇ ಪ್ರಯೋಜನವಾಗಿಲ್ಲ 

ಕೊಪ್ಪಳ (ನ. 23): ಸರಕಾರ ಅಲ್ಪಸಂಖ್ಯಾತರ (Minority) ಮಕ್ಕಳ ಶೈಕ್ಷಣಿಕ ಬೆಳವಣಿಗೆ ದೃಷ್ಟಿಯಿಂದ 2016 ರಲ್ಲಿ ಮೌಲಾನಾ ಅಜಾದ್ ( Moulana Azad) ಮಾದರಿ ಆಂಗ್ಲ ಮಾದ್ಯಮ ಶಾಲೆಯನ್ನು ಆರಂಭ ಮಾಡಿದೆ. ಈ ಶಾಲೆಯಲ್ಲಿ 6 ರಿಂದ 10 ನೇ ತರಗತಿವರೆಗೆ ಒಟ್ಟು 300 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 

ಆದರೆ 300 ವಿದ್ಯಾರ್ಥಿಗಳಿಗೆ ಇಲ್ಲಿ ಇರುವುದು ಕೇವಲ ಮೂರೇ ಮೂರು ತರಗತಿಗಳು ಮಾತ್ರ. ಇದರಿಂದಾಗಿ ಒಂದು ತರಗತಿಯಲ್ಲಿ ಎರಡೆರಡು ತರಗತಿಗಳನ್ನು ನಡೆಸಲಾಗುತ್ತಿದ್ದು, ಇನ್ನುಳಿದ ಕೆಲ ತರಗತಿಗಳಲ್ಲಿ ವಿದ್ಯಾರ್ಥಿಗಳು ಹೊರಗಡೆ ಕುಳಿತು ಪಾಠ ಕೇಳಬಹುದಾದ ಅನಿವಾರ್ಯತೆ ಉಂಟಾಗಿದೆ. ಇನ್ನು ವಿದ್ಯಾರ್ಥಿಗಳು ತರಗತಿಯ ಹೊರಗಡೆ ಕುಳಿತು ಪಾಠ ಕೇಳುವುದರಿಂದ‌ ಅವರಿಗೆ ಶಿಕ್ಷಕರು ಹೇಳುವ ಪಾಠ ಸರಿಯಾಗಿ ಅರ್ಥ ಆಗದಂತಾಗುತ್ತದೆ. ಜೊತೆಗೆ ಪಕ್ಕದಲ್ಲೇ ಪದವಿ ಕಾಲೇಜು ಇರುವುದರಿಂದ ಆ ಕಾಲೇಜಿನ ಗದ್ದಲಕ್ಕೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಮಾಡುವ ಪಾಠ ಸರಿಯಾಗಿ ಕೇಳಿಸುವುದೇ ಇಲ್ಲ.  ಇದರಿಂದಾಗಿ ವಿದ್ಯಾರ್ಥಿಗಳು ಪಡಬಾರದ ಕಷ್ಟಪಡುತ್ತಿದ್ದಾರೆ.

ಇನ್ನು ಈ ಮೌಲಾನಾ ಅಜಾದ್ ಶಾಲೆಗೆ ಸ್ವತಃ ಕಟ್ಟಡವಿಲ್ಲ. ಹೀಗಾಗಿ ಸದ್ಯ ಸರಕಾರಿ ಉರ್ದು ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿ‌ನ ಕಟ್ಟಡಗಳಲ್ಲಿ ತರಗತಿಗಳು ನಡೆಯುತ್ತಿದ್ದು, ಕೊಠಡಿಗಳು ಚಿಕ್ಕದಾಗಿವೆ. ಜೊತೆಗೆ ಇಕ್ಕಟ್ಟಿನ ಜಾಗದಲ್ಲಿ ತರಗತಿ ಕೊಠಡಿ ಇರುವುದರಿಂದ ಕಷ್ಟಪಟ್ಟು ವಿದ್ಯಾರ್ಥಿಗಳು ತರಗತಿಗೆ ಹೋಗಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳಿಗೆ ತಲೆದೊರಿದೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more