Koppal: 300 ವಿದ್ಯಾರ್ಥಿಗಳು, ಇರುವುದು 3 ತರಗತಿಗಳು ಮಾತ್ರ, ಸರ್ಕಾರಿ ಮಾದರಿ ಶಾಲೆಯ ದುಸ್ಥಿತಿ!

Koppal: 300 ವಿದ್ಯಾರ್ಥಿಗಳು, ಇರುವುದು 3 ತರಗತಿಗಳು ಮಾತ್ರ, ಸರ್ಕಾರಿ ಮಾದರಿ ಶಾಲೆಯ ದುಸ್ಥಿತಿ!

Suvarna News   | Asianet News
Published : Nov 23, 2021, 05:34 PM IST

- 2016ರಲ್ಲಿ ಆರಂಭವಾಗಿರುವ ಮೌಲಾನಾ‌ ಅಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ 

- 300 ವಿದ್ಯಾರ್ಥಿಗಳಿಗೆ ಇಲ್ಲಿ ಇರುವುದು ಕೇವಲ ಮೂರೇ ಮೂರು ತರಗತಿಗಳು ಮಾತ್ರ!

- 60 ಲಕ್ಷ ಅನುದಾನ ಬಿಡುಗಡೆಯಾಗಿದ್ರೂ, ಅಧಿಕಾರಿಗಳಿಂದ ಜಾಗದ ಕೊರತೆಯ ನೆಪ

- ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಹ ಯಾವುದೇ ಪ್ರಯೋಜನವಾಗಿಲ್ಲ 

ಕೊಪ್ಪಳ (ನ. 23): ಸರಕಾರ ಅಲ್ಪಸಂಖ್ಯಾತರ (Minority) ಮಕ್ಕಳ ಶೈಕ್ಷಣಿಕ ಬೆಳವಣಿಗೆ ದೃಷ್ಟಿಯಿಂದ 2016 ರಲ್ಲಿ ಮೌಲಾನಾ ಅಜಾದ್ ( Moulana Azad) ಮಾದರಿ ಆಂಗ್ಲ ಮಾದ್ಯಮ ಶಾಲೆಯನ್ನು ಆರಂಭ ಮಾಡಿದೆ. ಈ ಶಾಲೆಯಲ್ಲಿ 6 ರಿಂದ 10 ನೇ ತರಗತಿವರೆಗೆ ಒಟ್ಟು 300 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 

ಆದರೆ 300 ವಿದ್ಯಾರ್ಥಿಗಳಿಗೆ ಇಲ್ಲಿ ಇರುವುದು ಕೇವಲ ಮೂರೇ ಮೂರು ತರಗತಿಗಳು ಮಾತ್ರ. ಇದರಿಂದಾಗಿ ಒಂದು ತರಗತಿಯಲ್ಲಿ ಎರಡೆರಡು ತರಗತಿಗಳನ್ನು ನಡೆಸಲಾಗುತ್ತಿದ್ದು, ಇನ್ನುಳಿದ ಕೆಲ ತರಗತಿಗಳಲ್ಲಿ ವಿದ್ಯಾರ್ಥಿಗಳು ಹೊರಗಡೆ ಕುಳಿತು ಪಾಠ ಕೇಳಬಹುದಾದ ಅನಿವಾರ್ಯತೆ ಉಂಟಾಗಿದೆ. ಇನ್ನು ವಿದ್ಯಾರ್ಥಿಗಳು ತರಗತಿಯ ಹೊರಗಡೆ ಕುಳಿತು ಪಾಠ ಕೇಳುವುದರಿಂದ‌ ಅವರಿಗೆ ಶಿಕ್ಷಕರು ಹೇಳುವ ಪಾಠ ಸರಿಯಾಗಿ ಅರ್ಥ ಆಗದಂತಾಗುತ್ತದೆ. ಜೊತೆಗೆ ಪಕ್ಕದಲ್ಲೇ ಪದವಿ ಕಾಲೇಜು ಇರುವುದರಿಂದ ಆ ಕಾಲೇಜಿನ ಗದ್ದಲಕ್ಕೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಮಾಡುವ ಪಾಠ ಸರಿಯಾಗಿ ಕೇಳಿಸುವುದೇ ಇಲ್ಲ.  ಇದರಿಂದಾಗಿ ವಿದ್ಯಾರ್ಥಿಗಳು ಪಡಬಾರದ ಕಷ್ಟಪಡುತ್ತಿದ್ದಾರೆ.

ಇನ್ನು ಈ ಮೌಲಾನಾ ಅಜಾದ್ ಶಾಲೆಗೆ ಸ್ವತಃ ಕಟ್ಟಡವಿಲ್ಲ. ಹೀಗಾಗಿ ಸದ್ಯ ಸರಕಾರಿ ಉರ್ದು ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿ‌ನ ಕಟ್ಟಡಗಳಲ್ಲಿ ತರಗತಿಗಳು ನಡೆಯುತ್ತಿದ್ದು, ಕೊಠಡಿಗಳು ಚಿಕ್ಕದಾಗಿವೆ. ಜೊತೆಗೆ ಇಕ್ಕಟ್ಟಿನ ಜಾಗದಲ್ಲಿ ತರಗತಿ ಕೊಠಡಿ ಇರುವುದರಿಂದ ಕಷ್ಟಪಟ್ಟು ವಿದ್ಯಾರ್ಥಿಗಳು ತರಗತಿಗೆ ಹೋಗಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳಿಗೆ ತಲೆದೊರಿದೆ. 

 

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more