ದಾವಣಗೆರೆ: 419 ಕುಟುಂಬಗಳ ಎತ್ತಂಗಡಿ, ಕುಡಿಯೋ ನೀರಿಗೂ ಜನರ ಪರದಾಟ..!

ದಾವಣಗೆರೆ: 419 ಕುಟುಂಬಗಳ ಎತ್ತಂಗಡಿ, ಕುಡಿಯೋ ನೀರಿಗೂ ಜನರ ಪರದಾಟ..!

Published : Dec 06, 2023, 12:39 PM IST

ಇನ್ನು ಮನೆ ಕಳೆದುಕೊಂಡ ಸಂತ್ರಸ್ತರು ರಾತ್ರಿ ಸುರಿದ ಅಕಾಲಿಕ ಮಳೆಯಿಂದ ಸಂಕಷ್ಟ ಅನುಭವಿಸುವಂತಾಗಿದೆ. ವಸತಿ ಸ್ಥಳದ ಅಕ್ಕ ಪಕ್ಕ ಗದ್ದೆ, ಕೆರೆಗಳಿದ್ದು ಸೊಳ್ಳೆ, ಹಾವು, ಚೇಳು ಕಾಟವೂ ಇದೆ. ಮಹಾ ನಗರ ಪಾಲಿಕೆ ಅಧಿಕಾರಿಗಳು ಆದಷ್ಟು ಬೇಗ ಇವರಿಗೆ ಸೂರು ಒದಗಿಸಬೇಕಿದೆ.

ದಾವಣಗೆರೆ(ಡಿ.06):  ನಗರದಲ್ಲಿ ಕಳೆದ ಐದು ದಿನಗಳ ಹಿಂದೆ ತೆರವು ಮಾಡಿದ ಹೆಗಡೆ ನಗರ ನಿವಾಸಿಗಳ ಬದುಕು ಆಯೋಮಯವಾಗಿದೆ. ಪಿ.ಬಿ ರಸ್ತೆಗೆ ಸಂಪರ್ಕ ಕಲ್ಪಿಸುವ ರಿಂಗ್ ರೋಡ್ ರಸ್ತೆ ನಿರ್ಮಾಣಕ್ಕೆ  419 ಕುಟುಂಬಗಳನ್ನು ಏಕಾಏಕಿ ಎತ್ತಂಗಡಿ ಮಾಡಿಸಲಾಗಿತ್ತು. ಇದೀಗ ಕುಡಿಯಲು ನೀರು... ಶೌಚಾಲಯ.. ಕರೆಂಟ್ ಸೌಲಭ್ಯವೂ ಇಲ್ಲದೆ ಅಕ್ಷರಶಃ ಸಂತ್ರಸ್ಥರನ್ನಾಗಿ ಮಾಡಿದೆ. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ ನೋಡಿ..

ದಾವಣಗೆರೆ ಹಳೇ ಭಾಗದಿಂದ ಪುಣೆ ಬೆಂಗಳೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಿಂಗ್ ರಸ್ತೆ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿದೆ.  ಇದಕ್ಕಾಗಿ ಹಲವು ವರ್ಷಗಳಿಂದ ವಾಸವಿದ್ದ ಹೆಗಡೆ ನಗರ ನಿವಾಸಿಗಳನ್ನು ಎತ್ತಂಗಡಿ ಮಾಡಿದೆ.. ವಸತಿ ವ್ಯವಸ್ಥೆ ಎಲ್ಲವನ್ನೂ ಮಾಡಿದ್ದೀವಿ.. ಅಲ್ಲಿಎಗ ಶಿಫ್ಟ್ ಆಗಿ ಎಂದು ಐದು ದಿನಗಳ ಹಿಂದೆ 419 ಕುಟುಂಬಗಳನ್ನು ಎತ್ತಂಗಡಿ ಮಾಡಿಸಿದ್ದಾರೆ.. ಆದರೆ ಮನೆ ಖಾಲಿ ಮಾಡಿದ ಕುಟುಂಬಗಳು ಈಗ ಅಕ್ಷರಶಃ ಬೀದಿಗೆ ಬಿದ್ದಿವೆ.. 

ಚಿತ್ರದುರ್ಗ: ಸರ್ಕಾರಿ ಗೋಮಾಳ ಕಬಳಿಸಲು ಅಧಿಕಾರಿಗಳು, ರಿಯಲ್ ಎಸ್ಟೇಟ್ ಏಜೆಂಟರಿಂದ ಸ್ಕೆಚ್‌?

ಐದು ದಿನಗಳ ಹಿಂದೆ 419 ಕುಟುಂಬಗಳನ್ನು ಜಿಲ್ಲಾಡಳಿತ ಎತ್ತಂಗಡಿ ಮಾಡಿಸಿತ್ತು. ಅದ್ರಲ್ಲಿ  281 ಕುಟುಂಬಗಳಿಗೆ ದೊಡ್ಡಬಾತಿಯಲ್ಲಿ ವಸತಿ ನೀಡಲಾಗಿದೆ. ಉಳಿದ 138 ಕುಟುಂಬಗಳ ಪರಿಸ್ಥಿತಿ ಅಕ್ಷರಶಃ ಸಂತ್ರಸ್ಥರನ್ನಾಗಿ ಮಾಡಿದೆ. ವಸತಿ ವ್ಯವಸ್ಥೆ ಮಾಡಿದ್ದಾಗಿ ಹೇಳಿದ ಅಧಿಕಾರಿಗಳು ಈ ಕಟುಂಬಗಳನ್ನು ಬೀದಿಗೆ ತಳ್ಳಿವೆ.  ಕುಡಿಯಲು ನೀರು... ಶೌಚಾಲ.. ಕರೆಂಟ್ ಇಲ್ಲ.. ಅಷ್ಟೇ ಅಲ್ಲ ಸರಿಯಾಗಿ ಶೆಡ್ ಕೂಡ ಇಲ್ಲ..  ಅಧಿಕಾರಿಗಳು ಪೂರ್ವ ಸಿದ್ಧತೆ ಇಲ್ಲದೇ ಮಾಡಿದ ಯಡವಟ್ಟಿನಿಂದ ಹೆಗಡೆ ನಗರ ನಿವಾಸಿಗಳು ಪರಿತಪಿಸುತ್ತಿದ್ದಾರೆ. 

ಸುಮಾರು 2,500 ಜನರ ವಸತಿಗೆ  ವಯ್ವಸ್ಥೆ ಆಗಬೇಕಿದೆ. ಒಕ್ಕಲೆಬ್ಬಿಸುವ ಮುನ್ನವೇ ಇದನ್ನೆಲ್ಲ ಮಾಡೋದು ಬಿಟ್ಟು ಒಕ್ಕಲೆಬ್ಬಿಸಿದ ಬಳಿಕ ವಸತಿ ವ್ಯವಸ್ಥೆ ಮಾಡುತ್ತಿದೆ. ಸಣ್ಣ ಸಣ್ಣ ಮಕ್ಕಳು, ಮಹಿಳೆಯರು, ಬಾಣಂತಿಯರು, ವೃದ್ಧರು ಮೇಲ್ಚಾವಣಿ  ಇಲ್ಲದ ಶೆಡ್ ನಲ್ಲಿ ರಾತ್ರಿ ಕಳೆಯುವಂತಾಗಿದೆ. 

ಇನ್ನು ಮನೆ ಕಳೆದುಕೊಂಡ ಸಂತ್ರಸ್ತರು ರಾತ್ರಿ ಸುರಿದ ಅಕಾಲಿಕ ಮಳೆಯಿಂದ ಸಂಕಷ್ಟ ಅನುಭವಿಸುವಂತಾಗಿದೆ. ವಸತಿ ಸ್ಥಳದ ಅಕ್ಕ ಪಕ್ಕ ಗದ್ದೆ, ಕೆರೆಗಳಿದ್ದು ಸೊಳ್ಳೆ, ಹಾವು, ಚೇಳು ಕಾಟವೂ ಇದೆ. ಮಹಾ ನಗರ ಪಾಲಿಕೆ ಅಧಿಕಾರಿಗಳು ಆದಷ್ಟು ಬೇಗ ಇವರಿಗೆ ಸೂರು ಒದಗಿಸಬೇಕಿದೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more