ಗೋ ಶಾಲೆ ನಿರ್ವಹಣೆಗಿಲ್ಲ ಸರ್ಕಾರದ ಅನುದಾನ! ಬರದ ನಡುವೆ ಗೋಪಾಲಕರ ಗೋಳು ಕೇಳೋರಿಲ್ಲ

ಗೋ ಶಾಲೆ ನಿರ್ವಹಣೆಗಿಲ್ಲ ಸರ್ಕಾರದ ಅನುದಾನ! ಬರದ ನಡುವೆ ಗೋಪಾಲಕರ ಗೋಳು ಕೇಳೋರಿಲ್ಲ

Published : Oct 09, 2023, 11:45 AM IST

ಗುಮ್ಮಟನಗರಿಯಲ್ಲಿ ಗೋಪಾಲಕರ‌ ಗೋಳಾಟ ಹೇಳತೀರದಂತಾಗಿದೆ. ಒಂದು ವರ್ಷದಿಂದ ಗೋ ಶಾಲೆಗಳಿಗೆ ಸರ್ಕಾರದಿಂದ ಬರಬೇಕಾದ ಅನುದಾನವೇ ಬಂದಿಲ್ಲ. ಇತ್ತ ಬರದ ನಡುವೆ ಮೇವಿನ ಕೊರತೆಯನ್ನೂ ಎದುರಿಸುತ್ತಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಗೋಶಾಲೆಗಳಲ್ಲಿ ಹಸುಗಳ ದಾಖಲಾತಿ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರಿ ಗೋಶಾಲೆಗಳಿಗೆ (cowshed) ಜಾನುವಾರುಗಳ ನಿರ್ವಹಣೆಗೆ ಅನುದಾನ ನೀಡುವ ಕೆಲಸವನ್ನ ಇಂದಿನ ಬಿಜೆಪಿ(BJP) ಸರ್ಕಾರ ಮಾಡಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಗೋಶಾಲೆ ನಿರ್ವಹಣೆಗೆ ಬ್ರೇಕ್ ಹಾಕಿದಂತೆ ಕಾಣುತ್ತಿದೆ. ಈವರೆಗೂ ಸರ್ಕಾರದಿಂದ ಸರಿಯಾಗಿ ಅನುದಾನ ಬಿಡುಗಡೆಯಾಗದೇ ಗೋಪಾಲಕರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ. ಕಳೆದ ಸರ್ಕಾರದ ಅವಧಿಯಲ್ಲಿ ಪುಣ್ಯಕೋಟಿ ದತ್ತು ಯೋಜನೆಯಡಿ ಖಾಸಗಿ ಗೋಶಾಲೆಗಳಿಗೆ ಆರ್ಥಿಕ ನೆರವು ದೊರೆತು ಕೊಂಚ ಅನುಕೂಲವಾಗಿತ್ತು. ಆದರೆ ಈಗ ಈ ಯೋಜನೆ ಸ್ಥಗಿತವಾಗಿದೆ ಎಂದು ನಿಡಗುಂದಿ ತಾಲೂಕಿನ ಯಲಗೂರದ ಪ್ರಮೋದಾತ್ಮ ಗೋಶಾಲೆಯ ಕಾರ್ಯದರ್ಶಿ ಅಜಿತ್ ಕುಲಕರ್ಣಿ ಹೇಳುತ್ತಾರೆ. ವಿಜಯಪುರ(Vijayapura) ಜಿಲ್ಲೆಯಲ್ಲಿ ಮೂರು ಖಾಸಗಿ ಗೋಶಾಲೆ, ಒಂದು ಸರ್ಕಾರಿ ಗೋಶಾಲೆ ಇದೆ. ಜಿಲ್ಲೆಯ ಭೂತನಾಳದ ಬಳಿಯ ದಿ ಕ್ಯಾಟಲ್ ಬ್ರಿಡಿಂಗ್ ಮತ್ತು ಡೈರಿ ಫಾರ್ಮಿಂಗ್ ಅಸೋಸಿಯೇಶನ್ ಗೋಶಾಲೆಯಲ್ಲಿ 825, ಕಗ್ಗೋಡದ ಸಿದ್ದೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಗೋರಕ್ಷಕ ಕೇಂದ್ರದಲ್ಲಿ 507 ಮತ್ತು ಯಲಗೂರದ ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರದಲ್ಲಿ 706 ಗೋವುಗಳ ಪಾಲನೆ ಮತ್ತು ಸಂರಕ್ಷಣೆ ಮಾಡಲಾಗುತ್ತಿದೆ. ಸದ್ಯ ಗೋಶಾಲೆಗಳಲ್ಲಿನ ಹಸುಗಳ ನಿರ್ವಹಣೆಗಾಗಿ ಸರ್ಕಾರದಿಂದ ಬರಬೇಕಾದ ಅನುದಾನ ಕಳೆದ ಒಂದು ವರ್ಷಗಳಿಂದ ಬಂದಿಲ್ಲ. 

ಇದನ್ನೂ ವೀಕ್ಷಿಸಿ:  ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more