ಗೋ ಶಾಲೆ ನಿರ್ವಹಣೆಗಿಲ್ಲ ಸರ್ಕಾರದ ಅನುದಾನ! ಬರದ ನಡುವೆ ಗೋಪಾಲಕರ ಗೋಳು ಕೇಳೋರಿಲ್ಲ

ಗೋ ಶಾಲೆ ನಿರ್ವಹಣೆಗಿಲ್ಲ ಸರ್ಕಾರದ ಅನುದಾನ! ಬರದ ನಡುವೆ ಗೋಪಾಲಕರ ಗೋಳು ಕೇಳೋರಿಲ್ಲ

Published : Oct 09, 2023, 11:45 AM IST

ಗುಮ್ಮಟನಗರಿಯಲ್ಲಿ ಗೋಪಾಲಕರ‌ ಗೋಳಾಟ ಹೇಳತೀರದಂತಾಗಿದೆ. ಒಂದು ವರ್ಷದಿಂದ ಗೋ ಶಾಲೆಗಳಿಗೆ ಸರ್ಕಾರದಿಂದ ಬರಬೇಕಾದ ಅನುದಾನವೇ ಬಂದಿಲ್ಲ. ಇತ್ತ ಬರದ ನಡುವೆ ಮೇವಿನ ಕೊರತೆಯನ್ನೂ ಎದುರಿಸುತ್ತಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಗೋಶಾಲೆಗಳಲ್ಲಿ ಹಸುಗಳ ದಾಖಲಾತಿ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರಿ ಗೋಶಾಲೆಗಳಿಗೆ (cowshed) ಜಾನುವಾರುಗಳ ನಿರ್ವಹಣೆಗೆ ಅನುದಾನ ನೀಡುವ ಕೆಲಸವನ್ನ ಇಂದಿನ ಬಿಜೆಪಿ(BJP) ಸರ್ಕಾರ ಮಾಡಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಗೋಶಾಲೆ ನಿರ್ವಹಣೆಗೆ ಬ್ರೇಕ್ ಹಾಕಿದಂತೆ ಕಾಣುತ್ತಿದೆ. ಈವರೆಗೂ ಸರ್ಕಾರದಿಂದ ಸರಿಯಾಗಿ ಅನುದಾನ ಬಿಡುಗಡೆಯಾಗದೇ ಗೋಪಾಲಕರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ. ಕಳೆದ ಸರ್ಕಾರದ ಅವಧಿಯಲ್ಲಿ ಪುಣ್ಯಕೋಟಿ ದತ್ತು ಯೋಜನೆಯಡಿ ಖಾಸಗಿ ಗೋಶಾಲೆಗಳಿಗೆ ಆರ್ಥಿಕ ನೆರವು ದೊರೆತು ಕೊಂಚ ಅನುಕೂಲವಾಗಿತ್ತು. ಆದರೆ ಈಗ ಈ ಯೋಜನೆ ಸ್ಥಗಿತವಾಗಿದೆ ಎಂದು ನಿಡಗುಂದಿ ತಾಲೂಕಿನ ಯಲಗೂರದ ಪ್ರಮೋದಾತ್ಮ ಗೋಶಾಲೆಯ ಕಾರ್ಯದರ್ಶಿ ಅಜಿತ್ ಕುಲಕರ್ಣಿ ಹೇಳುತ್ತಾರೆ. ವಿಜಯಪುರ(Vijayapura) ಜಿಲ್ಲೆಯಲ್ಲಿ ಮೂರು ಖಾಸಗಿ ಗೋಶಾಲೆ, ಒಂದು ಸರ್ಕಾರಿ ಗೋಶಾಲೆ ಇದೆ. ಜಿಲ್ಲೆಯ ಭೂತನಾಳದ ಬಳಿಯ ದಿ ಕ್ಯಾಟಲ್ ಬ್ರಿಡಿಂಗ್ ಮತ್ತು ಡೈರಿ ಫಾರ್ಮಿಂಗ್ ಅಸೋಸಿಯೇಶನ್ ಗೋಶಾಲೆಯಲ್ಲಿ 825, ಕಗ್ಗೋಡದ ಸಿದ್ದೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಗೋರಕ್ಷಕ ಕೇಂದ್ರದಲ್ಲಿ 507 ಮತ್ತು ಯಲಗೂರದ ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರದಲ್ಲಿ 706 ಗೋವುಗಳ ಪಾಲನೆ ಮತ್ತು ಸಂರಕ್ಷಣೆ ಮಾಡಲಾಗುತ್ತಿದೆ. ಸದ್ಯ ಗೋಶಾಲೆಗಳಲ್ಲಿನ ಹಸುಗಳ ನಿರ್ವಹಣೆಗಾಗಿ ಸರ್ಕಾರದಿಂದ ಬರಬೇಕಾದ ಅನುದಾನ ಕಳೆದ ಒಂದು ವರ್ಷಗಳಿಂದ ಬಂದಿಲ್ಲ. 

ಇದನ್ನೂ ವೀಕ್ಷಿಸಿ:  ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more