ಗೋ ಶಾಲೆ ನಿರ್ವಹಣೆಗಿಲ್ಲ ಸರ್ಕಾರದ ಅನುದಾನ! ಬರದ ನಡುವೆ ಗೋಪಾಲಕರ ಗೋಳು ಕೇಳೋರಿಲ್ಲ

ಗೋ ಶಾಲೆ ನಿರ್ವಹಣೆಗಿಲ್ಲ ಸರ್ಕಾರದ ಅನುದಾನ! ಬರದ ನಡುವೆ ಗೋಪಾಲಕರ ಗೋಳು ಕೇಳೋರಿಲ್ಲ

Published : Oct 09, 2023, 11:45 AM IST

ಗುಮ್ಮಟನಗರಿಯಲ್ಲಿ ಗೋಪಾಲಕರ‌ ಗೋಳಾಟ ಹೇಳತೀರದಂತಾಗಿದೆ. ಒಂದು ವರ್ಷದಿಂದ ಗೋ ಶಾಲೆಗಳಿಗೆ ಸರ್ಕಾರದಿಂದ ಬರಬೇಕಾದ ಅನುದಾನವೇ ಬಂದಿಲ್ಲ. ಇತ್ತ ಬರದ ನಡುವೆ ಮೇವಿನ ಕೊರತೆಯನ್ನೂ ಎದುರಿಸುತ್ತಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಗೋಶಾಲೆಗಳಲ್ಲಿ ಹಸುಗಳ ದಾಖಲಾತಿ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರಿ ಗೋಶಾಲೆಗಳಿಗೆ (cowshed) ಜಾನುವಾರುಗಳ ನಿರ್ವಹಣೆಗೆ ಅನುದಾನ ನೀಡುವ ಕೆಲಸವನ್ನ ಇಂದಿನ ಬಿಜೆಪಿ(BJP) ಸರ್ಕಾರ ಮಾಡಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಗೋಶಾಲೆ ನಿರ್ವಹಣೆಗೆ ಬ್ರೇಕ್ ಹಾಕಿದಂತೆ ಕಾಣುತ್ತಿದೆ. ಈವರೆಗೂ ಸರ್ಕಾರದಿಂದ ಸರಿಯಾಗಿ ಅನುದಾನ ಬಿಡುಗಡೆಯಾಗದೇ ಗೋಪಾಲಕರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ. ಕಳೆದ ಸರ್ಕಾರದ ಅವಧಿಯಲ್ಲಿ ಪುಣ್ಯಕೋಟಿ ದತ್ತು ಯೋಜನೆಯಡಿ ಖಾಸಗಿ ಗೋಶಾಲೆಗಳಿಗೆ ಆರ್ಥಿಕ ನೆರವು ದೊರೆತು ಕೊಂಚ ಅನುಕೂಲವಾಗಿತ್ತು. ಆದರೆ ಈಗ ಈ ಯೋಜನೆ ಸ್ಥಗಿತವಾಗಿದೆ ಎಂದು ನಿಡಗುಂದಿ ತಾಲೂಕಿನ ಯಲಗೂರದ ಪ್ರಮೋದಾತ್ಮ ಗೋಶಾಲೆಯ ಕಾರ್ಯದರ್ಶಿ ಅಜಿತ್ ಕುಲಕರ್ಣಿ ಹೇಳುತ್ತಾರೆ. ವಿಜಯಪುರ(Vijayapura) ಜಿಲ್ಲೆಯಲ್ಲಿ ಮೂರು ಖಾಸಗಿ ಗೋಶಾಲೆ, ಒಂದು ಸರ್ಕಾರಿ ಗೋಶಾಲೆ ಇದೆ. ಜಿಲ್ಲೆಯ ಭೂತನಾಳದ ಬಳಿಯ ದಿ ಕ್ಯಾಟಲ್ ಬ್ರಿಡಿಂಗ್ ಮತ್ತು ಡೈರಿ ಫಾರ್ಮಿಂಗ್ ಅಸೋಸಿಯೇಶನ್ ಗೋಶಾಲೆಯಲ್ಲಿ 825, ಕಗ್ಗೋಡದ ಸಿದ್ದೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಗೋರಕ್ಷಕ ಕೇಂದ್ರದಲ್ಲಿ 507 ಮತ್ತು ಯಲಗೂರದ ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರದಲ್ಲಿ 706 ಗೋವುಗಳ ಪಾಲನೆ ಮತ್ತು ಸಂರಕ್ಷಣೆ ಮಾಡಲಾಗುತ್ತಿದೆ. ಸದ್ಯ ಗೋಶಾಲೆಗಳಲ್ಲಿನ ಹಸುಗಳ ನಿರ್ವಹಣೆಗಾಗಿ ಸರ್ಕಾರದಿಂದ ಬರಬೇಕಾದ ಅನುದಾನ ಕಳೆದ ಒಂದು ವರ್ಷಗಳಿಂದ ಬಂದಿಲ್ಲ. 

ಇದನ್ನೂ ವೀಕ್ಷಿಸಿ:  ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more