ವರುಣನ ಮುನಿಸಿನಿಂದ ಅನ್ನದಾತರ ಬದುಕಿಗೆ ‘ಬರ’ಸಿಡಿಲು: ಉದ್ಯೋಗ ಖಾತ್ರಿ ಯೋಜನೆಯಿಂದಲೂ ಸಿಗದ ನೆರವು

ವರುಣನ ಮುನಿಸಿನಿಂದ ಅನ್ನದಾತರ ಬದುಕಿಗೆ ‘ಬರ’ಸಿಡಿಲು: ಉದ್ಯೋಗ ಖಾತ್ರಿ ಯೋಜನೆಯಿಂದಲೂ ಸಿಗದ ನೆರವು

Published : Nov 30, 2023, 09:50 AM IST

ಕರುನಾಡಿನ ಮೇಲೆ ಈ ಬಾರಿ ಬರದ ಕಾರ್ಮೋಡ ಕವಿದಿದೆ. ವರುಣನ ಮುನಿಸಿನಿಂದಾಗಿ ರೈತಾಪಿ ವರ್ಗ ಕಂಗೆಟ್ಟಿದೆ. ಬರಗಾಲದ ಸಂದರ್ಭದಲ್ಲಿ ರೈತರಿಗೆ ನೆರವಾಗಬೇಕಿದ್ದ ನರೇಗಾ ಯೋಜನೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳ್ಳ ಹಿಡಿದಿದೆ. 

ಗುಂಪುಗೂಡಿ ನಿಂತಿರೋ ಇವರೆಲ್ಲರು ಧಾರವಾಡದ(Dharwad) ಗ್ರಾಮೀಣ ಪ್ರದೇಶಗಳ ಜನರು. ಈ ಬಾರಿ ಮಳೆರಾಯ(Rain) ಕೈ ಕೊಟ್ಟ ಹಿನ್ನೆಲೆ ಕೃಷಿ ಕೆಲಸಗಳು ಸ್ಥಗಿತಗೊಂಡಿವೆ. ಜಮೀನುಗಳಲ್ಲಿ ಕೆಲಸ ಇಲ್ಲದೇ ಗ್ರಾಮೀಣ ಭಾಗದ ಜನರು ಹೊಟ್ಟೆಪಾಡಿಗಾಗಿ ಬೇರೆ ಉದ್ಯೋಗಗಳನ್ನ(Jobs) ಅರಸಿ ಪಟ್ಟಣಗಳತ್ತ ಮುಖಮಾಡಿದ್ದಾರೆ. ಪಟ್ಟಣಗಳಿಗೆ ಗುಳೆ ಬರ್ತಿರೋ ಜನರು ದಿನಗೂಲಿ ಲೆಕ್ಕದಲ್ಲಿ ಕೆಲಸ ಮಾಡಿ ಕುಟುಂಬಗಳನ್ನ ಸಾಕುತ್ತಿದ್ದಾರೆ. ಬರಗಾಲದ(Drought) ಸಂದರ್ಭದಲ್ಲಿ ರೈತರು, ಗ್ರಾಮೀಣ ಪ್ರದೇಶಗಳ ಜನರಿಗೆ ಉದ್ಯೋಗ ಕಲ್ಪಿಸಲೆಂದೇ ನರೇಗಾ ಯೋಜನೆ ಜಾರಿಯಲ್ಲಿದೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉದ್ಯೋಗ ಸೃಷ್ಟಿಸಿ ಜನರ ದುಡಿಮೆಗೆ ದಾರಿ ಮಾಡಿಕೊಡುವುದು ಈ ಯೋಜನೆ ಉದ್ದೇಶ. ಆದ್ರೆ ಧಾರವಾಡ ಜಿಲ್ಲೆಯನ್ನ ಈಗಾಗಲೇ ಬರಪೀಡಿತ ಅಂತಾ ಘೋಷಣೆ ಮಾಡಿದ್ರೂ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಗಳನ್ನ ಸೃಷ್ಟಿಸುತ್ತಿಲ್ಲ. ಉದ್ಯೋಗ ಸೃಷ್ಟಿಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.ನರೇಗಾ ಯೋಜನೆಯಡಿ ಕೆಲಸ ಸೃಷ್ಟಿಸದ ಬಗ್ಗೆ ಸಚಿವ ಸಂತೋಷ್ ಲಾಡ್ರನ್ನ  ಪ್ರಶ್ನಿಸಿದ್ರೆ, ಕೇಂದ್ರ ಸರ್ಕಾರ ಅನುದಾನ ಕಡಿತಗೊಳಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು ಎನ್ನುತ್ತಿದ್ದಾರೆ.ಗ್ರಾಮೀಣ ಪ್ರದೇಶಗಳ ಜನರನ್ನ ಆರ್ಥಿಕವಾಗಿ ಸದೃಢಗೊಳಿಸುವ ಉದ್ದೇಶದಿಂದಲೇ ಜಾರಿಗೊಳಿಸಿದ ಯೋಜನೆ ನರೇಗಾ. ಆದ್ರೆ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಮಹಾತ್ವಾಕಾಂಕ್ಷಿ ಯೋಜನೆಯೊಂದು ಜನರ ಪ್ರಯೋಜನಕ್ಕೆ ಬಾರದಂತಾಗಿರುವುದು ನಿಜಕ್ಕೂ ವಿಪರ್ಯಾಸ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕನಕದಾಸರ ಜಯಂತಿ ಇದ್ದು, 12 ರಾಶಿಗಳ ಭವಿಷ್ಯ ಹೇಗಿದೆ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more