ವರುಣನ ಮುನಿಸಿನಿಂದ ಅನ್ನದಾತರ ಬದುಕಿಗೆ ‘ಬರ’ಸಿಡಿಲು: ಉದ್ಯೋಗ ಖಾತ್ರಿ ಯೋಜನೆಯಿಂದಲೂ ಸಿಗದ ನೆರವು

ವರುಣನ ಮುನಿಸಿನಿಂದ ಅನ್ನದಾತರ ಬದುಕಿಗೆ ‘ಬರ’ಸಿಡಿಲು: ಉದ್ಯೋಗ ಖಾತ್ರಿ ಯೋಜನೆಯಿಂದಲೂ ಸಿಗದ ನೆರವು

Published : Nov 30, 2023, 09:50 AM IST

ಕರುನಾಡಿನ ಮೇಲೆ ಈ ಬಾರಿ ಬರದ ಕಾರ್ಮೋಡ ಕವಿದಿದೆ. ವರುಣನ ಮುನಿಸಿನಿಂದಾಗಿ ರೈತಾಪಿ ವರ್ಗ ಕಂಗೆಟ್ಟಿದೆ. ಬರಗಾಲದ ಸಂದರ್ಭದಲ್ಲಿ ರೈತರಿಗೆ ನೆರವಾಗಬೇಕಿದ್ದ ನರೇಗಾ ಯೋಜನೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳ್ಳ ಹಿಡಿದಿದೆ. 

ಗುಂಪುಗೂಡಿ ನಿಂತಿರೋ ಇವರೆಲ್ಲರು ಧಾರವಾಡದ(Dharwad) ಗ್ರಾಮೀಣ ಪ್ರದೇಶಗಳ ಜನರು. ಈ ಬಾರಿ ಮಳೆರಾಯ(Rain) ಕೈ ಕೊಟ್ಟ ಹಿನ್ನೆಲೆ ಕೃಷಿ ಕೆಲಸಗಳು ಸ್ಥಗಿತಗೊಂಡಿವೆ. ಜಮೀನುಗಳಲ್ಲಿ ಕೆಲಸ ಇಲ್ಲದೇ ಗ್ರಾಮೀಣ ಭಾಗದ ಜನರು ಹೊಟ್ಟೆಪಾಡಿಗಾಗಿ ಬೇರೆ ಉದ್ಯೋಗಗಳನ್ನ(Jobs) ಅರಸಿ ಪಟ್ಟಣಗಳತ್ತ ಮುಖಮಾಡಿದ್ದಾರೆ. ಪಟ್ಟಣಗಳಿಗೆ ಗುಳೆ ಬರ್ತಿರೋ ಜನರು ದಿನಗೂಲಿ ಲೆಕ್ಕದಲ್ಲಿ ಕೆಲಸ ಮಾಡಿ ಕುಟುಂಬಗಳನ್ನ ಸಾಕುತ್ತಿದ್ದಾರೆ. ಬರಗಾಲದ(Drought) ಸಂದರ್ಭದಲ್ಲಿ ರೈತರು, ಗ್ರಾಮೀಣ ಪ್ರದೇಶಗಳ ಜನರಿಗೆ ಉದ್ಯೋಗ ಕಲ್ಪಿಸಲೆಂದೇ ನರೇಗಾ ಯೋಜನೆ ಜಾರಿಯಲ್ಲಿದೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉದ್ಯೋಗ ಸೃಷ್ಟಿಸಿ ಜನರ ದುಡಿಮೆಗೆ ದಾರಿ ಮಾಡಿಕೊಡುವುದು ಈ ಯೋಜನೆ ಉದ್ದೇಶ. ಆದ್ರೆ ಧಾರವಾಡ ಜಿಲ್ಲೆಯನ್ನ ಈಗಾಗಲೇ ಬರಪೀಡಿತ ಅಂತಾ ಘೋಷಣೆ ಮಾಡಿದ್ರೂ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಗಳನ್ನ ಸೃಷ್ಟಿಸುತ್ತಿಲ್ಲ. ಉದ್ಯೋಗ ಸೃಷ್ಟಿಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.ನರೇಗಾ ಯೋಜನೆಯಡಿ ಕೆಲಸ ಸೃಷ್ಟಿಸದ ಬಗ್ಗೆ ಸಚಿವ ಸಂತೋಷ್ ಲಾಡ್ರನ್ನ  ಪ್ರಶ್ನಿಸಿದ್ರೆ, ಕೇಂದ್ರ ಸರ್ಕಾರ ಅನುದಾನ ಕಡಿತಗೊಳಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು ಎನ್ನುತ್ತಿದ್ದಾರೆ.ಗ್ರಾಮೀಣ ಪ್ರದೇಶಗಳ ಜನರನ್ನ ಆರ್ಥಿಕವಾಗಿ ಸದೃಢಗೊಳಿಸುವ ಉದ್ದೇಶದಿಂದಲೇ ಜಾರಿಗೊಳಿಸಿದ ಯೋಜನೆ ನರೇಗಾ. ಆದ್ರೆ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಮಹಾತ್ವಾಕಾಂಕ್ಷಿ ಯೋಜನೆಯೊಂದು ಜನರ ಪ್ರಯೋಜನಕ್ಕೆ ಬಾರದಂತಾಗಿರುವುದು ನಿಜಕ್ಕೂ ವಿಪರ್ಯಾಸ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕನಕದಾಸರ ಜಯಂತಿ ಇದ್ದು, 12 ರಾಶಿಗಳ ಭವಿಷ್ಯ ಹೇಗಿದೆ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more