ವರುಣನ ಮುನಿಸಿನಿಂದ ಅನ್ನದಾತರ ಬದುಕಿಗೆ ‘ಬರ’ಸಿಡಿಲು: ಉದ್ಯೋಗ ಖಾತ್ರಿ ಯೋಜನೆಯಿಂದಲೂ ಸಿಗದ ನೆರವು

ವರುಣನ ಮುನಿಸಿನಿಂದ ಅನ್ನದಾತರ ಬದುಕಿಗೆ ‘ಬರ’ಸಿಡಿಲು: ಉದ್ಯೋಗ ಖಾತ್ರಿ ಯೋಜನೆಯಿಂದಲೂ ಸಿಗದ ನೆರವು

Published : Nov 30, 2023, 09:50 AM IST

ಕರುನಾಡಿನ ಮೇಲೆ ಈ ಬಾರಿ ಬರದ ಕಾರ್ಮೋಡ ಕವಿದಿದೆ. ವರುಣನ ಮುನಿಸಿನಿಂದಾಗಿ ರೈತಾಪಿ ವರ್ಗ ಕಂಗೆಟ್ಟಿದೆ. ಬರಗಾಲದ ಸಂದರ್ಭದಲ್ಲಿ ರೈತರಿಗೆ ನೆರವಾಗಬೇಕಿದ್ದ ನರೇಗಾ ಯೋಜನೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳ್ಳ ಹಿಡಿದಿದೆ. 

ಗುಂಪುಗೂಡಿ ನಿಂತಿರೋ ಇವರೆಲ್ಲರು ಧಾರವಾಡದ(Dharwad) ಗ್ರಾಮೀಣ ಪ್ರದೇಶಗಳ ಜನರು. ಈ ಬಾರಿ ಮಳೆರಾಯ(Rain) ಕೈ ಕೊಟ್ಟ ಹಿನ್ನೆಲೆ ಕೃಷಿ ಕೆಲಸಗಳು ಸ್ಥಗಿತಗೊಂಡಿವೆ. ಜಮೀನುಗಳಲ್ಲಿ ಕೆಲಸ ಇಲ್ಲದೇ ಗ್ರಾಮೀಣ ಭಾಗದ ಜನರು ಹೊಟ್ಟೆಪಾಡಿಗಾಗಿ ಬೇರೆ ಉದ್ಯೋಗಗಳನ್ನ(Jobs) ಅರಸಿ ಪಟ್ಟಣಗಳತ್ತ ಮುಖಮಾಡಿದ್ದಾರೆ. ಪಟ್ಟಣಗಳಿಗೆ ಗುಳೆ ಬರ್ತಿರೋ ಜನರು ದಿನಗೂಲಿ ಲೆಕ್ಕದಲ್ಲಿ ಕೆಲಸ ಮಾಡಿ ಕುಟುಂಬಗಳನ್ನ ಸಾಕುತ್ತಿದ್ದಾರೆ. ಬರಗಾಲದ(Drought) ಸಂದರ್ಭದಲ್ಲಿ ರೈತರು, ಗ್ರಾಮೀಣ ಪ್ರದೇಶಗಳ ಜನರಿಗೆ ಉದ್ಯೋಗ ಕಲ್ಪಿಸಲೆಂದೇ ನರೇಗಾ ಯೋಜನೆ ಜಾರಿಯಲ್ಲಿದೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉದ್ಯೋಗ ಸೃಷ್ಟಿಸಿ ಜನರ ದುಡಿಮೆಗೆ ದಾರಿ ಮಾಡಿಕೊಡುವುದು ಈ ಯೋಜನೆ ಉದ್ದೇಶ. ಆದ್ರೆ ಧಾರವಾಡ ಜಿಲ್ಲೆಯನ್ನ ಈಗಾಗಲೇ ಬರಪೀಡಿತ ಅಂತಾ ಘೋಷಣೆ ಮಾಡಿದ್ರೂ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಗಳನ್ನ ಸೃಷ್ಟಿಸುತ್ತಿಲ್ಲ. ಉದ್ಯೋಗ ಸೃಷ್ಟಿಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.ನರೇಗಾ ಯೋಜನೆಯಡಿ ಕೆಲಸ ಸೃಷ್ಟಿಸದ ಬಗ್ಗೆ ಸಚಿವ ಸಂತೋಷ್ ಲಾಡ್ರನ್ನ  ಪ್ರಶ್ನಿಸಿದ್ರೆ, ಕೇಂದ್ರ ಸರ್ಕಾರ ಅನುದಾನ ಕಡಿತಗೊಳಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು ಎನ್ನುತ್ತಿದ್ದಾರೆ.ಗ್ರಾಮೀಣ ಪ್ರದೇಶಗಳ ಜನರನ್ನ ಆರ್ಥಿಕವಾಗಿ ಸದೃಢಗೊಳಿಸುವ ಉದ್ದೇಶದಿಂದಲೇ ಜಾರಿಗೊಳಿಸಿದ ಯೋಜನೆ ನರೇಗಾ. ಆದ್ರೆ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಮಹಾತ್ವಾಕಾಂಕ್ಷಿ ಯೋಜನೆಯೊಂದು ಜನರ ಪ್ರಯೋಜನಕ್ಕೆ ಬಾರದಂತಾಗಿರುವುದು ನಿಜಕ್ಕೂ ವಿಪರ್ಯಾಸ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕನಕದಾಸರ ಜಯಂತಿ ಇದ್ದು, 12 ರಾಶಿಗಳ ಭವಿಷ್ಯ ಹೇಗಿದೆ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more