ವರುಣನ ಮುನಿಸಿನಿಂದ ಅನ್ನದಾತರ ಬದುಕಿಗೆ ‘ಬರ’ಸಿಡಿಲು: ಉದ್ಯೋಗ ಖಾತ್ರಿ ಯೋಜನೆಯಿಂದಲೂ ಸಿಗದ ನೆರವು

ವರುಣನ ಮುನಿಸಿನಿಂದ ಅನ್ನದಾತರ ಬದುಕಿಗೆ ‘ಬರ’ಸಿಡಿಲು: ಉದ್ಯೋಗ ಖಾತ್ರಿ ಯೋಜನೆಯಿಂದಲೂ ಸಿಗದ ನೆರವು

Published : Nov 30, 2023, 09:50 AM IST

ಕರುನಾಡಿನ ಮೇಲೆ ಈ ಬಾರಿ ಬರದ ಕಾರ್ಮೋಡ ಕವಿದಿದೆ. ವರುಣನ ಮುನಿಸಿನಿಂದಾಗಿ ರೈತಾಪಿ ವರ್ಗ ಕಂಗೆಟ್ಟಿದೆ. ಬರಗಾಲದ ಸಂದರ್ಭದಲ್ಲಿ ರೈತರಿಗೆ ನೆರವಾಗಬೇಕಿದ್ದ ನರೇಗಾ ಯೋಜನೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳ್ಳ ಹಿಡಿದಿದೆ. 

ಗುಂಪುಗೂಡಿ ನಿಂತಿರೋ ಇವರೆಲ್ಲರು ಧಾರವಾಡದ(Dharwad) ಗ್ರಾಮೀಣ ಪ್ರದೇಶಗಳ ಜನರು. ಈ ಬಾರಿ ಮಳೆರಾಯ(Rain) ಕೈ ಕೊಟ್ಟ ಹಿನ್ನೆಲೆ ಕೃಷಿ ಕೆಲಸಗಳು ಸ್ಥಗಿತಗೊಂಡಿವೆ. ಜಮೀನುಗಳಲ್ಲಿ ಕೆಲಸ ಇಲ್ಲದೇ ಗ್ರಾಮೀಣ ಭಾಗದ ಜನರು ಹೊಟ್ಟೆಪಾಡಿಗಾಗಿ ಬೇರೆ ಉದ್ಯೋಗಗಳನ್ನ(Jobs) ಅರಸಿ ಪಟ್ಟಣಗಳತ್ತ ಮುಖಮಾಡಿದ್ದಾರೆ. ಪಟ್ಟಣಗಳಿಗೆ ಗುಳೆ ಬರ್ತಿರೋ ಜನರು ದಿನಗೂಲಿ ಲೆಕ್ಕದಲ್ಲಿ ಕೆಲಸ ಮಾಡಿ ಕುಟುಂಬಗಳನ್ನ ಸಾಕುತ್ತಿದ್ದಾರೆ. ಬರಗಾಲದ(Drought) ಸಂದರ್ಭದಲ್ಲಿ ರೈತರು, ಗ್ರಾಮೀಣ ಪ್ರದೇಶಗಳ ಜನರಿಗೆ ಉದ್ಯೋಗ ಕಲ್ಪಿಸಲೆಂದೇ ನರೇಗಾ ಯೋಜನೆ ಜಾರಿಯಲ್ಲಿದೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉದ್ಯೋಗ ಸೃಷ್ಟಿಸಿ ಜನರ ದುಡಿಮೆಗೆ ದಾರಿ ಮಾಡಿಕೊಡುವುದು ಈ ಯೋಜನೆ ಉದ್ದೇಶ. ಆದ್ರೆ ಧಾರವಾಡ ಜಿಲ್ಲೆಯನ್ನ ಈಗಾಗಲೇ ಬರಪೀಡಿತ ಅಂತಾ ಘೋಷಣೆ ಮಾಡಿದ್ರೂ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಗಳನ್ನ ಸೃಷ್ಟಿಸುತ್ತಿಲ್ಲ. ಉದ್ಯೋಗ ಸೃಷ್ಟಿಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.ನರೇಗಾ ಯೋಜನೆಯಡಿ ಕೆಲಸ ಸೃಷ್ಟಿಸದ ಬಗ್ಗೆ ಸಚಿವ ಸಂತೋಷ್ ಲಾಡ್ರನ್ನ  ಪ್ರಶ್ನಿಸಿದ್ರೆ, ಕೇಂದ್ರ ಸರ್ಕಾರ ಅನುದಾನ ಕಡಿತಗೊಳಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು ಎನ್ನುತ್ತಿದ್ದಾರೆ.ಗ್ರಾಮೀಣ ಪ್ರದೇಶಗಳ ಜನರನ್ನ ಆರ್ಥಿಕವಾಗಿ ಸದೃಢಗೊಳಿಸುವ ಉದ್ದೇಶದಿಂದಲೇ ಜಾರಿಗೊಳಿಸಿದ ಯೋಜನೆ ನರೇಗಾ. ಆದ್ರೆ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಮಹಾತ್ವಾಕಾಂಕ್ಷಿ ಯೋಜನೆಯೊಂದು ಜನರ ಪ್ರಯೋಜನಕ್ಕೆ ಬಾರದಂತಾಗಿರುವುದು ನಿಜಕ್ಕೂ ವಿಪರ್ಯಾಸ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕನಕದಾಸರ ಜಯಂತಿ ಇದ್ದು, 12 ರಾಶಿಗಳ ಭವಿಷ್ಯ ಹೇಗಿದೆ ?

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more