Belagavi: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಾಳು ಕೊಂಪೆಯಾದ ನೂರಾರು ಮನೆಗಳು

Belagavi: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಾಳು ಕೊಂಪೆಯಾದ ನೂರಾರು ಮನೆಗಳು

Suvarna News   | Asianet News
Published : Nov 25, 2021, 11:56 AM ISTUpdated : Nov 25, 2021, 12:01 PM IST

*  ಇರೋಕೆ ಮನೆಗಳೇ ಇಲ್ಲದೆ ಸಮುದಾಯ ಭವನಗಳಲ್ಲಿ ಒಂದು ಕಡೆ ವಾಸ
*  ಮತ್ತೊಂದು ಕಡೆ ಸರ್ಕಾರ ಕಟ್ಟಿಸಿದ ನೂರಾರು ಮನೆಗಳಿದ್ರೂ ಸಹ ಬರ್ತಿಲ್ಲ ಜನ
*  ಮನೆ ನಿರ್ಮಾಣವಾಗಿ 10 ವರ್ಷಗಳು ಕಳೆದರೂ ಮೂಲಭೂತ ಸೌಲಭ್ಯಗಳಿಲ್ಲ
 

ಚಿಕ್ಕೋಡಿ(ನ.25):  ಕೃಷ್ಣಾ ನದಿ ತೀರದಲ್ಲಿ ನೆರೆ ಬಂದು ಜನ ಮನೆ ಕಳೆದುಕೊಂಡು ದೇವಸ್ಥಾನ ಸಮುದಾಯ ಭವನಗಳಲ್ಲಿ ವಾಸವಿದ್ರೆ ಇತ್ತ ಸರ್ಕಾರ ನಿರಾಶ್ರಿತರಿಗೆ ಅಂತ ಕಟ್ಟಿದ ನೂರಾರು ಮನೆಗಳಲ್ಲಿ ಜನರೇ ಇಲ್ಲ. ಅತ್ತ ನದಿ ತೀರದಲ್ಲಿ ಮನೆ ಇಲ್ಲದೆ ಜನ ಪರಿತಪಿಸುತ್ತಿದ್ದರೆ ಇತ್ತ ಮನೆಗಳಿದ್ದರೂ ಸಹ ಜನ ಅಲ್ಲಿಗೆ ಇರೋಕೆ ಮನಸು ಮಾಡ್ತಿಲ್ಲ ಅರೆ ಅದ್ಯಾಕೆ ಜನ ಅಲ್ಲಿರೋಕೆ ಕಾಯೆ ಹಿಂದೇಟು ಹಾಕ್ತಿದಾರೆ ಅಂತೀರಾ ಈ ಸ್ಟೋರಿ ನೋಡಿ...

ಸತತ ಮೂರು ವರ್ಷಗಳ ರಣಭೀಕರ ಪ್ರವಾಹಕ್ಕೆ ಸಿಲುಕಿ ಕೃಷ್ಣಾ ನದಿ ತೀರದ ಅದೆಷ್ಟೋ ಕುಟುಂಬಗಳು ಇನ್ನೂ ಸಹ ದೇವಸ್ಥಾನ ಹಾಗೂ ಸಮುದಾಯ ಭವನಗಳಲ್ಲಿ ವಾಸವಿದೆ. ಆದರೆ ಸರ್ಕಾರವೇ ನಿರಾಶ್ರಿತರಿಗೆ ಅಂತ ಕಟ್ಟಿದ ನೂರಾರು ಸೂರುಗಳು ಜನರೇ ಇಲ್ಲದೆ ಹಾಳು ಕೊಂಪೆಯಾಗಿವೆ. ಹೌದು, ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಸ್ವತಹ ಸರ್ಕಾರದಿಂದಲೇ ನಿರ್ಮಾಣವಾದ ಮನೆಗಳು. ಮನೆ ನಿರ್ಮಾಣವಾಗಿ 10 ವರ್ಷಗಳು ಕಳೆದರೂ ಸಹ ಜನ ಇಲ್ಲಿಗೆ ಬಂದು ಇರೋಕೆ ಮನಸ್ಸು ಮಾಡುತ್ತಿಲ್ಲ.! 

Council Election: ಅಖಾಡದಲ್ಲಿರೋ ಇವರು1000 ಕೋಟಿಗಳ ಒಡೆಯ

2010-11 ಸಾಲಿನಲ್ಲಿ ರಾಯಬಾಗದ ನಿರಾಶ್ರಿತರಿಗೆ ಅಂತಾನೆ ವಾಜಪೇಯಿ ವಸತಿ ಯೋಜನೆಯಡಿ ಸುಮಾರು 8 ಎಕರೆ ವಿಸ್ತಿರ್ಣದ ಭೂ ಪ್ರದೇಶದಲ್ಲಿ ಈ ಮನೆಗಳು ನಿರ್ಮಾಣವಾಗಿವೆ. ಸರ್ಕಾರ ಕೊಟ್ಯಂತರ ರೂಪಾಯಿ ಖರ್ಚು ಮಾಡಿ ಈ ಸೂರುಗಳನ್ನೇನೋ ನಿರ್ಮಾಣ ಮಾಡಿದೆ. ಆದರೆ ಅಲ್ಲಿ ಬದುಕಲು ಮೂಲಭೂತ ಸೌಕರ್ಯಗಳನ್ನ ಅಧಿಕಾರಿಗಳು ಜನರಿಗೆ ಮಾಡಿಕೊಡುವಲ್ಲಿ ಎಡವಿದ್ದಾರೆ ಎಂದು ಜನ ಆರೋಪ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಜನ ಇಲ್ಲಿರೋಕೆ ಮನಸು ಮಾಡ್ತಿಲ್ಲ ಎನ್ನುವುದು ಜನರ ವಾದ.

ಒಟ್ಟಿನಲ್ಲಿ ದೇವರು ವರ ಕೊಟ್ಟರೂ ಸಹ ಪೂಜಾರಿ ವರ ನೀಡಲಿಲ್ಲ ಎಂಬಂತೆ ಮನೆಗಳು ನಿರ್ಮಾಣವಾಗಿ 10 ವರ್ಷಗಳೇ ಕಳೆದರೂ ಸಹ ಇಲ್ಲಿಯವರೆಗೂ ಅಧಿಕಾರಿಗಳಿಗೆ ಅಲ್ಲಿನ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ಆಗಿಲ್ಲ. ಹೀಗಾಗಿ ಸರ್ಕಾರದ ಕೋಟಿ ಕೋಟಿ ಅನುದಾನ ನೀರಲ್ಲಿ ಹುಣಸೆಹಣ್ಣು ತೊಳೆದಂತಾಗಿದೆ. ಇನ್ನಾದರೂ ಈ ಪ್ರದೇಶಕ್ಕೆ ಅಧಿಕಾರಿಗಳು ಮೂಲಭೂತ ಸೌಕರ್ಯ ಒದಗಿಸಿಕೊಡ್ತಾರಾ ಎಂಬುದನ್ನ ಕಾದು ನೋಡಬೇಕಿದೆ. 
 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more