Belagavi: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಾಳು ಕೊಂಪೆಯಾದ ನೂರಾರು ಮನೆಗಳು

Belagavi: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಾಳು ಕೊಂಪೆಯಾದ ನೂರಾರು ಮನೆಗಳು

Suvarna News   | Asianet News
Published : Nov 25, 2021, 11:56 AM ISTUpdated : Nov 25, 2021, 12:01 PM IST

*  ಇರೋಕೆ ಮನೆಗಳೇ ಇಲ್ಲದೆ ಸಮುದಾಯ ಭವನಗಳಲ್ಲಿ ಒಂದು ಕಡೆ ವಾಸ
*  ಮತ್ತೊಂದು ಕಡೆ ಸರ್ಕಾರ ಕಟ್ಟಿಸಿದ ನೂರಾರು ಮನೆಗಳಿದ್ರೂ ಸಹ ಬರ್ತಿಲ್ಲ ಜನ
*  ಮನೆ ನಿರ್ಮಾಣವಾಗಿ 10 ವರ್ಷಗಳು ಕಳೆದರೂ ಮೂಲಭೂತ ಸೌಲಭ್ಯಗಳಿಲ್ಲ
 

ಚಿಕ್ಕೋಡಿ(ನ.25):  ಕೃಷ್ಣಾ ನದಿ ತೀರದಲ್ಲಿ ನೆರೆ ಬಂದು ಜನ ಮನೆ ಕಳೆದುಕೊಂಡು ದೇವಸ್ಥಾನ ಸಮುದಾಯ ಭವನಗಳಲ್ಲಿ ವಾಸವಿದ್ರೆ ಇತ್ತ ಸರ್ಕಾರ ನಿರಾಶ್ರಿತರಿಗೆ ಅಂತ ಕಟ್ಟಿದ ನೂರಾರು ಮನೆಗಳಲ್ಲಿ ಜನರೇ ಇಲ್ಲ. ಅತ್ತ ನದಿ ತೀರದಲ್ಲಿ ಮನೆ ಇಲ್ಲದೆ ಜನ ಪರಿತಪಿಸುತ್ತಿದ್ದರೆ ಇತ್ತ ಮನೆಗಳಿದ್ದರೂ ಸಹ ಜನ ಅಲ್ಲಿಗೆ ಇರೋಕೆ ಮನಸು ಮಾಡ್ತಿಲ್ಲ ಅರೆ ಅದ್ಯಾಕೆ ಜನ ಅಲ್ಲಿರೋಕೆ ಕಾಯೆ ಹಿಂದೇಟು ಹಾಕ್ತಿದಾರೆ ಅಂತೀರಾ ಈ ಸ್ಟೋರಿ ನೋಡಿ...

ಸತತ ಮೂರು ವರ್ಷಗಳ ರಣಭೀಕರ ಪ್ರವಾಹಕ್ಕೆ ಸಿಲುಕಿ ಕೃಷ್ಣಾ ನದಿ ತೀರದ ಅದೆಷ್ಟೋ ಕುಟುಂಬಗಳು ಇನ್ನೂ ಸಹ ದೇವಸ್ಥಾನ ಹಾಗೂ ಸಮುದಾಯ ಭವನಗಳಲ್ಲಿ ವಾಸವಿದೆ. ಆದರೆ ಸರ್ಕಾರವೇ ನಿರಾಶ್ರಿತರಿಗೆ ಅಂತ ಕಟ್ಟಿದ ನೂರಾರು ಸೂರುಗಳು ಜನರೇ ಇಲ್ಲದೆ ಹಾಳು ಕೊಂಪೆಯಾಗಿವೆ. ಹೌದು, ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಸ್ವತಹ ಸರ್ಕಾರದಿಂದಲೇ ನಿರ್ಮಾಣವಾದ ಮನೆಗಳು. ಮನೆ ನಿರ್ಮಾಣವಾಗಿ 10 ವರ್ಷಗಳು ಕಳೆದರೂ ಸಹ ಜನ ಇಲ್ಲಿಗೆ ಬಂದು ಇರೋಕೆ ಮನಸ್ಸು ಮಾಡುತ್ತಿಲ್ಲ.! 

Council Election: ಅಖಾಡದಲ್ಲಿರೋ ಇವರು1000 ಕೋಟಿಗಳ ಒಡೆಯ

2010-11 ಸಾಲಿನಲ್ಲಿ ರಾಯಬಾಗದ ನಿರಾಶ್ರಿತರಿಗೆ ಅಂತಾನೆ ವಾಜಪೇಯಿ ವಸತಿ ಯೋಜನೆಯಡಿ ಸುಮಾರು 8 ಎಕರೆ ವಿಸ್ತಿರ್ಣದ ಭೂ ಪ್ರದೇಶದಲ್ಲಿ ಈ ಮನೆಗಳು ನಿರ್ಮಾಣವಾಗಿವೆ. ಸರ್ಕಾರ ಕೊಟ್ಯಂತರ ರೂಪಾಯಿ ಖರ್ಚು ಮಾಡಿ ಈ ಸೂರುಗಳನ್ನೇನೋ ನಿರ್ಮಾಣ ಮಾಡಿದೆ. ಆದರೆ ಅಲ್ಲಿ ಬದುಕಲು ಮೂಲಭೂತ ಸೌಕರ್ಯಗಳನ್ನ ಅಧಿಕಾರಿಗಳು ಜನರಿಗೆ ಮಾಡಿಕೊಡುವಲ್ಲಿ ಎಡವಿದ್ದಾರೆ ಎಂದು ಜನ ಆರೋಪ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಜನ ಇಲ್ಲಿರೋಕೆ ಮನಸು ಮಾಡ್ತಿಲ್ಲ ಎನ್ನುವುದು ಜನರ ವಾದ.

ಒಟ್ಟಿನಲ್ಲಿ ದೇವರು ವರ ಕೊಟ್ಟರೂ ಸಹ ಪೂಜಾರಿ ವರ ನೀಡಲಿಲ್ಲ ಎಂಬಂತೆ ಮನೆಗಳು ನಿರ್ಮಾಣವಾಗಿ 10 ವರ್ಷಗಳೇ ಕಳೆದರೂ ಸಹ ಇಲ್ಲಿಯವರೆಗೂ ಅಧಿಕಾರಿಗಳಿಗೆ ಅಲ್ಲಿನ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ಆಗಿಲ್ಲ. ಹೀಗಾಗಿ ಸರ್ಕಾರದ ಕೋಟಿ ಕೋಟಿ ಅನುದಾನ ನೀರಲ್ಲಿ ಹುಣಸೆಹಣ್ಣು ತೊಳೆದಂತಾಗಿದೆ. ಇನ್ನಾದರೂ ಈ ಪ್ರದೇಶಕ್ಕೆ ಅಧಿಕಾರಿಗಳು ಮೂಲಭೂತ ಸೌಕರ್ಯ ಒದಗಿಸಿಕೊಡ್ತಾರಾ ಎಂಬುದನ್ನ ಕಾದು ನೋಡಬೇಕಿದೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more