Belagavi: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಾಳು ಕೊಂಪೆಯಾದ ನೂರಾರು ಮನೆಗಳು

Belagavi: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಾಳು ಕೊಂಪೆಯಾದ ನೂರಾರು ಮನೆಗಳು

Suvarna News   | Asianet News
Published : Nov 25, 2021, 11:56 AM ISTUpdated : Nov 25, 2021, 12:01 PM IST

*  ಇರೋಕೆ ಮನೆಗಳೇ ಇಲ್ಲದೆ ಸಮುದಾಯ ಭವನಗಳಲ್ಲಿ ಒಂದು ಕಡೆ ವಾಸ
*  ಮತ್ತೊಂದು ಕಡೆ ಸರ್ಕಾರ ಕಟ್ಟಿಸಿದ ನೂರಾರು ಮನೆಗಳಿದ್ರೂ ಸಹ ಬರ್ತಿಲ್ಲ ಜನ
*  ಮನೆ ನಿರ್ಮಾಣವಾಗಿ 10 ವರ್ಷಗಳು ಕಳೆದರೂ ಮೂಲಭೂತ ಸೌಲಭ್ಯಗಳಿಲ್ಲ
 

ಚಿಕ್ಕೋಡಿ(ನ.25):  ಕೃಷ್ಣಾ ನದಿ ತೀರದಲ್ಲಿ ನೆರೆ ಬಂದು ಜನ ಮನೆ ಕಳೆದುಕೊಂಡು ದೇವಸ್ಥಾನ ಸಮುದಾಯ ಭವನಗಳಲ್ಲಿ ವಾಸವಿದ್ರೆ ಇತ್ತ ಸರ್ಕಾರ ನಿರಾಶ್ರಿತರಿಗೆ ಅಂತ ಕಟ್ಟಿದ ನೂರಾರು ಮನೆಗಳಲ್ಲಿ ಜನರೇ ಇಲ್ಲ. ಅತ್ತ ನದಿ ತೀರದಲ್ಲಿ ಮನೆ ಇಲ್ಲದೆ ಜನ ಪರಿತಪಿಸುತ್ತಿದ್ದರೆ ಇತ್ತ ಮನೆಗಳಿದ್ದರೂ ಸಹ ಜನ ಅಲ್ಲಿಗೆ ಇರೋಕೆ ಮನಸು ಮಾಡ್ತಿಲ್ಲ ಅರೆ ಅದ್ಯಾಕೆ ಜನ ಅಲ್ಲಿರೋಕೆ ಕಾಯೆ ಹಿಂದೇಟು ಹಾಕ್ತಿದಾರೆ ಅಂತೀರಾ ಈ ಸ್ಟೋರಿ ನೋಡಿ...

ಸತತ ಮೂರು ವರ್ಷಗಳ ರಣಭೀಕರ ಪ್ರವಾಹಕ್ಕೆ ಸಿಲುಕಿ ಕೃಷ್ಣಾ ನದಿ ತೀರದ ಅದೆಷ್ಟೋ ಕುಟುಂಬಗಳು ಇನ್ನೂ ಸಹ ದೇವಸ್ಥಾನ ಹಾಗೂ ಸಮುದಾಯ ಭವನಗಳಲ್ಲಿ ವಾಸವಿದೆ. ಆದರೆ ಸರ್ಕಾರವೇ ನಿರಾಶ್ರಿತರಿಗೆ ಅಂತ ಕಟ್ಟಿದ ನೂರಾರು ಸೂರುಗಳು ಜನರೇ ಇಲ್ಲದೆ ಹಾಳು ಕೊಂಪೆಯಾಗಿವೆ. ಹೌದು, ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಸ್ವತಹ ಸರ್ಕಾರದಿಂದಲೇ ನಿರ್ಮಾಣವಾದ ಮನೆಗಳು. ಮನೆ ನಿರ್ಮಾಣವಾಗಿ 10 ವರ್ಷಗಳು ಕಳೆದರೂ ಸಹ ಜನ ಇಲ್ಲಿಗೆ ಬಂದು ಇರೋಕೆ ಮನಸ್ಸು ಮಾಡುತ್ತಿಲ್ಲ.! 

Council Election: ಅಖಾಡದಲ್ಲಿರೋ ಇವರು1000 ಕೋಟಿಗಳ ಒಡೆಯ

2010-11 ಸಾಲಿನಲ್ಲಿ ರಾಯಬಾಗದ ನಿರಾಶ್ರಿತರಿಗೆ ಅಂತಾನೆ ವಾಜಪೇಯಿ ವಸತಿ ಯೋಜನೆಯಡಿ ಸುಮಾರು 8 ಎಕರೆ ವಿಸ್ತಿರ್ಣದ ಭೂ ಪ್ರದೇಶದಲ್ಲಿ ಈ ಮನೆಗಳು ನಿರ್ಮಾಣವಾಗಿವೆ. ಸರ್ಕಾರ ಕೊಟ್ಯಂತರ ರೂಪಾಯಿ ಖರ್ಚು ಮಾಡಿ ಈ ಸೂರುಗಳನ್ನೇನೋ ನಿರ್ಮಾಣ ಮಾಡಿದೆ. ಆದರೆ ಅಲ್ಲಿ ಬದುಕಲು ಮೂಲಭೂತ ಸೌಕರ್ಯಗಳನ್ನ ಅಧಿಕಾರಿಗಳು ಜನರಿಗೆ ಮಾಡಿಕೊಡುವಲ್ಲಿ ಎಡವಿದ್ದಾರೆ ಎಂದು ಜನ ಆರೋಪ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಜನ ಇಲ್ಲಿರೋಕೆ ಮನಸು ಮಾಡ್ತಿಲ್ಲ ಎನ್ನುವುದು ಜನರ ವಾದ.

ಒಟ್ಟಿನಲ್ಲಿ ದೇವರು ವರ ಕೊಟ್ಟರೂ ಸಹ ಪೂಜಾರಿ ವರ ನೀಡಲಿಲ್ಲ ಎಂಬಂತೆ ಮನೆಗಳು ನಿರ್ಮಾಣವಾಗಿ 10 ವರ್ಷಗಳೇ ಕಳೆದರೂ ಸಹ ಇಲ್ಲಿಯವರೆಗೂ ಅಧಿಕಾರಿಗಳಿಗೆ ಅಲ್ಲಿನ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ಆಗಿಲ್ಲ. ಹೀಗಾಗಿ ಸರ್ಕಾರದ ಕೋಟಿ ಕೋಟಿ ಅನುದಾನ ನೀರಲ್ಲಿ ಹುಣಸೆಹಣ್ಣು ತೊಳೆದಂತಾಗಿದೆ. ಇನ್ನಾದರೂ ಈ ಪ್ರದೇಶಕ್ಕೆ ಅಧಿಕಾರಿಗಳು ಮೂಲಭೂತ ಸೌಕರ್ಯ ಒದಗಿಸಿಕೊಡ್ತಾರಾ ಎಂಬುದನ್ನ ಕಾದು ನೋಡಬೇಕಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more