ಸಾರಿಗೆ ನೌಕರರಿಗೆ ಮತ್ತಷ್ಟು ಸಂಕಷ್ಟ: ಕ್ವಾಟರ್ಸ್‌ಗಳಿಗೆ ನೋಟಿಸ್‌..!

Apr 8, 2021, 11:52 AM IST

ವಿಜಯಪುರ(ಏ.08): ಹೋರಾಟ ನಡೆಸುತ್ತಿರುವ ಸಾರಿಗೆ ನೌಕರರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಹೌದು, ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳ ಕ್ವಾಟರ್ಸ್‌ಗಳಿಗೆ ನೋಟಿಸ್‌ ನೀಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಸ್ಯಾಟಲೈಟ್‌ ಬಸ್‌ ನಿಲ್ದಾಣದ ಬಳಿ ಇರುವ 56 ಕ್ವಾಟರ್ಸ್‌ಗಳಿಗೆ ನೋಟಿಸ್‌ ಕೊಡಲಾಗಿದೆ. 

ಸಾರಿಗೆ ಮುಷ್ಕರ: ಕೋಡಿಹಳ್ಳಿ ವಿರುದ್ಧ ಜನರ ಆಕ್ರೋಶ..!

ಏಕಾ ಏಕಿ ಮನೆ ಬಿಡಿ ಅಂದ್ರೆ ಎಲ್ಲಿಗೆ ಹೋಗಬೇಕು ಅಂತ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ. ಮಕ್ಕಳನ್ನು ಕರೆದುಕೊಂಡು ಮನೆ ಬಿಟ್ಟು ಎಲ್ಲಿಗೆ ಹೋಗೋಣ?. ಸರ್ಕಾರ ನಮಗೆ ಅನ್ಯಾಯ ಮಾಡುತ್ತಿದೆ. ನಮಗೆ ಆತ್ಮಹತ್ಯೆಯೊಂದೇ ದಾರಿ ಅಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.