ಒಂದು ಕುರ್ಚಿ.. ಇಬ್ಬರು ಅಧಿಕಾರಿಗಳ ಫೈಟ್: ಸರ್ಕಾರದ ಆದೇಶ..ಇಬ್ಬರ ನಡುವೆ ಕಿತ್ತಾಟ

ಒಂದು ಕುರ್ಚಿ.. ಇಬ್ಬರು ಅಧಿಕಾರಿಗಳ ಫೈಟ್: ಸರ್ಕಾರದ ಆದೇಶ..ಇಬ್ಬರ ನಡುವೆ ಕಿತ್ತಾಟ

Published : Aug 22, 2023, 11:24 AM IST

ಜನರು ಕಿತ್ತಾಟ ನಡೆಸೋದು ಕಾಮನ್..ಆದ್ರೆ ಇಲ್ಲಿ ಡಾಕ್ಟರ್‌ಗಳೇ ದೊಡ್ಡ ಜಗಳ ಆಡಿದ್ದಾರೆ. ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು DHOಗಳು ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿದ್ದಾರೆ. 
 

ಇಬ್ಬರು ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ.. ಕಣ್ಣೀರು ಹಾಕ್ತಿರೋ ಮಹಿಳಾ ಅಧಿಕಾರಿ.. ಈ ದೃಶ್ಯ ಕಂಡು ಬಂದಿದ್ದು ಬಾಗಲಕೋಟೆ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ. ಸರ್ಕಾರದ ವರ್ಗಾವಣೆ (Transfer)ಆದೇಶದಿಂದ ಈಗ ಒಂದೇ ಕುರ್ಚಿಗೆ ಇಬ್ಬರ ನಡುವೆ ಕಿತ್ತಾಟ ಶುರುವಾಗಿದೆ. ಬಾಗಲಕೋಟೆ(Bagalkot) ಜಿಲ್ಲಾಸ್ಪತ್ರೆಯಲ್ಲಿ DHO ಆಗಿ ಡಾ.ಜಯಶ್ರೀ ಎಮ್ಮಿ ಕಾರ್ಯನಿರ್ವಹಿಸುತ್ತಿದ್ರು. ಆದ್ರೆ ಕೆಲ ದಿನ ರಜೆ ಮೇಲೆ ಹೋಗಿ ವಾಪಸ್ ಆಗುವಷ್ಟರಲ್ಲಿ, ಇದೇ ಹುದ್ದೆಗೆ ಸರ್ಕಾರ ವಿಜಯಪುರದ DHO ಆಗಿದ್ದ ವಿಜಯಕುಮಾರ್ ಯರಗಲ್‌ರನ್ನು ನೇಮಿಸಿದೆ. ಜಯಶ್ರೀಗೆ ಯಾವುದೇ ಜಾಗ ತೊರಿಸದೇ ವರ್ಗಾವಣೆ ಮಾಡಿದೆ. ಸರ್ಕಾರದ ಈ  ಆದೇಶದ ವಿರುದ್ಧ ಸಿಟ್ಟುಗೆದ್ದ ಡಾಕ್ಟರ್ ಜಯಶ್ರೀ ಕೆಎಟಿ ಮೋರೆ ಹೋಗಿ ಸ್ಟೇ ತಂದಿದ್ದಾರೆ. ಇನ್ನು ನೀವು ನಿಮ್ಮ ಕೆಲಸ ಮುಂದುವರೆಸಿ ಎಂದು ಸಿಇಒ ಹೇಳಿದ್ದಾರೆ. ಅದ್ರಂತೆ ಕಚೇರಿಗೆ ಬಂದಿದ್ದೇನೆ ಎಂದು ಡಾ.ಜಯಶ್ರೀ ಎಮ್ಮಿ ಹೇಳ್ತಿದ್ದಾರೆ. ಕೆಎಟಿಯಿಂದ (KAT) ಸ್ಟೇ ತಂದ ಡಾಕ್ಟರ್ ಜಯಶ್ರೀ ಡಿಎಚ್ಒ ಕುರ್ಚಿ ತನಗೇ ಬಿಟ್ಟು ಕೊಡುವಂತೆ ಪಟ್ಟು ಹಿಡಿದಿದ್ದಾರೆ. ಆದ್ರೆ, ಇತ್ತ ಡಾಕ್ಟರ್ ವಿಜಯಕುಮಾರ್ ತಾನು ಸರ್ಕಾರದ ಆದೇಶದ ಪ್ರಕಾರವೇ ಬಂದಿದ್ದೇನೆ. ಆದೇಶ ಪ್ರತಿಯೂ ನನ್ನ ಬಳಿ ಇದೆ. ಇಲ್ಲಿ ತಾನು ಒಬ್ಬನೇ ಡಿಹೆಚ್‌ಒ ಎನ್ನುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಹಳ್ಳ ಹಿಡಿದ ಬಿಜೆಪಿ ಸರ್ಕಾರದ ಯೋಜನೆ: ತುಕ್ಕು ಹಿಡಿದ ‘ಪಶು ಸಂಜೀವಿನಿ’ ಆ್ಯಂಬುಲೆನ್ಸ್ !

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!