ಚಿತ್ರದುರ್ಗ: ಸರ್ಕಾರಿ ಗೋಮಾಳ ಕಬಳಿಸಲು ಅಧಿಕಾರಿಗಳು, ರಿಯಲ್ ಎಸ್ಟೇಟ್ ಏಜೆಂಟರಿಂದ ಸ್ಕೆಚ್‌?

ಚಿತ್ರದುರ್ಗ: ಸರ್ಕಾರಿ ಗೋಮಾಳ ಕಬಳಿಸಲು ಅಧಿಕಾರಿಗಳು, ರಿಯಲ್ ಎಸ್ಟೇಟ್ ಏಜೆಂಟರಿಂದ ಸ್ಕೆಚ್‌?

Published : Dec 06, 2023, 12:00 PM IST

ಚಿತ್ರದುರ್ಗ ನಗರದಕ್ಕೆ ಹೊಂದಿಕೊಂಡಿರೋ ಈ ಗ್ರಾಮದಲ್ಲಿ ನಿವೇಶನದ ಬೆಲೆ‌ ಗಗನಕ್ಕೇರಿದೆ. ಇದೇ ಕಾರಣಕ್ಕೆ ಇಲ್ಲಿನ ಸರ್ಕಾರಿ ಗೋಮಾಳದ ಮೇಲೆ ರಿಯಲ್‌ ಎಸ್ಟೇಟ್‌ ದಂಧೆಕೋರರು ಕಣ್ಣಿಟ್ಟಿದ್ದಾರೆ...ಇದು ಇಲ್ಲಿನ ಗ್ರಾಮಸ್ಥರನ್ನು ರೊಚ್ಚಿಗೆಬ್ಬಿಸಿದೆ.

ಚಿತ್ರದುರ್ಗ(ಡಿ.06):  ಅದೊಂದು ಸರ್ಕಾರಿ ಗೋಮಾಳ. ಆದ್ರೆ ನಗರಸಭೆ  ಅಧಿಕಾರಿಗಳು ಹಾಗೂ ರಿಯಲ್ ಎಸ್ಟೇಟ್ ಏಜೆಂಟರು ಶಾಮೀಲಾಗಿ 9 ಎಕರೆ ಜಮೀನನ್ನು ಕಬಳಿಸಲು ಸ್ಕೆಚ್‌ ಹಾಕಿದ್ದಾರೆ ಎಂಬ ಆರೋಪ‌ ಕೇಳಿ ಬಂದಿದ್ದು. ಆಕ್ರೋಶಗೊಂಡ ಗ್ರಾಮಸ್ಥರು ಜಮೀನನ್ನು ಉಳಿಸಲು ಹೋರಾಟಕ್ಕಿಳಿದಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಅಲ್ಲಲ್ಲಿ ಗಿಡ ಗಂಟಿಗಳು.. ಅದರ ಮಧ್ಯೆ ಅಲ್ಲೋಮದು ಇಲ್ಲೊಂದು ಟೆಂಟ್ಗಳು.. ಮತ್ತೊಂದ್ಕಡೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ... ಇದು ಚಿತ್ರದುರ್ಗ ನಗರಕ್ಕೆ ಹೊಂದಿಕೊಂಡೇ ಇರುವ ಪಿಳ್ಳೇಕೆರೆನಹಳ್ಳಿ ಗ್ರಾಮದಲ್ಲಿ ಕಂಡು ಬಂದ ದೃಶ್ಯ.. ಚಿತ್ರದುರ್ಗ ನಗರದಕ್ಕೆ ಹೊಂದಿಕೊಂಡಿರೋ ಈ ಗ್ರಾಮದಲ್ಲಿ ನಿವೇಶನದ ಬೆಲೆ‌ ಗಗನಕ್ಕೇರಿದೆ. ಇದೇ ಕಾರಣಕ್ಕೆ ಇಲ್ಲಿನ ಸರ್ಕಾರಿ ಗೋಮಾಳದ ಮೇಲೆ ರಿಯಲ್‌ ಎಸ್ಟೇಟ್‌ ದಂಧೆಕೋರರು ಕಣ್ಣಿಟ್ಟಿದ್ದಾರೆ...ಇದು ಇಲ್ಲಿನ ಗ್ರಾಮಸ್ಥರನ್ನು ರೊಚ್ಚಿಗೆಬ್ಬಿಸಿದೆ.

ಬಳ್ಳಾರಿ: ದಶಕಗಳಿಂದ ಉಳಿಮೆ ಮಾಡಿಕೊಂಡು ಬಂದಿದ್ದ ಜಮೀನು ಕೈತಪ್ಪುವ ಆತಂಕ!

ಇಲ್ಲಿನ ಒಂಬತ್ತು ಎಕರೆ ವಿಸ್ತೀರ್ಣದ ನಗರಸಭೆ ಜಮೀ‌ನನ್ನು ಕಬಳಿಸಲು‌ ಸ್ಕೆಚ್‌ ಹಾಕಿರುವ ಕೆಲ ದಂಧೆಕೋರರು, ತಮ್ಮ ಹೆಸರಿಗೆ ಖಾತೆ ಮಾಡಿಕೊಂಡಿದ್ದಾರೆ‌. ಈ‌ ಅಕ್ರಮಕ್ಕೆ ನಗರಸಭೆ ಅಧಿಕಾರಿಗಳು‌ ಸಾಥ್ ನೀಡಿದ್ದಾರೆ. ಜಮೀನಿನ, ಇ‌-ಸ್ವತ್ತು ಮಾಡಿಸಲು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಹೀಗಾಗಿ ಆಕ್ರೋಶಗೊಂಡ ಗ್ರಾಮಸ್ಥರು, ನಮ್ಮ ಜೀವ ಬೇಕಾದ್ರೆ‌ ಬಿಡ್ತೀವಿ. ಆದ್ರೆ ಸರ್ಕಾರಿ‌ ಜಾಗ ಕಬಳಿಸಲು ಬಿಡಲ್ಲ ಅಂತ ಹೋರಾಟಕ್ಕಿಳಿದಿದ್ದಾರೆ. ನಮ್ಮ ಗ್ರಾಮದ ಜಾಗದ‌ ಮೇಲೆ ನಮಗೂ ಹಕ್ಕಿದೆ. ಈ ಜಾಗವನ್ನು ಸರ್ಕಾರಿ ಶಾಲೆ ಕಟ್ಟಲು ನೀಡಿ. ರುದ್ರಭೂಮಿಗೆ ಮೀಸಲಿಡಿ ಎಂದು ಆಗ್ರಹಿಸಿದ್ದಾರೆ.

ಕಡು ಬಡವರಿಗೆ ಹಣ ಕೊಟ್ರು ಒಂದು‌ ಅಡಿ ಜಾಗವನ್ನು ಹೆಚ್ಚಾಗಿ ನೀಡಲು‌ ನಗರಸಭೆ ಮೀನಾಮೇಷ ಎಣಿಸುತ್ತೆ.. ಅಂಥದ್ರಲ್ಲಿ ಈಗ ಉಳ್ಳವರ ಹೆಸರಿಗೆ ಅಧಿಕಾರಿಗಳು ಸರ್ಕಾರಿ ಜಮೀನು ಖಾತಾ ಮಾಡಿಕೊಡ್ತಿದ್ದಾರೆ.. ಇದಕ್ಕೆ ನಾವು ಅವಕಾಶ ಕೊಡಲ್ಲ.. ಈ ಜಾಗವನ್ನು ಗ್ರಾಮದ ರುದ್ರ ಭೂಮಿಯಾಗಿ ಪರಿವರ್ತಿಸಿ.. ಇಲ್ಲ ಸ್ವಂತ ಮನೆಯಿಲ್ಲದೇ ದಶಖಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ನಿರ್ಗತಿಕರಿಗೆ ಈ ಜಾಗವನ್ನು ಕೊಡಿ ಎಂದು ಗ್ರಾಮಸ್ಥರು ಗುಡಿಸಲು ಹಾಕಿಕೊಂಡು ಪ್ರತಿಭಟಿಸುತ್ತಿದ್ದಾರೆ. 

ಚಿತ್ರದುರ್ಗದಲ್ಲಿನ ಸರ್ಕಾರಿ ಗೋಮಾಳಗಳು ರಿಯಲ್ ಎಸ್ಟೇಟ್ ದಂಧೆಕೋರರ ಪಾಲಾಗ್ತಿವೆ. ಈ ಅಕ್ರಮಕ್ಕೆ‌ ನಗರಸಭೆ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಸಾಥ್ ನೀಡಿದ್ದಾರೆಂಬ ಆರೋಪ‌ ಕೇಳಿ ಬಂದಿದೆ. ಹೀಗಾಗಿ‌ ಜಿಲ್ಲಾಡಳಿತ ಎಚ್ಚೆತ್ತು ಈ ಅಕ್ರಮಕ್ಕೆ ಬ್ರೇಕ್ ಹಾಕಿ ಸರ್ಕಾರಿ‌ ಜಾಗವನ್ನು ಉಳಿಸಲು ಮುಂದಾಗಬೇಕಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more