ದಂತ ವೈದ್ಯನ ಎಡವಟ್ಟು..ವೃದ್ಧೆ ಸುಕನ್ಯಾ ನರಳಾಟ..!

ದಂತ ವೈದ್ಯನ ಎಡವಟ್ಟು..ವೃದ್ಧೆ ಸುಕನ್ಯಾ ನರಳಾಟ..!

Published : Oct 07, 2023, 11:01 AM IST

ನಿಮ್ಗೆ ಹಲ್ಲು ನೋವು ಇದ್ಯಾ..? ರೂಟ್ ಕೆನಾಲ್ ಟ್ರೀಟ್ಮೆಂಟ್ ಅವಶ್ಯಕತೆ ಇದ್ಯಾ..? ಅದಕ್ಕಾಗಿ ಒಳ್ಳೆ ಡೆಂಟಲ್ ಕ್ಲಿನಿಕ್ ಹುಡುಕ್ತಾ ಇದೀರಾ..? ಹುಷಾರ್.. ವೈದ್ಯರ ಕೈಗೆ ಹಲ್ಲು ಕೊಡೋ ಮುನ್ನ ಈ ಸ್ಟೋರಿ ನೋಡಿ.. ವೃದ್ಧೆಯೋರ್ವಳ ಬಾಳಲ್ಲಿ ದೇವರಾಗಬೇಕಿದ್ದ ವೈದ್ಯನೊಬ್ಬ ರೋಗಿ ಜೀವನವನ್ನೆ ನರಕಕ್ಕೆ ತಳ್ಳಿದ ಕಥೆ ಇದು.
 

ಹಲ್ಲಿನ ಚಿಕಿತ್ಸೆಗೆ ಬಂದ ವೃದ್ಧೆಯೊಬ್ಬರ ಬಾಳಲ್ಲಿ ವೈದ್ಯನು ಚೆಲ್ಲಾಟವಾಡಿದ್ದಾನೆ. ರೂಟ್ ಕೆನಲ್‌ಗೆ ಚಿಕಿತ್ಸೆ ನೀಡುವಾಗ ಓವರ್ ಡೋಸ್ ಅನಸ್ತೇಷಿಯಾ ನೀಡಿದ್ದಾನೆ. ಈಗ ಆ ವೃದ್ಧೆ ನರಕಯಾತನೆ ಅನುಭವಿಸುತ್ತಿದ್ದಾಳೆ. ಚೇರ್‌ನಿಂದ ಎದ್ದು ನಿಲ್ಲಲಾಗದ ಪರಿಸ್ಥಿತಿ.. ಪ್ರತಿಯೊಂದು ಕೆಲಸಕ್ಕೂ ಪರರ ಅವಲಂಬನೆ. ಈ ವೃದ್ಧೆಯ(OLD Woman) ಈ ಹೀನಾಯ ಸ್ಥಿತಿಗೆ ಕಾರಣವಾಗಿದ್ದು ಒಬ್ಬ ವೈದ್ಯ. ವೈದ್ಯೋ ನಾರಾಯಣೋ ಹರಿ ಅಂತಾರೆ, ಆದರೆ ಈ ಡಾಕ್ಟರ್ ತನ್ನ ಯಡವಟ್ಟಿನಿಂದ ವೃದ್ಧೆ ಜೀವನವನ್ನೇ ನರಕ ಸದೃಶವಾಗಿಸಿದ್ದಾನೆ. ಅಂದ್ಹಾಗೆ ಇವರ ಹೆಸ್ರು ಸುಕನ್ಯಾ. ಎಡದವಡೆ ಹಲ್ಲು ನೋವೆಂದು ವೃದ್ಧೆ ಸುಕನ್ಯಾ 2021ರ ಫೆಬ್ರವರಿ 3ರಂದು ಚಾಮರಾಜನಗರ(Chamarajnagar) ರಥದ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್ ಸೆಂಟರ್ನಲ್ಲಿ ತೋರಿಸ್ತಾರೆ. ಆಗ ರೂಟ್ ಕೆನಲ್ ಚಿಕಿತ್ಸೆ ನೀಡುವ ಸಲುವಾಗ ವೈದ್ಯ ಮಂಜುನಾಥ್ ಅನಸ್ತೇಷಿಯಾ(anesthesia) ನೀಡಿದ್ದಾರೆ. ಆದ್ರೆ, ಅನಸ್ತೇಷಿಯಾ  ಓವರ್ ಡೋಸ್ ಆದ ಪರಿಣಾಮ ಆಕೆ ಕೋಮಾಗೆ ಜಾರಿದ್ರು. 20 ದಿನಗಳ ಬಳಿಕ ಕೋಮಾದಿಂದ ಎದ್ದ ಸುಕನ್ಯಾಗೆ ಮತ್ತೊಂದು ದೊಡ್ಡ ಆಘಾತ ಕಾದಿತ್ತು. ಆಕೆಯ ದೇಹದ ಎಡಭಾಗ ಸಂಪೂರ್ಣವಾಗಿ ನಿಯಂತ್ರಣ ಕಳೆದು ಕೊಂಡಿದೆ.. ಅಂದಿನಿಂದ ಇಂದಿನವರೆಗೂ ಸ್ವಾಧೀನ ಇಲ್ಲದೆ ಹಾಸಿಗೆ ಮೇಲೆಯೇ ಮಲಗುವಂತಾಗಿದೆ. ತಮ್ಮ ತಾಯಿಗಾದ ಅನ್ಯಾಯದ ಕುರಿತು ಪುತ್ರ ಸುಮನ್ ಜಿಲ್ಲಾ ಕನ್ಸೂಮರ್ ಕೋರ್ಟ್ಗೆ ಅರ್ಜಿ ಹಾಕಿದ್ರು. ಜಿಲ್ಲಾ ಗ್ರಾಹಕರ ವೇದಿಕೆ ಕೋರ್ಟ್ ಡಾ.ಮಂಜುನಾಥನಿಗೆ 9 ಲಕ್ಷದ 24 ಸಾವಿರದ 605 ರೂ. ದಂಡವನ್ನ ವಿಧಿಸಿದೆ. 

ಇದನ್ನೂ ವೀಕ್ಷಿಸಿ:  ಸೆಟ್‌ ಬ್ಯಾಕ್‌ ಬಿಡದಿದ್ದಕ್ಕೆ ಬಿಲ್ಡಿಂಗ್‌ ಡೆಮಾಲಿಷನ್‌: 1 ಕೋಟಿ ಲಂಚ ಪಡೆದ್ರಾ ಉಗ್ರಪ್ಪ ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!