ದಂತ ವೈದ್ಯನ ಎಡವಟ್ಟು..ವೃದ್ಧೆ ಸುಕನ್ಯಾ ನರಳಾಟ..!

ದಂತ ವೈದ್ಯನ ಎಡವಟ್ಟು..ವೃದ್ಧೆ ಸುಕನ್ಯಾ ನರಳಾಟ..!

Published : Oct 07, 2023, 11:01 AM IST

ನಿಮ್ಗೆ ಹಲ್ಲು ನೋವು ಇದ್ಯಾ..? ರೂಟ್ ಕೆನಾಲ್ ಟ್ರೀಟ್ಮೆಂಟ್ ಅವಶ್ಯಕತೆ ಇದ್ಯಾ..? ಅದಕ್ಕಾಗಿ ಒಳ್ಳೆ ಡೆಂಟಲ್ ಕ್ಲಿನಿಕ್ ಹುಡುಕ್ತಾ ಇದೀರಾ..? ಹುಷಾರ್.. ವೈದ್ಯರ ಕೈಗೆ ಹಲ್ಲು ಕೊಡೋ ಮುನ್ನ ಈ ಸ್ಟೋರಿ ನೋಡಿ.. ವೃದ್ಧೆಯೋರ್ವಳ ಬಾಳಲ್ಲಿ ದೇವರಾಗಬೇಕಿದ್ದ ವೈದ್ಯನೊಬ್ಬ ರೋಗಿ ಜೀವನವನ್ನೆ ನರಕಕ್ಕೆ ತಳ್ಳಿದ ಕಥೆ ಇದು.
 

ಹಲ್ಲಿನ ಚಿಕಿತ್ಸೆಗೆ ಬಂದ ವೃದ್ಧೆಯೊಬ್ಬರ ಬಾಳಲ್ಲಿ ವೈದ್ಯನು ಚೆಲ್ಲಾಟವಾಡಿದ್ದಾನೆ. ರೂಟ್ ಕೆನಲ್‌ಗೆ ಚಿಕಿತ್ಸೆ ನೀಡುವಾಗ ಓವರ್ ಡೋಸ್ ಅನಸ್ತೇಷಿಯಾ ನೀಡಿದ್ದಾನೆ. ಈಗ ಆ ವೃದ್ಧೆ ನರಕಯಾತನೆ ಅನುಭವಿಸುತ್ತಿದ್ದಾಳೆ. ಚೇರ್‌ನಿಂದ ಎದ್ದು ನಿಲ್ಲಲಾಗದ ಪರಿಸ್ಥಿತಿ.. ಪ್ರತಿಯೊಂದು ಕೆಲಸಕ್ಕೂ ಪರರ ಅವಲಂಬನೆ. ಈ ವೃದ್ಧೆಯ(OLD Woman) ಈ ಹೀನಾಯ ಸ್ಥಿತಿಗೆ ಕಾರಣವಾಗಿದ್ದು ಒಬ್ಬ ವೈದ್ಯ. ವೈದ್ಯೋ ನಾರಾಯಣೋ ಹರಿ ಅಂತಾರೆ, ಆದರೆ ಈ ಡಾಕ್ಟರ್ ತನ್ನ ಯಡವಟ್ಟಿನಿಂದ ವೃದ್ಧೆ ಜೀವನವನ್ನೇ ನರಕ ಸದೃಶವಾಗಿಸಿದ್ದಾನೆ. ಅಂದ್ಹಾಗೆ ಇವರ ಹೆಸ್ರು ಸುಕನ್ಯಾ. ಎಡದವಡೆ ಹಲ್ಲು ನೋವೆಂದು ವೃದ್ಧೆ ಸುಕನ್ಯಾ 2021ರ ಫೆಬ್ರವರಿ 3ರಂದು ಚಾಮರಾಜನಗರ(Chamarajnagar) ರಥದ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್ ಸೆಂಟರ್ನಲ್ಲಿ ತೋರಿಸ್ತಾರೆ. ಆಗ ರೂಟ್ ಕೆನಲ್ ಚಿಕಿತ್ಸೆ ನೀಡುವ ಸಲುವಾಗ ವೈದ್ಯ ಮಂಜುನಾಥ್ ಅನಸ್ತೇಷಿಯಾ(anesthesia) ನೀಡಿದ್ದಾರೆ. ಆದ್ರೆ, ಅನಸ್ತೇಷಿಯಾ  ಓವರ್ ಡೋಸ್ ಆದ ಪರಿಣಾಮ ಆಕೆ ಕೋಮಾಗೆ ಜಾರಿದ್ರು. 20 ದಿನಗಳ ಬಳಿಕ ಕೋಮಾದಿಂದ ಎದ್ದ ಸುಕನ್ಯಾಗೆ ಮತ್ತೊಂದು ದೊಡ್ಡ ಆಘಾತ ಕಾದಿತ್ತು. ಆಕೆಯ ದೇಹದ ಎಡಭಾಗ ಸಂಪೂರ್ಣವಾಗಿ ನಿಯಂತ್ರಣ ಕಳೆದು ಕೊಂಡಿದೆ.. ಅಂದಿನಿಂದ ಇಂದಿನವರೆಗೂ ಸ್ವಾಧೀನ ಇಲ್ಲದೆ ಹಾಸಿಗೆ ಮೇಲೆಯೇ ಮಲಗುವಂತಾಗಿದೆ. ತಮ್ಮ ತಾಯಿಗಾದ ಅನ್ಯಾಯದ ಕುರಿತು ಪುತ್ರ ಸುಮನ್ ಜಿಲ್ಲಾ ಕನ್ಸೂಮರ್ ಕೋರ್ಟ್ಗೆ ಅರ್ಜಿ ಹಾಕಿದ್ರು. ಜಿಲ್ಲಾ ಗ್ರಾಹಕರ ವೇದಿಕೆ ಕೋರ್ಟ್ ಡಾ.ಮಂಜುನಾಥನಿಗೆ 9 ಲಕ್ಷದ 24 ಸಾವಿರದ 605 ರೂ. ದಂಡವನ್ನ ವಿಧಿಸಿದೆ. 

ಇದನ್ನೂ ವೀಕ್ಷಿಸಿ:  ಸೆಟ್‌ ಬ್ಯಾಕ್‌ ಬಿಡದಿದ್ದಕ್ಕೆ ಬಿಲ್ಡಿಂಗ್‌ ಡೆಮಾಲಿಷನ್‌: 1 ಕೋಟಿ ಲಂಚ ಪಡೆದ್ರಾ ಉಗ್ರಪ್ಪ ?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!