ದಂತ ವೈದ್ಯನ ಎಡವಟ್ಟು..ವೃದ್ಧೆ ಸುಕನ್ಯಾ ನರಳಾಟ..!

ದಂತ ವೈದ್ಯನ ಎಡವಟ್ಟು..ವೃದ್ಧೆ ಸುಕನ್ಯಾ ನರಳಾಟ..!

Published : Oct 07, 2023, 11:01 AM IST

ನಿಮ್ಗೆ ಹಲ್ಲು ನೋವು ಇದ್ಯಾ..? ರೂಟ್ ಕೆನಾಲ್ ಟ್ರೀಟ್ಮೆಂಟ್ ಅವಶ್ಯಕತೆ ಇದ್ಯಾ..? ಅದಕ್ಕಾಗಿ ಒಳ್ಳೆ ಡೆಂಟಲ್ ಕ್ಲಿನಿಕ್ ಹುಡುಕ್ತಾ ಇದೀರಾ..? ಹುಷಾರ್.. ವೈದ್ಯರ ಕೈಗೆ ಹಲ್ಲು ಕೊಡೋ ಮುನ್ನ ಈ ಸ್ಟೋರಿ ನೋಡಿ.. ವೃದ್ಧೆಯೋರ್ವಳ ಬಾಳಲ್ಲಿ ದೇವರಾಗಬೇಕಿದ್ದ ವೈದ್ಯನೊಬ್ಬ ರೋಗಿ ಜೀವನವನ್ನೆ ನರಕಕ್ಕೆ ತಳ್ಳಿದ ಕಥೆ ಇದು.
 

ಹಲ್ಲಿನ ಚಿಕಿತ್ಸೆಗೆ ಬಂದ ವೃದ್ಧೆಯೊಬ್ಬರ ಬಾಳಲ್ಲಿ ವೈದ್ಯನು ಚೆಲ್ಲಾಟವಾಡಿದ್ದಾನೆ. ರೂಟ್ ಕೆನಲ್‌ಗೆ ಚಿಕಿತ್ಸೆ ನೀಡುವಾಗ ಓವರ್ ಡೋಸ್ ಅನಸ್ತೇಷಿಯಾ ನೀಡಿದ್ದಾನೆ. ಈಗ ಆ ವೃದ್ಧೆ ನರಕಯಾತನೆ ಅನುಭವಿಸುತ್ತಿದ್ದಾಳೆ. ಚೇರ್‌ನಿಂದ ಎದ್ದು ನಿಲ್ಲಲಾಗದ ಪರಿಸ್ಥಿತಿ.. ಪ್ರತಿಯೊಂದು ಕೆಲಸಕ್ಕೂ ಪರರ ಅವಲಂಬನೆ. ಈ ವೃದ್ಧೆಯ(OLD Woman) ಈ ಹೀನಾಯ ಸ್ಥಿತಿಗೆ ಕಾರಣವಾಗಿದ್ದು ಒಬ್ಬ ವೈದ್ಯ. ವೈದ್ಯೋ ನಾರಾಯಣೋ ಹರಿ ಅಂತಾರೆ, ಆದರೆ ಈ ಡಾಕ್ಟರ್ ತನ್ನ ಯಡವಟ್ಟಿನಿಂದ ವೃದ್ಧೆ ಜೀವನವನ್ನೇ ನರಕ ಸದೃಶವಾಗಿಸಿದ್ದಾನೆ. ಅಂದ್ಹಾಗೆ ಇವರ ಹೆಸ್ರು ಸುಕನ್ಯಾ. ಎಡದವಡೆ ಹಲ್ಲು ನೋವೆಂದು ವೃದ್ಧೆ ಸುಕನ್ಯಾ 2021ರ ಫೆಬ್ರವರಿ 3ರಂದು ಚಾಮರಾಜನಗರ(Chamarajnagar) ರಥದ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್ ಸೆಂಟರ್ನಲ್ಲಿ ತೋರಿಸ್ತಾರೆ. ಆಗ ರೂಟ್ ಕೆನಲ್ ಚಿಕಿತ್ಸೆ ನೀಡುವ ಸಲುವಾಗ ವೈದ್ಯ ಮಂಜುನಾಥ್ ಅನಸ್ತೇಷಿಯಾ(anesthesia) ನೀಡಿದ್ದಾರೆ. ಆದ್ರೆ, ಅನಸ್ತೇಷಿಯಾ  ಓವರ್ ಡೋಸ್ ಆದ ಪರಿಣಾಮ ಆಕೆ ಕೋಮಾಗೆ ಜಾರಿದ್ರು. 20 ದಿನಗಳ ಬಳಿಕ ಕೋಮಾದಿಂದ ಎದ್ದ ಸುಕನ್ಯಾಗೆ ಮತ್ತೊಂದು ದೊಡ್ಡ ಆಘಾತ ಕಾದಿತ್ತು. ಆಕೆಯ ದೇಹದ ಎಡಭಾಗ ಸಂಪೂರ್ಣವಾಗಿ ನಿಯಂತ್ರಣ ಕಳೆದು ಕೊಂಡಿದೆ.. ಅಂದಿನಿಂದ ಇಂದಿನವರೆಗೂ ಸ್ವಾಧೀನ ಇಲ್ಲದೆ ಹಾಸಿಗೆ ಮೇಲೆಯೇ ಮಲಗುವಂತಾಗಿದೆ. ತಮ್ಮ ತಾಯಿಗಾದ ಅನ್ಯಾಯದ ಕುರಿತು ಪುತ್ರ ಸುಮನ್ ಜಿಲ್ಲಾ ಕನ್ಸೂಮರ್ ಕೋರ್ಟ್ಗೆ ಅರ್ಜಿ ಹಾಕಿದ್ರು. ಜಿಲ್ಲಾ ಗ್ರಾಹಕರ ವೇದಿಕೆ ಕೋರ್ಟ್ ಡಾ.ಮಂಜುನಾಥನಿಗೆ 9 ಲಕ್ಷದ 24 ಸಾವಿರದ 605 ರೂ. ದಂಡವನ್ನ ವಿಧಿಸಿದೆ. 

ಇದನ್ನೂ ವೀಕ್ಷಿಸಿ:  ಸೆಟ್‌ ಬ್ಯಾಕ್‌ ಬಿಡದಿದ್ದಕ್ಕೆ ಬಿಲ್ಡಿಂಗ್‌ ಡೆಮಾಲಿಷನ್‌: 1 ಕೋಟಿ ಲಂಚ ಪಡೆದ್ರಾ ಉಗ್ರಪ್ಪ ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!