ದಂತ ವೈದ್ಯನ ಎಡವಟ್ಟು..ವೃದ್ಧೆ ಸುಕನ್ಯಾ ನರಳಾಟ..!

ದಂತ ವೈದ್ಯನ ಎಡವಟ್ಟು..ವೃದ್ಧೆ ಸುಕನ್ಯಾ ನರಳಾಟ..!

Published : Oct 07, 2023, 11:01 AM IST

ನಿಮ್ಗೆ ಹಲ್ಲು ನೋವು ಇದ್ಯಾ..? ರೂಟ್ ಕೆನಾಲ್ ಟ್ರೀಟ್ಮೆಂಟ್ ಅವಶ್ಯಕತೆ ಇದ್ಯಾ..? ಅದಕ್ಕಾಗಿ ಒಳ್ಳೆ ಡೆಂಟಲ್ ಕ್ಲಿನಿಕ್ ಹುಡುಕ್ತಾ ಇದೀರಾ..? ಹುಷಾರ್.. ವೈದ್ಯರ ಕೈಗೆ ಹಲ್ಲು ಕೊಡೋ ಮುನ್ನ ಈ ಸ್ಟೋರಿ ನೋಡಿ.. ವೃದ್ಧೆಯೋರ್ವಳ ಬಾಳಲ್ಲಿ ದೇವರಾಗಬೇಕಿದ್ದ ವೈದ್ಯನೊಬ್ಬ ರೋಗಿ ಜೀವನವನ್ನೆ ನರಕಕ್ಕೆ ತಳ್ಳಿದ ಕಥೆ ಇದು.
 

ಹಲ್ಲಿನ ಚಿಕಿತ್ಸೆಗೆ ಬಂದ ವೃದ್ಧೆಯೊಬ್ಬರ ಬಾಳಲ್ಲಿ ವೈದ್ಯನು ಚೆಲ್ಲಾಟವಾಡಿದ್ದಾನೆ. ರೂಟ್ ಕೆನಲ್‌ಗೆ ಚಿಕಿತ್ಸೆ ನೀಡುವಾಗ ಓವರ್ ಡೋಸ್ ಅನಸ್ತೇಷಿಯಾ ನೀಡಿದ್ದಾನೆ. ಈಗ ಆ ವೃದ್ಧೆ ನರಕಯಾತನೆ ಅನುಭವಿಸುತ್ತಿದ್ದಾಳೆ. ಚೇರ್‌ನಿಂದ ಎದ್ದು ನಿಲ್ಲಲಾಗದ ಪರಿಸ್ಥಿತಿ.. ಪ್ರತಿಯೊಂದು ಕೆಲಸಕ್ಕೂ ಪರರ ಅವಲಂಬನೆ. ಈ ವೃದ್ಧೆಯ(OLD Woman) ಈ ಹೀನಾಯ ಸ್ಥಿತಿಗೆ ಕಾರಣವಾಗಿದ್ದು ಒಬ್ಬ ವೈದ್ಯ. ವೈದ್ಯೋ ನಾರಾಯಣೋ ಹರಿ ಅಂತಾರೆ, ಆದರೆ ಈ ಡಾಕ್ಟರ್ ತನ್ನ ಯಡವಟ್ಟಿನಿಂದ ವೃದ್ಧೆ ಜೀವನವನ್ನೇ ನರಕ ಸದೃಶವಾಗಿಸಿದ್ದಾನೆ. ಅಂದ್ಹಾಗೆ ಇವರ ಹೆಸ್ರು ಸುಕನ್ಯಾ. ಎಡದವಡೆ ಹಲ್ಲು ನೋವೆಂದು ವೃದ್ಧೆ ಸುಕನ್ಯಾ 2021ರ ಫೆಬ್ರವರಿ 3ರಂದು ಚಾಮರಾಜನಗರ(Chamarajnagar) ರಥದ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್ ಸೆಂಟರ್ನಲ್ಲಿ ತೋರಿಸ್ತಾರೆ. ಆಗ ರೂಟ್ ಕೆನಲ್ ಚಿಕಿತ್ಸೆ ನೀಡುವ ಸಲುವಾಗ ವೈದ್ಯ ಮಂಜುನಾಥ್ ಅನಸ್ತೇಷಿಯಾ(anesthesia) ನೀಡಿದ್ದಾರೆ. ಆದ್ರೆ, ಅನಸ್ತೇಷಿಯಾ  ಓವರ್ ಡೋಸ್ ಆದ ಪರಿಣಾಮ ಆಕೆ ಕೋಮಾಗೆ ಜಾರಿದ್ರು. 20 ದಿನಗಳ ಬಳಿಕ ಕೋಮಾದಿಂದ ಎದ್ದ ಸುಕನ್ಯಾಗೆ ಮತ್ತೊಂದು ದೊಡ್ಡ ಆಘಾತ ಕಾದಿತ್ತು. ಆಕೆಯ ದೇಹದ ಎಡಭಾಗ ಸಂಪೂರ್ಣವಾಗಿ ನಿಯಂತ್ರಣ ಕಳೆದು ಕೊಂಡಿದೆ.. ಅಂದಿನಿಂದ ಇಂದಿನವರೆಗೂ ಸ್ವಾಧೀನ ಇಲ್ಲದೆ ಹಾಸಿಗೆ ಮೇಲೆಯೇ ಮಲಗುವಂತಾಗಿದೆ. ತಮ್ಮ ತಾಯಿಗಾದ ಅನ್ಯಾಯದ ಕುರಿತು ಪುತ್ರ ಸುಮನ್ ಜಿಲ್ಲಾ ಕನ್ಸೂಮರ್ ಕೋರ್ಟ್ಗೆ ಅರ್ಜಿ ಹಾಕಿದ್ರು. ಜಿಲ್ಲಾ ಗ್ರಾಹಕರ ವೇದಿಕೆ ಕೋರ್ಟ್ ಡಾ.ಮಂಜುನಾಥನಿಗೆ 9 ಲಕ್ಷದ 24 ಸಾವಿರದ 605 ರೂ. ದಂಡವನ್ನ ವಿಧಿಸಿದೆ. 

ಇದನ್ನೂ ವೀಕ್ಷಿಸಿ:  ಸೆಟ್‌ ಬ್ಯಾಕ್‌ ಬಿಡದಿದ್ದಕ್ಕೆ ಬಿಲ್ಡಿಂಗ್‌ ಡೆಮಾಲಿಷನ್‌: 1 ಕೋಟಿ ಲಂಚ ಪಡೆದ್ರಾ ಉಗ್ರಪ್ಪ ?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ