ದಂತ ವೈದ್ಯನ ಎಡವಟ್ಟು..ವೃದ್ಧೆ ಸುಕನ್ಯಾ ನರಳಾಟ..!

ದಂತ ವೈದ್ಯನ ಎಡವಟ್ಟು..ವೃದ್ಧೆ ಸುಕನ್ಯಾ ನರಳಾಟ..!

Published : Oct 07, 2023, 11:01 AM IST

ನಿಮ್ಗೆ ಹಲ್ಲು ನೋವು ಇದ್ಯಾ..? ರೂಟ್ ಕೆನಾಲ್ ಟ್ರೀಟ್ಮೆಂಟ್ ಅವಶ್ಯಕತೆ ಇದ್ಯಾ..? ಅದಕ್ಕಾಗಿ ಒಳ್ಳೆ ಡೆಂಟಲ್ ಕ್ಲಿನಿಕ್ ಹುಡುಕ್ತಾ ಇದೀರಾ..? ಹುಷಾರ್.. ವೈದ್ಯರ ಕೈಗೆ ಹಲ್ಲು ಕೊಡೋ ಮುನ್ನ ಈ ಸ್ಟೋರಿ ನೋಡಿ.. ವೃದ್ಧೆಯೋರ್ವಳ ಬಾಳಲ್ಲಿ ದೇವರಾಗಬೇಕಿದ್ದ ವೈದ್ಯನೊಬ್ಬ ರೋಗಿ ಜೀವನವನ್ನೆ ನರಕಕ್ಕೆ ತಳ್ಳಿದ ಕಥೆ ಇದು.
 

ಹಲ್ಲಿನ ಚಿಕಿತ್ಸೆಗೆ ಬಂದ ವೃದ್ಧೆಯೊಬ್ಬರ ಬಾಳಲ್ಲಿ ವೈದ್ಯನು ಚೆಲ್ಲಾಟವಾಡಿದ್ದಾನೆ. ರೂಟ್ ಕೆನಲ್‌ಗೆ ಚಿಕಿತ್ಸೆ ನೀಡುವಾಗ ಓವರ್ ಡೋಸ್ ಅನಸ್ತೇಷಿಯಾ ನೀಡಿದ್ದಾನೆ. ಈಗ ಆ ವೃದ್ಧೆ ನರಕಯಾತನೆ ಅನುಭವಿಸುತ್ತಿದ್ದಾಳೆ. ಚೇರ್‌ನಿಂದ ಎದ್ದು ನಿಲ್ಲಲಾಗದ ಪರಿಸ್ಥಿತಿ.. ಪ್ರತಿಯೊಂದು ಕೆಲಸಕ್ಕೂ ಪರರ ಅವಲಂಬನೆ. ಈ ವೃದ್ಧೆಯ(OLD Woman) ಈ ಹೀನಾಯ ಸ್ಥಿತಿಗೆ ಕಾರಣವಾಗಿದ್ದು ಒಬ್ಬ ವೈದ್ಯ. ವೈದ್ಯೋ ನಾರಾಯಣೋ ಹರಿ ಅಂತಾರೆ, ಆದರೆ ಈ ಡಾಕ್ಟರ್ ತನ್ನ ಯಡವಟ್ಟಿನಿಂದ ವೃದ್ಧೆ ಜೀವನವನ್ನೇ ನರಕ ಸದೃಶವಾಗಿಸಿದ್ದಾನೆ. ಅಂದ್ಹಾಗೆ ಇವರ ಹೆಸ್ರು ಸುಕನ್ಯಾ. ಎಡದವಡೆ ಹಲ್ಲು ನೋವೆಂದು ವೃದ್ಧೆ ಸುಕನ್ಯಾ 2021ರ ಫೆಬ್ರವರಿ 3ರಂದು ಚಾಮರಾಜನಗರ(Chamarajnagar) ರಥದ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್ ಸೆಂಟರ್ನಲ್ಲಿ ತೋರಿಸ್ತಾರೆ. ಆಗ ರೂಟ್ ಕೆನಲ್ ಚಿಕಿತ್ಸೆ ನೀಡುವ ಸಲುವಾಗ ವೈದ್ಯ ಮಂಜುನಾಥ್ ಅನಸ್ತೇಷಿಯಾ(anesthesia) ನೀಡಿದ್ದಾರೆ. ಆದ್ರೆ, ಅನಸ್ತೇಷಿಯಾ  ಓವರ್ ಡೋಸ್ ಆದ ಪರಿಣಾಮ ಆಕೆ ಕೋಮಾಗೆ ಜಾರಿದ್ರು. 20 ದಿನಗಳ ಬಳಿಕ ಕೋಮಾದಿಂದ ಎದ್ದ ಸುಕನ್ಯಾಗೆ ಮತ್ತೊಂದು ದೊಡ್ಡ ಆಘಾತ ಕಾದಿತ್ತು. ಆಕೆಯ ದೇಹದ ಎಡಭಾಗ ಸಂಪೂರ್ಣವಾಗಿ ನಿಯಂತ್ರಣ ಕಳೆದು ಕೊಂಡಿದೆ.. ಅಂದಿನಿಂದ ಇಂದಿನವರೆಗೂ ಸ್ವಾಧೀನ ಇಲ್ಲದೆ ಹಾಸಿಗೆ ಮೇಲೆಯೇ ಮಲಗುವಂತಾಗಿದೆ. ತಮ್ಮ ತಾಯಿಗಾದ ಅನ್ಯಾಯದ ಕುರಿತು ಪುತ್ರ ಸುಮನ್ ಜಿಲ್ಲಾ ಕನ್ಸೂಮರ್ ಕೋರ್ಟ್ಗೆ ಅರ್ಜಿ ಹಾಕಿದ್ರು. ಜಿಲ್ಲಾ ಗ್ರಾಹಕರ ವೇದಿಕೆ ಕೋರ್ಟ್ ಡಾ.ಮಂಜುನಾಥನಿಗೆ 9 ಲಕ್ಷದ 24 ಸಾವಿರದ 605 ರೂ. ದಂಡವನ್ನ ವಿಧಿಸಿದೆ. 

ಇದನ್ನೂ ವೀಕ್ಷಿಸಿ:  ಸೆಟ್‌ ಬ್ಯಾಕ್‌ ಬಿಡದಿದ್ದಕ್ಕೆ ಬಿಲ್ಡಿಂಗ್‌ ಡೆಮಾಲಿಷನ್‌: 1 ಕೋಟಿ ಲಂಚ ಪಡೆದ್ರಾ ಉಗ್ರಪ್ಪ ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?