'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ನಾಟಕಕ್ಕೆ ತಡೆಯಾಜ್ಞೆ ಕೋರಿ ಪಿಐಎಲ್ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನಕ್ಕೆ ವಿರೋಧ ವ್ಯಕ್ತವಾಗಿದ್ದು, ಹೈಕೊರ್ಟ್ಗೆ ಒಂದು ಪಿಐಎಲ್ ಹಾಕಬೇಕು ಅನ್ನುವ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಮೈಸೂರಿನಲ್ಲಿ ತನ್ವೀರ್ ಸೇಠ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟ ನಡೆಸುತ್ತೇನೆ. ಇತಿಹಾಸ ಪುಟಗಳಲ್ಲಿರುವ ನೈಜತೆಯನ್ನು ಬಿಟ್ಟು ಆಯ್ದ ಭಾಗಗಳನ್ನು ಮಾತ್ರ ತೋರಿಸಿ, ಟಿಪ್ಪುವಿನ ನೈಜ ಬಣ್ಣ ಇದೆ ಎಂದು ತೋರಿಸುವುದು ದೇಶಕ್ಕೆ ತೊಂದರೆ ಕೊಡುವಂತಹ ಕೆಲಸವಾಗಿದೆ ಎಂದು ಅವರು ಹೇಳಿದ್ದಾರೆ.
ಶ್ರೀ ರವಿಶಂಕರ್ ಗುರೂಜಿಗೆ 'ಗಾಂಧಿ ಪೀಸ್ ಪಿಲಿಗ್ರಿಮ್' ಪ್ರಶಸ್ತಿ ಪ್ರದಾನ