Mobile; ಹತ್ತಿಸಿಕೊಂಡ ಮೇನಿಯಾ ಬಿಟ್ಟೋಗುತ್ತಾ!... ಕುಮಟಾ ಕಾಲೇಜಲ್ಲಿ ಮೊಬೈಲ್ ರೇಡ್!

Mobile; ಹತ್ತಿಸಿಕೊಂಡ ಮೇನಿಯಾ ಬಿಟ್ಟೋಗುತ್ತಾ!... ಕುಮಟಾ ಕಾಲೇಜಲ್ಲಿ ಮೊಬೈಲ್ ರೇಡ್!

Published : Nov 17, 2021, 09:30 PM ISTUpdated : Nov 17, 2021, 09:32 PM IST

* ಆನ್‌ಲೈನ್ ಕ್ಲಾಸ್ ಹಿನ್ನೆಲೆ ಮೂಲಕ ವಿದ್ಯಾರ್ಥಿಗಳ ಕೈಗೆ ಬಂದಿದ್ದ ಮೊಬೈಲ್ 
* ಭೌತಿಕ ತರಗತಿ ಆರಂಭವಾದ್ರೂ, ಕಡಿಮೆಯಾಗದ ಮೊಬೈಲ್ ಬಳಸುವ ಅಭ್ಯಾಸ
* ತರಗತಿಯಲ್ಲೂ ಚಾಟಿಂಗ್, ಫೇಸ್ ಬುಕ್ ಹಾಗೂ  ಯುಟ್ಯೂಬ್‌ನಲ್ಲಿ ಕಾಲಹರಣ
* ವಿದ್ಯಾರ್ಥಿಗಳ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಬಿಸಿ ಮುಟ್ಟಿಸಿದ ಸಿಬ್ಬಂದಿ
* ತಪಾಸಣೆ ನಡೆಸಿದ ಶಿಕ್ಷಕರಿಂದ ಸುಮಾರು 250ಕ್ಕೂ ಹೆಚ್ಚು ಮೊಬೈಲ್‌ಗಳು ವಶಕ್ಕೆ

ಕುಮಟಾ(ನ. 17)  ಕೋವಿಡ್ (Coronavirus) ಮಹಾಮಾರಿಯಿಂದ ಶಾಲಾ- ಕಾಲೇಜುಗಳ (School) ಬಾಗಿಲು ಮುಚ್ಚಿ ಆನ್‌ಲೈನ್ (Online) ಕ್ಲಾಸ್ ಪ್ರಾರಂಭದ ಮೂಲಕ ಮಕ್ಕಳ ಕೈಗೆ ಮೊಬೈಲ್ (Mobile) ಬರುವಂತಾಗಿತ್ತು. ಆದರೆ, ಇದೀಗ ಶಾಲಾ- ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಪ್ರಾರಂಭವಾದ್ರೂ, ಪಾಠ ಕೇಳುವುದಕ್ಕಿಂತ ಮೊಬೈಲ್ ಬಳಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಇದೇ ಕಾರಣಕ್ಕೆ ಕುಮಟಾದ ಕಾಲೇಜೊಂದರಲ್ಲಿ ತಪಾಸಣೆ ನಡೆಸಿದ ಶಿಕ್ಷಕರು ಸುಮಾರು 250 ಕ್ಕೂ ಹೆಚ್ಚು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಬಸ್ ನಲ್ಲಿ ಕಿರಿಕಿರಿಯಾಗುವಂತೆ ಮೊಬೈಲ್ ಬಳಸಿದ್ರೆ ಕೆಳಗೆ ಇಳಿಸ್ತಾರೆ ಹುಷಾರ್!

ಹೌದು, ಕುಮಟಾ ಪಟ್ಟಣದ ಹನಮಂತ ಬೆಣ್ಣೆ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರು ತರಗತಿಗೆ ಆಗಮಿಸಿದ್ರೂ ವಿದ್ಯಾರ್ಥಿಗಳು ಮಾತ್ರ ಮೊಬೈಲ್ ಹಿಡಿದುಕೊಂಡು ಚಾಟಿಂಗ್, ಫೇಸ್ ಬುಕ್ ಹಾಗೂ  ಯುಟ್ಯೂಬ್ ಗಳಲ್ಲಿ ಕಾಲಹರಣ  ಮಾಡುತ್ತಿದ್ದರು‌. ಇದು ಪ್ರಾಂಶುಪಾಲರ ಗಮನಕ್ಕೆ ಬಂದಿದ್ದು,  ಎಲ್ಲಾ ವಿದ್ಯಾರ್ಥಿಗಳ ಮೊಬೈಲ್‌ ಗಳನ್ನು ವಶಪಡಿಸಿಕೊಂಡು ಬಿಸಿ ಮುಟ್ಟಿಸಿದ್ದಾರೆ. ಇನ್ನು ಪಾಲಕರು ಖುದ್ದಾಗಿ ಬಂದು ಅವರವರ ಮಕ್ಕಳ ಮೊಬೈಲ್ ತೆಗೆದುಕೊಂಡು ಹೋಗಲು ಪ್ರಾಂಶುಪಾಲರು ಸೂಚಿಸಿದ್ದಾರೆ. ಆದರೆ, ಕೆಲವು ವಿದ್ಯಾರ್ಥಿಗಳು ಕಂಡ ಕಂಡವರನ್ನು ಪಾಲಕರೆಂದು ಹೇಳಿ ಮೊಬೈಲ್ ಪಡೆಯುವ ಪ್ರಯತ್ನ ಮಾಡಿ ಸಿಕ್ಕಿ ಬಿದ್ದ ಪ್ರಕರಣವೂ ನಡೆದಿದೆ. ಪ್ರಾಂಶುಪಾಲರು ಹೇಳೋ ಪ್ರಕಾರ, 'ತರಗತಿ ಆರಂಭವಾಗುವುದಕ್ಕೆ ಮುನ್ನವೇ  ಶಾಲಾ ಕೊಠಡಿಗಳಲ್ಲಿ ಮೊಬೈಲ್ ಬಳಸಬಾರದೆಂದು ವಿದ್ಯಾರ್ಥಿಗಳಿಗೆ ತಾಕೀತು ಮಾಡಲಾಗಿತ್ತು. ಮುನ್ನೆಚ್ಚರಿಕೆಯ ಹೊರತಾಗಿಯೂ ವಿಧ್ಯಾರ್ಥಿಗಳು ಮೊಬೈಲ್ ಬಳಸಿದ್ದರಿಂದ ವಶಪಡಿಸಿಕೊಂಡಿದ್ದೇವೆ' ಎಂದು ಕಾಲೇಜು ಪ್ರಾಂಶುಪಾಲ ಸತೀಶ ನಾಯ್ಕ ತಿಳಿಸಿದ್ದಾರೆ.

 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ