Mobile; ಹತ್ತಿಸಿಕೊಂಡ ಮೇನಿಯಾ ಬಿಟ್ಟೋಗುತ್ತಾ!... ಕುಮಟಾ ಕಾಲೇಜಲ್ಲಿ ಮೊಬೈಲ್ ರೇಡ್!

Mobile; ಹತ್ತಿಸಿಕೊಂಡ ಮೇನಿಯಾ ಬಿಟ್ಟೋಗುತ್ತಾ!... ಕುಮಟಾ ಕಾಲೇಜಲ್ಲಿ ಮೊಬೈಲ್ ರೇಡ್!

Published : Nov 17, 2021, 09:30 PM ISTUpdated : Nov 17, 2021, 09:32 PM IST

* ಆನ್‌ಲೈನ್ ಕ್ಲಾಸ್ ಹಿನ್ನೆಲೆ ಮೂಲಕ ವಿದ್ಯಾರ್ಥಿಗಳ ಕೈಗೆ ಬಂದಿದ್ದ ಮೊಬೈಲ್ 
* ಭೌತಿಕ ತರಗತಿ ಆರಂಭವಾದ್ರೂ, ಕಡಿಮೆಯಾಗದ ಮೊಬೈಲ್ ಬಳಸುವ ಅಭ್ಯಾಸ
* ತರಗತಿಯಲ್ಲೂ ಚಾಟಿಂಗ್, ಫೇಸ್ ಬುಕ್ ಹಾಗೂ  ಯುಟ್ಯೂಬ್‌ನಲ್ಲಿ ಕಾಲಹರಣ
* ವಿದ್ಯಾರ್ಥಿಗಳ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಬಿಸಿ ಮುಟ್ಟಿಸಿದ ಸಿಬ್ಬಂದಿ
* ತಪಾಸಣೆ ನಡೆಸಿದ ಶಿಕ್ಷಕರಿಂದ ಸುಮಾರು 250ಕ್ಕೂ ಹೆಚ್ಚು ಮೊಬೈಲ್‌ಗಳು ವಶಕ್ಕೆ

ಕುಮಟಾ(ನ. 17)  ಕೋವಿಡ್ (Coronavirus) ಮಹಾಮಾರಿಯಿಂದ ಶಾಲಾ- ಕಾಲೇಜುಗಳ (School) ಬಾಗಿಲು ಮುಚ್ಚಿ ಆನ್‌ಲೈನ್ (Online) ಕ್ಲಾಸ್ ಪ್ರಾರಂಭದ ಮೂಲಕ ಮಕ್ಕಳ ಕೈಗೆ ಮೊಬೈಲ್ (Mobile) ಬರುವಂತಾಗಿತ್ತು. ಆದರೆ, ಇದೀಗ ಶಾಲಾ- ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಪ್ರಾರಂಭವಾದ್ರೂ, ಪಾಠ ಕೇಳುವುದಕ್ಕಿಂತ ಮೊಬೈಲ್ ಬಳಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಇದೇ ಕಾರಣಕ್ಕೆ ಕುಮಟಾದ ಕಾಲೇಜೊಂದರಲ್ಲಿ ತಪಾಸಣೆ ನಡೆಸಿದ ಶಿಕ್ಷಕರು ಸುಮಾರು 250 ಕ್ಕೂ ಹೆಚ್ಚು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಬಸ್ ನಲ್ಲಿ ಕಿರಿಕಿರಿಯಾಗುವಂತೆ ಮೊಬೈಲ್ ಬಳಸಿದ್ರೆ ಕೆಳಗೆ ಇಳಿಸ್ತಾರೆ ಹುಷಾರ್!

ಹೌದು, ಕುಮಟಾ ಪಟ್ಟಣದ ಹನಮಂತ ಬೆಣ್ಣೆ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರು ತರಗತಿಗೆ ಆಗಮಿಸಿದ್ರೂ ವಿದ್ಯಾರ್ಥಿಗಳು ಮಾತ್ರ ಮೊಬೈಲ್ ಹಿಡಿದುಕೊಂಡು ಚಾಟಿಂಗ್, ಫೇಸ್ ಬುಕ್ ಹಾಗೂ  ಯುಟ್ಯೂಬ್ ಗಳಲ್ಲಿ ಕಾಲಹರಣ  ಮಾಡುತ್ತಿದ್ದರು‌. ಇದು ಪ್ರಾಂಶುಪಾಲರ ಗಮನಕ್ಕೆ ಬಂದಿದ್ದು,  ಎಲ್ಲಾ ವಿದ್ಯಾರ್ಥಿಗಳ ಮೊಬೈಲ್‌ ಗಳನ್ನು ವಶಪಡಿಸಿಕೊಂಡು ಬಿಸಿ ಮುಟ್ಟಿಸಿದ್ದಾರೆ. ಇನ್ನು ಪಾಲಕರು ಖುದ್ದಾಗಿ ಬಂದು ಅವರವರ ಮಕ್ಕಳ ಮೊಬೈಲ್ ತೆಗೆದುಕೊಂಡು ಹೋಗಲು ಪ್ರಾಂಶುಪಾಲರು ಸೂಚಿಸಿದ್ದಾರೆ. ಆದರೆ, ಕೆಲವು ವಿದ್ಯಾರ್ಥಿಗಳು ಕಂಡ ಕಂಡವರನ್ನು ಪಾಲಕರೆಂದು ಹೇಳಿ ಮೊಬೈಲ್ ಪಡೆಯುವ ಪ್ರಯತ್ನ ಮಾಡಿ ಸಿಕ್ಕಿ ಬಿದ್ದ ಪ್ರಕರಣವೂ ನಡೆದಿದೆ. ಪ್ರಾಂಶುಪಾಲರು ಹೇಳೋ ಪ್ರಕಾರ, 'ತರಗತಿ ಆರಂಭವಾಗುವುದಕ್ಕೆ ಮುನ್ನವೇ  ಶಾಲಾ ಕೊಠಡಿಗಳಲ್ಲಿ ಮೊಬೈಲ್ ಬಳಸಬಾರದೆಂದು ವಿದ್ಯಾರ್ಥಿಗಳಿಗೆ ತಾಕೀತು ಮಾಡಲಾಗಿತ್ತು. ಮುನ್ನೆಚ್ಚರಿಕೆಯ ಹೊರತಾಗಿಯೂ ವಿಧ್ಯಾರ್ಥಿಗಳು ಮೊಬೈಲ್ ಬಳಸಿದ್ದರಿಂದ ವಶಪಡಿಸಿಕೊಂಡಿದ್ದೇವೆ' ಎಂದು ಕಾಲೇಜು ಪ್ರಾಂಶುಪಾಲ ಸತೀಶ ನಾಯ್ಕ ತಿಳಿಸಿದ್ದಾರೆ.

 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!