Mobile; ಹತ್ತಿಸಿಕೊಂಡ ಮೇನಿಯಾ ಬಿಟ್ಟೋಗುತ್ತಾ!... ಕುಮಟಾ ಕಾಲೇಜಲ್ಲಿ ಮೊಬೈಲ್ ರೇಡ್!

Mobile; ಹತ್ತಿಸಿಕೊಂಡ ಮೇನಿಯಾ ಬಿಟ್ಟೋಗುತ್ತಾ!... ಕುಮಟಾ ಕಾಲೇಜಲ್ಲಿ ಮೊಬೈಲ್ ರೇಡ್!

Published : Nov 17, 2021, 09:30 PM ISTUpdated : Nov 17, 2021, 09:32 PM IST

* ಆನ್‌ಲೈನ್ ಕ್ಲಾಸ್ ಹಿನ್ನೆಲೆ ಮೂಲಕ ವಿದ್ಯಾರ್ಥಿಗಳ ಕೈಗೆ ಬಂದಿದ್ದ ಮೊಬೈಲ್ 
* ಭೌತಿಕ ತರಗತಿ ಆರಂಭವಾದ್ರೂ, ಕಡಿಮೆಯಾಗದ ಮೊಬೈಲ್ ಬಳಸುವ ಅಭ್ಯಾಸ
* ತರಗತಿಯಲ್ಲೂ ಚಾಟಿಂಗ್, ಫೇಸ್ ಬುಕ್ ಹಾಗೂ  ಯುಟ್ಯೂಬ್‌ನಲ್ಲಿ ಕಾಲಹರಣ
* ವಿದ್ಯಾರ್ಥಿಗಳ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಬಿಸಿ ಮುಟ್ಟಿಸಿದ ಸಿಬ್ಬಂದಿ
* ತಪಾಸಣೆ ನಡೆಸಿದ ಶಿಕ್ಷಕರಿಂದ ಸುಮಾರು 250ಕ್ಕೂ ಹೆಚ್ಚು ಮೊಬೈಲ್‌ಗಳು ವಶಕ್ಕೆ

ಕುಮಟಾ(ನ. 17)  ಕೋವಿಡ್ (Coronavirus) ಮಹಾಮಾರಿಯಿಂದ ಶಾಲಾ- ಕಾಲೇಜುಗಳ (School) ಬಾಗಿಲು ಮುಚ್ಚಿ ಆನ್‌ಲೈನ್ (Online) ಕ್ಲಾಸ್ ಪ್ರಾರಂಭದ ಮೂಲಕ ಮಕ್ಕಳ ಕೈಗೆ ಮೊಬೈಲ್ (Mobile) ಬರುವಂತಾಗಿತ್ತು. ಆದರೆ, ಇದೀಗ ಶಾಲಾ- ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಪ್ರಾರಂಭವಾದ್ರೂ, ಪಾಠ ಕೇಳುವುದಕ್ಕಿಂತ ಮೊಬೈಲ್ ಬಳಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಇದೇ ಕಾರಣಕ್ಕೆ ಕುಮಟಾದ ಕಾಲೇಜೊಂದರಲ್ಲಿ ತಪಾಸಣೆ ನಡೆಸಿದ ಶಿಕ್ಷಕರು ಸುಮಾರು 250 ಕ್ಕೂ ಹೆಚ್ಚು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಬಸ್ ನಲ್ಲಿ ಕಿರಿಕಿರಿಯಾಗುವಂತೆ ಮೊಬೈಲ್ ಬಳಸಿದ್ರೆ ಕೆಳಗೆ ಇಳಿಸ್ತಾರೆ ಹುಷಾರ್!

ಹೌದು, ಕುಮಟಾ ಪಟ್ಟಣದ ಹನಮಂತ ಬೆಣ್ಣೆ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರು ತರಗತಿಗೆ ಆಗಮಿಸಿದ್ರೂ ವಿದ್ಯಾರ್ಥಿಗಳು ಮಾತ್ರ ಮೊಬೈಲ್ ಹಿಡಿದುಕೊಂಡು ಚಾಟಿಂಗ್, ಫೇಸ್ ಬುಕ್ ಹಾಗೂ  ಯುಟ್ಯೂಬ್ ಗಳಲ್ಲಿ ಕಾಲಹರಣ  ಮಾಡುತ್ತಿದ್ದರು‌. ಇದು ಪ್ರಾಂಶುಪಾಲರ ಗಮನಕ್ಕೆ ಬಂದಿದ್ದು,  ಎಲ್ಲಾ ವಿದ್ಯಾರ್ಥಿಗಳ ಮೊಬೈಲ್‌ ಗಳನ್ನು ವಶಪಡಿಸಿಕೊಂಡು ಬಿಸಿ ಮುಟ್ಟಿಸಿದ್ದಾರೆ. ಇನ್ನು ಪಾಲಕರು ಖುದ್ದಾಗಿ ಬಂದು ಅವರವರ ಮಕ್ಕಳ ಮೊಬೈಲ್ ತೆಗೆದುಕೊಂಡು ಹೋಗಲು ಪ್ರಾಂಶುಪಾಲರು ಸೂಚಿಸಿದ್ದಾರೆ. ಆದರೆ, ಕೆಲವು ವಿದ್ಯಾರ್ಥಿಗಳು ಕಂಡ ಕಂಡವರನ್ನು ಪಾಲಕರೆಂದು ಹೇಳಿ ಮೊಬೈಲ್ ಪಡೆಯುವ ಪ್ರಯತ್ನ ಮಾಡಿ ಸಿಕ್ಕಿ ಬಿದ್ದ ಪ್ರಕರಣವೂ ನಡೆದಿದೆ. ಪ್ರಾಂಶುಪಾಲರು ಹೇಳೋ ಪ್ರಕಾರ, 'ತರಗತಿ ಆರಂಭವಾಗುವುದಕ್ಕೆ ಮುನ್ನವೇ  ಶಾಲಾ ಕೊಠಡಿಗಳಲ್ಲಿ ಮೊಬೈಲ್ ಬಳಸಬಾರದೆಂದು ವಿದ್ಯಾರ್ಥಿಗಳಿಗೆ ತಾಕೀತು ಮಾಡಲಾಗಿತ್ತು. ಮುನ್ನೆಚ್ಚರಿಕೆಯ ಹೊರತಾಗಿಯೂ ವಿಧ್ಯಾರ್ಥಿಗಳು ಮೊಬೈಲ್ ಬಳಸಿದ್ದರಿಂದ ವಶಪಡಿಸಿಕೊಂಡಿದ್ದೇವೆ' ಎಂದು ಕಾಲೇಜು ಪ್ರಾಂಶುಪಾಲ ಸತೀಶ ನಾಯ್ಕ ತಿಳಿಸಿದ್ದಾರೆ.

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!