ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು

ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು

Published : Nov 10, 2023, 11:46 AM IST

ಪ್ರತಿ ವರ್ಷದಂತೆ ಈ ವರ್ಷವೂ ಬೆಳೆದ ಬೆಳೆ ಕೈಗೆ ಸಿಗುತ್ತೆ ಅಂತ ರೈತರು ಅಂದುಕೊಂಡಿದ್ರು. ಆದರೆ ಅಕಾಲಿಕವಾಗಿ ಸುರಿದ ವರುಣ ಕೊಪ್ಪಳ ಮತ್ತು ದಾವಣಗೆರೆ ರೈತರ ಕನಸಿಗೆ ಕೊಳ್ಳಿ ಇಟ್ಟಿದ್ದಾನೆ.
 

ಒಂದೆಡೆ ಅಕಾಲಿಕ ಧಾರಾಕಾರ ಮಳೆ. ಇನ್ನೊಂದೆಡೆ  ನೆಲಕಚ್ಚಿದ ಭತ್ತದ ಬೆಳೆ. ಭತ್ತದ ಫಸಲು(paddy crop) ಉಳಿಸಿಕೊಳ್ಳಲು ರೈತರ (Farmers)ಹರಸಾಹಸ. ರಾಜ್ಯದ ಬಹುತೇಕ ಭಾಗದಲ್ಲಿ ಕಂಡುಬರುವ ದೃಶ್ಯಗಳಿದು. ಕೊಪ್ಪಳ, ದಾವಣಗೆರೆ(Davanagere) ಜಿಲ್ಲೆಗಳಲ್ಲಿ ಹೀಗೆ ನೂರಾರು ಎಕರೆ ಭತ್ತದ ಬೆಳೆ ನೆಲ ಕಚ್ಚಿದೆ.. ಕಟಾವಿಗೆ ಬಂದಿದ್ದ ಬೆಳೆ ಮಳೆಯಿಂದ ನೀರು ಪಾಲಾಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕೊಪ್ಪಳದಲ್ಲಿ(Koppal) ಇನ್ನೇನು ಒಂದು ವಾರ ಕಳೆದರೆ ಭತ್ತ ಕಟಾವು ಕೆಲಸ ಆರಂಭವಾಗುತ್ತಿತ್ತು.. ಅಷ್ಟರೊಳಗೆ ವರುಣನ ಅಕಾಲಿಕ ಎಂಟ್ರಿ ಅನ್ನದಾತನ ಲೆಕ್ಕಚಾರವನ್ನೇ ಬುಡಮೇಲು ಮಾಡಿದೆ. ಭತ್ತದ ಬೆಳೆ ಸಂಪೂರ್ಣ ನೆಲಕಚ್ಚಿದೆ. ಗಂಗಾವತಿ,ಕಾರಟಗಿ‌,ಕೊಪ್ಪಳ ತಾಲೂಕಿನ ಕಿನ್ನಾಳ ಭಾಗದಲ್ಲಿ ಅತೀ ಹೆಚ್ಚು ಭತ್ತದ ಬೆಳೆ ಹಾನಿಯಾಗಿದೆ. ಬೆಳೆ ಜಲಸಮಾಧಿಗೆ ಕಂಗಾಲಾದ ರೈತರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲೂ ರೈತರ ಪರಿಸ್ಥಿತಿ ಭಿನ್ನವಾಗಿಲ್ಲ.. ಭತ್ತ, ಮೆಕ್ಕೆಜೋಳ ಬೆಳೆ ಸಂಪೂರ್ಣ ನಾಶವಾಗಿದೆ. ಭದ್ರಾ ಜಲಾಶಯದ ನೀಡು ಬಳಸಿಕೊಂಡು ಅಂದಾಜು 75 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಭತ್ತ ಬೆಳೆಯಲಾಗಿದೆ. ಇದರಲ್ಲಿ ಶೇ 25 ರಷ್ಟು ಕೊಯ್ಲಿಗೆ ಬಂದಿತ್ತು.. ಆದ್ರೆ, ಇನ್ನೇನ್ ಕಟಾವು ಮಾಡ್ಬೇಕು ಎನ್ನುವಷ್ಟರಲ್ಲಿ ಸುರಿದ ಮಳೆಯಿಂದ ಸೋನಾ ಮಸೂರಿ ಭತ್ತ ಜಲಸಮಾಧಿಯಾಗಿದೆ. ಭತ್ತ ಬೆಳೆ ಬೆಳೆಯಲು ಒಂದು ಎಕರೆಗೆ ಸುಮಾರು, 30 ಸಾವಿರ ರೂಪಾಯಿ ಖರ್ಚಾಗುತ್ತೆ. ಸಾಲಸೂಲ ಮಾಡಿ ಭತ್ತ ನಾಟಿ ಮಾಡಿದ್ರು. ಅಕಾಲಿಕ ಮಳೆಯಿಂದ ಭತ್ತದ ಗದ್ದೆಯಲ್ಲಿ ನೀರು ನಿಂತು ಬೆಳೆ ನಾಶವಾಗುತ್ತಿದ್ದು, ರೈತರನ್ನ ಕಂಗಾಲಾಗಿಸಿದೆ.

ಇದನ್ನೂ ವೀಕ್ಷಿಸಿ:  ರೈತರು ಉಳುಮೆ ಮಾಡುವ ಜಮೀನು ಸರ್ಕಾರದ ಹೆಸರಿಗೆ: ಸೌಕರ್ಯ ಸಿಗದೇ ಅನ್ನದಾತರು ಕಂಗಾಲು..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more