ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು

ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು

Published : Nov 10, 2023, 11:46 AM IST

ಪ್ರತಿ ವರ್ಷದಂತೆ ಈ ವರ್ಷವೂ ಬೆಳೆದ ಬೆಳೆ ಕೈಗೆ ಸಿಗುತ್ತೆ ಅಂತ ರೈತರು ಅಂದುಕೊಂಡಿದ್ರು. ಆದರೆ ಅಕಾಲಿಕವಾಗಿ ಸುರಿದ ವರುಣ ಕೊಪ್ಪಳ ಮತ್ತು ದಾವಣಗೆರೆ ರೈತರ ಕನಸಿಗೆ ಕೊಳ್ಳಿ ಇಟ್ಟಿದ್ದಾನೆ.
 

ಒಂದೆಡೆ ಅಕಾಲಿಕ ಧಾರಾಕಾರ ಮಳೆ. ಇನ್ನೊಂದೆಡೆ  ನೆಲಕಚ್ಚಿದ ಭತ್ತದ ಬೆಳೆ. ಭತ್ತದ ಫಸಲು(paddy crop) ಉಳಿಸಿಕೊಳ್ಳಲು ರೈತರ (Farmers)ಹರಸಾಹಸ. ರಾಜ್ಯದ ಬಹುತೇಕ ಭಾಗದಲ್ಲಿ ಕಂಡುಬರುವ ದೃಶ್ಯಗಳಿದು. ಕೊಪ್ಪಳ, ದಾವಣಗೆರೆ(Davanagere) ಜಿಲ್ಲೆಗಳಲ್ಲಿ ಹೀಗೆ ನೂರಾರು ಎಕರೆ ಭತ್ತದ ಬೆಳೆ ನೆಲ ಕಚ್ಚಿದೆ.. ಕಟಾವಿಗೆ ಬಂದಿದ್ದ ಬೆಳೆ ಮಳೆಯಿಂದ ನೀರು ಪಾಲಾಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕೊಪ್ಪಳದಲ್ಲಿ(Koppal) ಇನ್ನೇನು ಒಂದು ವಾರ ಕಳೆದರೆ ಭತ್ತ ಕಟಾವು ಕೆಲಸ ಆರಂಭವಾಗುತ್ತಿತ್ತು.. ಅಷ್ಟರೊಳಗೆ ವರುಣನ ಅಕಾಲಿಕ ಎಂಟ್ರಿ ಅನ್ನದಾತನ ಲೆಕ್ಕಚಾರವನ್ನೇ ಬುಡಮೇಲು ಮಾಡಿದೆ. ಭತ್ತದ ಬೆಳೆ ಸಂಪೂರ್ಣ ನೆಲಕಚ್ಚಿದೆ. ಗಂಗಾವತಿ,ಕಾರಟಗಿ‌,ಕೊಪ್ಪಳ ತಾಲೂಕಿನ ಕಿನ್ನಾಳ ಭಾಗದಲ್ಲಿ ಅತೀ ಹೆಚ್ಚು ಭತ್ತದ ಬೆಳೆ ಹಾನಿಯಾಗಿದೆ. ಬೆಳೆ ಜಲಸಮಾಧಿಗೆ ಕಂಗಾಲಾದ ರೈತರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲೂ ರೈತರ ಪರಿಸ್ಥಿತಿ ಭಿನ್ನವಾಗಿಲ್ಲ.. ಭತ್ತ, ಮೆಕ್ಕೆಜೋಳ ಬೆಳೆ ಸಂಪೂರ್ಣ ನಾಶವಾಗಿದೆ. ಭದ್ರಾ ಜಲಾಶಯದ ನೀಡು ಬಳಸಿಕೊಂಡು ಅಂದಾಜು 75 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಭತ್ತ ಬೆಳೆಯಲಾಗಿದೆ. ಇದರಲ್ಲಿ ಶೇ 25 ರಷ್ಟು ಕೊಯ್ಲಿಗೆ ಬಂದಿತ್ತು.. ಆದ್ರೆ, ಇನ್ನೇನ್ ಕಟಾವು ಮಾಡ್ಬೇಕು ಎನ್ನುವಷ್ಟರಲ್ಲಿ ಸುರಿದ ಮಳೆಯಿಂದ ಸೋನಾ ಮಸೂರಿ ಭತ್ತ ಜಲಸಮಾಧಿಯಾಗಿದೆ. ಭತ್ತ ಬೆಳೆ ಬೆಳೆಯಲು ಒಂದು ಎಕರೆಗೆ ಸುಮಾರು, 30 ಸಾವಿರ ರೂಪಾಯಿ ಖರ್ಚಾಗುತ್ತೆ. ಸಾಲಸೂಲ ಮಾಡಿ ಭತ್ತ ನಾಟಿ ಮಾಡಿದ್ರು. ಅಕಾಲಿಕ ಮಳೆಯಿಂದ ಭತ್ತದ ಗದ್ದೆಯಲ್ಲಿ ನೀರು ನಿಂತು ಬೆಳೆ ನಾಶವಾಗುತ್ತಿದ್ದು, ರೈತರನ್ನ ಕಂಗಾಲಾಗಿಸಿದೆ.

ಇದನ್ನೂ ವೀಕ್ಷಿಸಿ:  ರೈತರು ಉಳುಮೆ ಮಾಡುವ ಜಮೀನು ಸರ್ಕಾರದ ಹೆಸರಿಗೆ: ಸೌಕರ್ಯ ಸಿಗದೇ ಅನ್ನದಾತರು ಕಂಗಾಲು..!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more