ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು

ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು

Published : Nov 10, 2023, 11:46 AM IST

ಪ್ರತಿ ವರ್ಷದಂತೆ ಈ ವರ್ಷವೂ ಬೆಳೆದ ಬೆಳೆ ಕೈಗೆ ಸಿಗುತ್ತೆ ಅಂತ ರೈತರು ಅಂದುಕೊಂಡಿದ್ರು. ಆದರೆ ಅಕಾಲಿಕವಾಗಿ ಸುರಿದ ವರುಣ ಕೊಪ್ಪಳ ಮತ್ತು ದಾವಣಗೆರೆ ರೈತರ ಕನಸಿಗೆ ಕೊಳ್ಳಿ ಇಟ್ಟಿದ್ದಾನೆ.
 

ಒಂದೆಡೆ ಅಕಾಲಿಕ ಧಾರಾಕಾರ ಮಳೆ. ಇನ್ನೊಂದೆಡೆ  ನೆಲಕಚ್ಚಿದ ಭತ್ತದ ಬೆಳೆ. ಭತ್ತದ ಫಸಲು(paddy crop) ಉಳಿಸಿಕೊಳ್ಳಲು ರೈತರ (Farmers)ಹರಸಾಹಸ. ರಾಜ್ಯದ ಬಹುತೇಕ ಭಾಗದಲ್ಲಿ ಕಂಡುಬರುವ ದೃಶ್ಯಗಳಿದು. ಕೊಪ್ಪಳ, ದಾವಣಗೆರೆ(Davanagere) ಜಿಲ್ಲೆಗಳಲ್ಲಿ ಹೀಗೆ ನೂರಾರು ಎಕರೆ ಭತ್ತದ ಬೆಳೆ ನೆಲ ಕಚ್ಚಿದೆ.. ಕಟಾವಿಗೆ ಬಂದಿದ್ದ ಬೆಳೆ ಮಳೆಯಿಂದ ನೀರು ಪಾಲಾಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕೊಪ್ಪಳದಲ್ಲಿ(Koppal) ಇನ್ನೇನು ಒಂದು ವಾರ ಕಳೆದರೆ ಭತ್ತ ಕಟಾವು ಕೆಲಸ ಆರಂಭವಾಗುತ್ತಿತ್ತು.. ಅಷ್ಟರೊಳಗೆ ವರುಣನ ಅಕಾಲಿಕ ಎಂಟ್ರಿ ಅನ್ನದಾತನ ಲೆಕ್ಕಚಾರವನ್ನೇ ಬುಡಮೇಲು ಮಾಡಿದೆ. ಭತ್ತದ ಬೆಳೆ ಸಂಪೂರ್ಣ ನೆಲಕಚ್ಚಿದೆ. ಗಂಗಾವತಿ,ಕಾರಟಗಿ‌,ಕೊಪ್ಪಳ ತಾಲೂಕಿನ ಕಿನ್ನಾಳ ಭಾಗದಲ್ಲಿ ಅತೀ ಹೆಚ್ಚು ಭತ್ತದ ಬೆಳೆ ಹಾನಿಯಾಗಿದೆ. ಬೆಳೆ ಜಲಸಮಾಧಿಗೆ ಕಂಗಾಲಾದ ರೈತರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲೂ ರೈತರ ಪರಿಸ್ಥಿತಿ ಭಿನ್ನವಾಗಿಲ್ಲ.. ಭತ್ತ, ಮೆಕ್ಕೆಜೋಳ ಬೆಳೆ ಸಂಪೂರ್ಣ ನಾಶವಾಗಿದೆ. ಭದ್ರಾ ಜಲಾಶಯದ ನೀಡು ಬಳಸಿಕೊಂಡು ಅಂದಾಜು 75 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಭತ್ತ ಬೆಳೆಯಲಾಗಿದೆ. ಇದರಲ್ಲಿ ಶೇ 25 ರಷ್ಟು ಕೊಯ್ಲಿಗೆ ಬಂದಿತ್ತು.. ಆದ್ರೆ, ಇನ್ನೇನ್ ಕಟಾವು ಮಾಡ್ಬೇಕು ಎನ್ನುವಷ್ಟರಲ್ಲಿ ಸುರಿದ ಮಳೆಯಿಂದ ಸೋನಾ ಮಸೂರಿ ಭತ್ತ ಜಲಸಮಾಧಿಯಾಗಿದೆ. ಭತ್ತ ಬೆಳೆ ಬೆಳೆಯಲು ಒಂದು ಎಕರೆಗೆ ಸುಮಾರು, 30 ಸಾವಿರ ರೂಪಾಯಿ ಖರ್ಚಾಗುತ್ತೆ. ಸಾಲಸೂಲ ಮಾಡಿ ಭತ್ತ ನಾಟಿ ಮಾಡಿದ್ರು. ಅಕಾಲಿಕ ಮಳೆಯಿಂದ ಭತ್ತದ ಗದ್ದೆಯಲ್ಲಿ ನೀರು ನಿಂತು ಬೆಳೆ ನಾಶವಾಗುತ್ತಿದ್ದು, ರೈತರನ್ನ ಕಂಗಾಲಾಗಿಸಿದೆ.

ಇದನ್ನೂ ವೀಕ್ಷಿಸಿ:  ರೈತರು ಉಳುಮೆ ಮಾಡುವ ಜಮೀನು ಸರ್ಕಾರದ ಹೆಸರಿಗೆ: ಸೌಕರ್ಯ ಸಿಗದೇ ಅನ್ನದಾತರು ಕಂಗಾಲು..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more