ಮೀಸಲಾತಿ ಘೋಷಿಸದಿದ್ರೆ ಬೃಹತ್ ಪ್ರತಿಭಟನೆ: ಸರ್ಕಾರಕ್ಕೆ ಪಂಚಮಸಾಲಿ ಹೋರಾಟಗಾರರ ಎಚ್ಚರಿಕೆ

Dec 13, 2022, 3:07 PM IST

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪಂಚಮಸಾಲಿ ಹೋರಾಟಗಾರರಿಂದ ಸಿದ್ಧತೆ ನಡೆಸಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ 19ರಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಮೀಸಲಾತಿ ಘೋಷಿಸದಿದ್ರೆ ಡಿ. 22ರಂದು  ವಿರಾಟ್‌ ಪಂಚಶಕ್ತಿ ಸಮಾವೇಶದ ಮೂಲಕ 25 ಲಕ್ಷ ಜನರನ್ನು ಸೇರಿಸಿ ಬೃಹತ್‌ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಸುವರ್ಣ ಸೌಧದ ಬಳಿ ಪಂಚಮಸಾಲಿ ಸಮಾವೇಶಕ್ಕೆ ಸಿದ್ಧತೆ ನಡೆದಿದ್ದು, ಮೀಸಲಾತಿ ನೀಡದಿದ್ದರೆ ಅಂತಿಮ ಹಂತದ ಹೋರಾಟದ ಎಚ್ಚರಿಕೆ ನೀಡಲಾಗಿದೆ.