ಪಾಂಡವಪುರ ಸಂಭ್ರಮ: ಸಾಧಕ ರೈತರಿಗೆ ಸನ್ಮಾನ.. ಹುತಾತ್ಮ ಅನ್ನದಾತರಿಗೆ ನಮನ

ಪಾಂಡವಪುರ ಸಂಭ್ರಮ: ಸಾಧಕ ರೈತರಿಗೆ ಸನ್ಮಾನ.. ಹುತಾತ್ಮ ಅನ್ನದಾತರಿಗೆ ನಮನ

Published : Dec 24, 2023, 11:08 AM IST

ರೈತ ಸಾಧಕರಿಗೆ ಸನ್ಮಾನ, ಸ್ಥಳೀಯರ ಕಲಾಪ್ರದರ್ಶನಕ್ಕೆ‌ ಶಿಳ್ಳೆ, ಚಪ್ಪಾಳೆಗಳು ಕೇಳಿಬಂದವು. ವಿಶಿಷ್ಟ ಝೇಂಬೆ ವಾದನ, ಸಿರಿಯಲ್ ಸ್ಟಾರ್‌‌‌ಗಳ ಆಗಮನ ಪಾಂಡವಪುರ ಜನತೆಯ ಖುಷಿಯನ್ನ ದುಪ್ಪಟ್ಟಾಗಿಸಿತ್ತು.‌ ಹಾಗಾದ್ರೆ "ಪಾಂಡವಪುರ ಸಂಭ್ರಮದ‌‌" ಎರಡನೇ ದಿನ ಹೇಗಿತ್ತು ಬನ್ನಿ ನೋಡೋಣ.

ಸಕ್ಕರೆ ನಾಡು ಮಂಡ್ಯದ ಪಾಂಡವಪುರದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಆಯೋಜಿಸಿರುವ "ಪಾಂಡವಪುರ ಸಂಭ್ರಮ"(Pandavapura Celebration) ಎರಡನೇ ದಿನವೂ ಯಶಸ್ವಿಯಾಗಿ ನಡೆಯಿತು. ಪಾಂಡವಪುರದ ಪಾಂಡವ ಕ್ರೀಡಾಂಗಣದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಆಯೋಜಿಸಿರುವ "ಪಾಂಡವಪುರ ಸಂಭ್ರಮ" ಕಾರ್ಯಕ್ರಮಕ್ಕೆ ಎರಡನೇ ದಿನವೂ ಅದ್ಬುತ ರೆಸ್ಪಾನ್ಸ್ ಸಿಕ್ಕಿತು. ರಾಷ್ಟ್ರೀಯ ರೈತ ದಿನಾಚರಣೆ(National Farmer Day) ಹಿನ್ನೆಲೆ ಹುತಾತ್ಮ ರೈತನಾಯಕರಿಗೆ ಪುಷ್ಪನಮನ ಸಲ್ಲಿಸಿದ ಮಾಜಿಸಚಿವ ಸಿಎಸ್ ಪುಟ್ಟರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಈ ವೇಳೆ ಕೃಷಿಯಲ್ಲಿ ಸಾಧನೆಗೈದ ರೈತ ಸಾಧಕರನ್ನ ಗುರುತಿಸಿ ಗೌರವಿಸಲಾಯಿತು. ಬಳಿಕ ಆರಂಭವಾದ ವೇದಿಕೆ ಕಾರ್ಯಕ್ರಮದಲ್ಲಿ ಸ್ಥಳೀಯ ವಿದ್ಯಾರ್ಥಿಗಳು ಜನರನ್ನ ಮನರಂಜಿಸಿದ್ರು. ಶಾಲಾ ವಿದ್ಯಾರ್ಥಿನಿಯರ ಕಂಸಾಳೆ, ಯೋಗ ಪ್ರದರ್ಶನ, ನೃತ್ಯ ಜನರ ಮನಸೆಳೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಬೃಂದಾವನ ಸಿರಿಯಲ್ ಖ್ಯಾತಿಯ ನಟಿ ಅಮೂಲ್ಯ ವೇದಿಕೆಯ ಮೆರುಗು ಹೆಚ್ಚಿಸಿದ್ರು. ನಂತರ ಆರಂಭವಾದ ಝೇಂಬೆ ವಾದನ ಜನರನ್ನು ಕುಣಿಯುವಂತೆ ಮಾಡಿತ್ತು. ಜನರ ಮಧ್ಯೆಯೇ ಕಾರ್ಯಕ್ರಮ ನೋಡುತ್ತಾ‌ ಕುಳಿತ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಸ್ಥಳೀಯ ಕಲಾವಿದರ ಟ್ಯಾಲೆಂಟ್‌ ಕಂಡು ಸಂಭ್ರಮಿಸಿದರು.

ಇದನ್ನೂ ವೀಕ್ಷಿಸಿ:  Weekly-Horoscope: ಇಂದು ಹನುಮದ್ವ್ರತ ಇದ್ದು, ಇದನ್ನು ಹೇಗೆ ಆಚರಿಸಬೇಕು, ಇದರ ಫಲಗಳೇನು ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more