BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

Published : Dec 15, 2022, 04:31 PM IST

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಚಿನ್ನ ಉತ್ಪಾದನೆ ಮಾಡುವ ಜನರ ಬದುಕು ಕೂಡ ಬಂಗಾರದಂತೆ ಇರಬೇಕು. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  2-3 ತಿಂಗಳಿಂದ ಕುಡಿಯವ ನೀರಿಲ್ಲದೇ ರೋಸಿ ಹೋಗಿದ್ದೇವೆ. ನಮಗೆ ಕುಡಿಯಲು ನೀರು ಕೊಡಿ ಇಲ್ಲದಿದ್ದರೆ, ತೊಟ್ಟು ವಿಷ ನೀಡಿ ಅಂತ ಪಟ್ಟಣ ಪಂಚಾಯತ್ ಮುಂದೆ ಸ್ಥಳಿಯರೆಲ್ಲ ಧರಣಿ ನಡೆಸಿದ್ದಾರೆ. ಇನ್ನು ಈ ಹಟ್ಟಿ ಪಟ್ಟಣ ಪಂಚಾಯತ್ಗೆ ಕುಡಿಯುವ ನೀರಿನ ಸಲುವಾಗಿ ಹಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಿದ್ದಾರೆ. ಆ ಯೋಜನೆಯಂತೆ 3 ಗ್ರಾಮ ಪಂಚಾಯತ್ ಮತ್ತು ಒಂದು ಪಟ್ಟಣ ಪಂಚಾಯತ್ಗೆ ಟಣಮನಕಲ್ ಬಳಿಯ ಕೃಷ್ಣಾ ನದಿಯಿಂದ ನೀರು ಸರಭರಾಜು ಮಾಡಲಾಗುತ್ತೆ. RURAL DRINKING WATER AND SANITATION DEPARTMENT ಮತ್ತು ಪಟ್ಟಣ ಪಂಚಾಯತ್ ನೀರಿನ ನಿರ್ವಹಣೆ ಮಾಡಬೇಕು. ಆದ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಟ್ಟಿ ಜನರು ಕುಡಿಯುವ ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more