ಗ್ರಾಮಸ್ಥರ ನೆಮ್ಮದಿ ಕೊಳ್ಳಿ ಇಟ್ಟ LLP ಕಾರ್ಖಾನೆ: ಕಾರ್ಖಾನೆ ದುರ್ವಾಸನೆಗೆ ಗ್ರಾಮಸ್ಥರ ಬದುಕೇ‌ ದುಸ್ಥರ !

ಗ್ರಾಮಸ್ಥರ ನೆಮ್ಮದಿ ಕೊಳ್ಳಿ ಇಟ್ಟ LLP ಕಾರ್ಖಾನೆ: ಕಾರ್ಖಾನೆ ದುರ್ವಾಸನೆಗೆ ಗ್ರಾಮಸ್ಥರ ಬದುಕೇ‌ ದುಸ್ಥರ !

Published : Sep 13, 2023, 09:56 AM IST

ಅವರೆಲ್ಲರೂ ಕೃಷಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಗ್ರಾಮಸ್ಥರು. ಖಾಸಗಿ ಕಂಪನಿಯಿಂದ ಬರುತ್ತಿರುವ ದುರ್ವಾಸನೆಗೆ ನಲುಗಿದ ಗ್ರಾಮಸ್ಥರು ಕೆಲಸ ಕಾರ್ಯವನ್ನು ಬಿಟ್ಟು ಹೋರಾಟಕ್ಕೆ ಇಳಿದಿದ್ದಾರೆ. ಊರಿಗೆ ಉದ್ಯೋಗದ ಭರವಸೆಯಲ್ಲಿದ್ದವರಿಗೆ ಜೀವ ಉಳಿಸಿಕೊಳ್ಳುವುದೇ ಕಷ್ಟದ ಕೆಲಸವಾಗಿದೆ.  
 

ಮುಖಕ್ಕೆ ಸೆರಗು ಸುತ್ತಿಕೊಂಡ ಮಹಿಳೆಯರು. ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ(Protest). ಪೊಲೀಸರ ಮಾತಿಗೂ ಜಗ್ಗದೆ ಅನಿರ್ಧಿಷ್ಟಾವಧಿ ಧರಣಿ. ಕಾರ್ಖಾನೆ ಬಂದ್‌ ಮಾಡಲೇಬೇಕೆಂದು ಹಠ ಹಿಡಿದು ಹೋರಾಟ. ಈ ದೃಶ್ಯ ಕಂಡು ಬಂದಿದ್ದು, ಹುಬ್ಬಳ್ಳಿ(Hubli) ನಗರದ  ಕೂಗಳತೆ ದೂರದಲ್ಲಿರುವ ಅಂಚಟಗೇರಿ ಗ್ರಾಮದಲ್ಲಿ. ದುರ್ವಾಸನೆ ಬೀರುವ ವಿಂಟೆಕ್ ಪ್ರೊಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪಿ ಕಾರ್ಖಾನೆ(LLP factory) ಬಂದ್ ಮಾಡುವಂತೆ ಇವರೆಲ್ಲಾ ಬೀದಿಗಿಳಿದಿದ್ದಾರೆ. ವಾಸನೆ.. ದುರ್ವಾಸನೆ.. ಮನೆಯಲ್ಲಿ ಇರೋಕಾಲ್ಲ.. ಬೀದಿಗೂ ಬರಕಾಗಲ್ಲ.. ದುರ್ಮಾಂಸ ದುರ್ನಾತ ಗ್ರಾಮಸ್ಥರ ಬದುಕು‌ ದುಸ್ತರ ಮಾಡಿದೆ. ಗ್ರಾಮದಲ್ಲಿ ಮಕ್ಕಳು, ವೃದ್ಧರು , ಅನಾರೋಗ್ಯ ತುತ್ತಾಗುವಂತಾಗಿದೆ. ಕೇರಳದ(Kerala) ಉದ್ಯಮಿಯೊಬ್ಬರು ಸ್ಥಾಪಿಸಿದ ವಿಂಟೆಕ್ ಪ್ರೊಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪಿ ಕಾರ್ಖಾನೆ  ಗ್ರಾಮಸ್ಥರರ ನೆಮ್ಮದಿ ಕಿತ್ತುಕೊಂಡಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಕಾರ್ಖಾನೆ ಬಂದ್ ಮಾಡಿಸಿ ಅಥವಾ ಬೇರೆಡೆ ಸ್ಥಳಾಂತರ ಮಾಡುವಂತೆ ಹೆದ್ದಾರಿ ತಡೆದು ಅನಿರ್ಧಿಷ್ಟಾವಧಿ ಧರಣಿ ನಡೆಸ್ತಿದ್ದಾರೆ. ಕೇರಳ, ಗೋವಾ ರಾಜ್ಯದ ಕಸಾಯಿಖಾನೆಗಳಲ್ಲಿ ದನದ ಮಾಂಸದ ತ್ಯಾಜ್ಯವನ್ನು  ಸಂಗ್ರಹಿಸ್ತಾರೆ. ಅಲ್ಲಿಂದ ತಂದ ಮಾಂಸಾವನ್ನು ಈ ಕಾರ್ಖಾನೆಯಲ್ಲಿ ಕುದಿಸಿ, ಅದರಿಂದ ಪ್ರಾಣಿಗಳ ಆಹಾರ ತಯಾರಿಸಲಾಗುತ್ತಿದೆ. ಇದರಿಂದ ಹೊರಹೊಮ್ಮುವ ದುರ್ನಾತ ಜನರ ನಿದ್ದೆಗೆಡಿಸಿದೆ. ಅಂಚಟಗೇರಿ ಗ್ರಾಮಸ್ಥರು ತಮ್ಮ ಹೊಲಗದ್ದೆಗಳಿಗೆ ಕೆಲಸ ಕಾರ್ಯಕ್ಕೂ ಹೋಗದ ಸ್ಥಿತಿ ಎದುರಾಗಿದೆ.. ಇಷ್ಟೆಲ್ಲಾ ಸಮಸ್ಯೆ ಇದ್ರೂ, ವಾಯುಮಾಲಿನ್ಯ ಮಂಡಳಿಯ ಅಧಿಕಾರಿಗಳು, ಧಾರವಾಡ ಜಿಲ್ಲಾಡಳಿತ ಮಾತ್ರ ಮೌನಕ್ಕೆ ಶರಣಾಗಿದೆ.. ಜಿಲ್ಲಾಡಳಿತದ ಮೌನ ಗ್ರಾಮಸ್ಥರ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ.

ಇದನ್ನೂ ವೀಕ್ಷಿಸಿ:  ಇಲ್ಲಿ ದುಡ್ಡುಕೊಟ್ರೆ ಪರೀಕ್ಷೆ ಪಾಸ್, ಫುಲ್ ಮಾರ್ಕ್ಸ್! ಇದು ಕರ್ನಾಟಕ ರಾಜ್ಯ ಮುಕ್ತ ವಿವಿ ಕರ್ಮಕಾಂಡ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more