ಗ್ರಾಮಸ್ಥರ ನೆಮ್ಮದಿ ಕೊಳ್ಳಿ ಇಟ್ಟ LLP ಕಾರ್ಖಾನೆ: ಕಾರ್ಖಾನೆ ದುರ್ವಾಸನೆಗೆ ಗ್ರಾಮಸ್ಥರ ಬದುಕೇ‌ ದುಸ್ಥರ !

ಗ್ರಾಮಸ್ಥರ ನೆಮ್ಮದಿ ಕೊಳ್ಳಿ ಇಟ್ಟ LLP ಕಾರ್ಖಾನೆ: ಕಾರ್ಖಾನೆ ದುರ್ವಾಸನೆಗೆ ಗ್ರಾಮಸ್ಥರ ಬದುಕೇ‌ ದುಸ್ಥರ !

Published : Sep 13, 2023, 09:56 AM IST

ಅವರೆಲ್ಲರೂ ಕೃಷಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಗ್ರಾಮಸ್ಥರು. ಖಾಸಗಿ ಕಂಪನಿಯಿಂದ ಬರುತ್ತಿರುವ ದುರ್ವಾಸನೆಗೆ ನಲುಗಿದ ಗ್ರಾಮಸ್ಥರು ಕೆಲಸ ಕಾರ್ಯವನ್ನು ಬಿಟ್ಟು ಹೋರಾಟಕ್ಕೆ ಇಳಿದಿದ್ದಾರೆ. ಊರಿಗೆ ಉದ್ಯೋಗದ ಭರವಸೆಯಲ್ಲಿದ್ದವರಿಗೆ ಜೀವ ಉಳಿಸಿಕೊಳ್ಳುವುದೇ ಕಷ್ಟದ ಕೆಲಸವಾಗಿದೆ.  
 

ಮುಖಕ್ಕೆ ಸೆರಗು ಸುತ್ತಿಕೊಂಡ ಮಹಿಳೆಯರು. ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ(Protest). ಪೊಲೀಸರ ಮಾತಿಗೂ ಜಗ್ಗದೆ ಅನಿರ್ಧಿಷ್ಟಾವಧಿ ಧರಣಿ. ಕಾರ್ಖಾನೆ ಬಂದ್‌ ಮಾಡಲೇಬೇಕೆಂದು ಹಠ ಹಿಡಿದು ಹೋರಾಟ. ಈ ದೃಶ್ಯ ಕಂಡು ಬಂದಿದ್ದು, ಹುಬ್ಬಳ್ಳಿ(Hubli) ನಗರದ  ಕೂಗಳತೆ ದೂರದಲ್ಲಿರುವ ಅಂಚಟಗೇರಿ ಗ್ರಾಮದಲ್ಲಿ. ದುರ್ವಾಸನೆ ಬೀರುವ ವಿಂಟೆಕ್ ಪ್ರೊಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪಿ ಕಾರ್ಖಾನೆ(LLP factory) ಬಂದ್ ಮಾಡುವಂತೆ ಇವರೆಲ್ಲಾ ಬೀದಿಗಿಳಿದಿದ್ದಾರೆ. ವಾಸನೆ.. ದುರ್ವಾಸನೆ.. ಮನೆಯಲ್ಲಿ ಇರೋಕಾಲ್ಲ.. ಬೀದಿಗೂ ಬರಕಾಗಲ್ಲ.. ದುರ್ಮಾಂಸ ದುರ್ನಾತ ಗ್ರಾಮಸ್ಥರ ಬದುಕು‌ ದುಸ್ತರ ಮಾಡಿದೆ. ಗ್ರಾಮದಲ್ಲಿ ಮಕ್ಕಳು, ವೃದ್ಧರು , ಅನಾರೋಗ್ಯ ತುತ್ತಾಗುವಂತಾಗಿದೆ. ಕೇರಳದ(Kerala) ಉದ್ಯಮಿಯೊಬ್ಬರು ಸ್ಥಾಪಿಸಿದ ವಿಂಟೆಕ್ ಪ್ರೊಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪಿ ಕಾರ್ಖಾನೆ  ಗ್ರಾಮಸ್ಥರರ ನೆಮ್ಮದಿ ಕಿತ್ತುಕೊಂಡಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಕಾರ್ಖಾನೆ ಬಂದ್ ಮಾಡಿಸಿ ಅಥವಾ ಬೇರೆಡೆ ಸ್ಥಳಾಂತರ ಮಾಡುವಂತೆ ಹೆದ್ದಾರಿ ತಡೆದು ಅನಿರ್ಧಿಷ್ಟಾವಧಿ ಧರಣಿ ನಡೆಸ್ತಿದ್ದಾರೆ. ಕೇರಳ, ಗೋವಾ ರಾಜ್ಯದ ಕಸಾಯಿಖಾನೆಗಳಲ್ಲಿ ದನದ ಮಾಂಸದ ತ್ಯಾಜ್ಯವನ್ನು  ಸಂಗ್ರಹಿಸ್ತಾರೆ. ಅಲ್ಲಿಂದ ತಂದ ಮಾಂಸಾವನ್ನು ಈ ಕಾರ್ಖಾನೆಯಲ್ಲಿ ಕುದಿಸಿ, ಅದರಿಂದ ಪ್ರಾಣಿಗಳ ಆಹಾರ ತಯಾರಿಸಲಾಗುತ್ತಿದೆ. ಇದರಿಂದ ಹೊರಹೊಮ್ಮುವ ದುರ್ನಾತ ಜನರ ನಿದ್ದೆಗೆಡಿಸಿದೆ. ಅಂಚಟಗೇರಿ ಗ್ರಾಮಸ್ಥರು ತಮ್ಮ ಹೊಲಗದ್ದೆಗಳಿಗೆ ಕೆಲಸ ಕಾರ್ಯಕ್ಕೂ ಹೋಗದ ಸ್ಥಿತಿ ಎದುರಾಗಿದೆ.. ಇಷ್ಟೆಲ್ಲಾ ಸಮಸ್ಯೆ ಇದ್ರೂ, ವಾಯುಮಾಲಿನ್ಯ ಮಂಡಳಿಯ ಅಧಿಕಾರಿಗಳು, ಧಾರವಾಡ ಜಿಲ್ಲಾಡಳಿತ ಮಾತ್ರ ಮೌನಕ್ಕೆ ಶರಣಾಗಿದೆ.. ಜಿಲ್ಲಾಡಳಿತದ ಮೌನ ಗ್ರಾಮಸ್ಥರ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ.

ಇದನ್ನೂ ವೀಕ್ಷಿಸಿ:  ಇಲ್ಲಿ ದುಡ್ಡುಕೊಟ್ರೆ ಪರೀಕ್ಷೆ ಪಾಸ್, ಫುಲ್ ಮಾರ್ಕ್ಸ್! ಇದು ಕರ್ನಾಟಕ ರಾಜ್ಯ ಮುಕ್ತ ವಿವಿ ಕರ್ಮಕಾಂಡ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more