ಗ್ರಾಮಸ್ಥರ ನೆಮ್ಮದಿ ಕೊಳ್ಳಿ ಇಟ್ಟ LLP ಕಾರ್ಖಾನೆ: ಕಾರ್ಖಾನೆ ದುರ್ವಾಸನೆಗೆ ಗ್ರಾಮಸ್ಥರ ಬದುಕೇ‌ ದುಸ್ಥರ !

ಗ್ರಾಮಸ್ಥರ ನೆಮ್ಮದಿ ಕೊಳ್ಳಿ ಇಟ್ಟ LLP ಕಾರ್ಖಾನೆ: ಕಾರ್ಖಾನೆ ದುರ್ವಾಸನೆಗೆ ಗ್ರಾಮಸ್ಥರ ಬದುಕೇ‌ ದುಸ್ಥರ !

Published : Sep 13, 2023, 09:56 AM IST

ಅವರೆಲ್ಲರೂ ಕೃಷಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಗ್ರಾಮಸ್ಥರು. ಖಾಸಗಿ ಕಂಪನಿಯಿಂದ ಬರುತ್ತಿರುವ ದುರ್ವಾಸನೆಗೆ ನಲುಗಿದ ಗ್ರಾಮಸ್ಥರು ಕೆಲಸ ಕಾರ್ಯವನ್ನು ಬಿಟ್ಟು ಹೋರಾಟಕ್ಕೆ ಇಳಿದಿದ್ದಾರೆ. ಊರಿಗೆ ಉದ್ಯೋಗದ ಭರವಸೆಯಲ್ಲಿದ್ದವರಿಗೆ ಜೀವ ಉಳಿಸಿಕೊಳ್ಳುವುದೇ ಕಷ್ಟದ ಕೆಲಸವಾಗಿದೆ.  
 

ಮುಖಕ್ಕೆ ಸೆರಗು ಸುತ್ತಿಕೊಂಡ ಮಹಿಳೆಯರು. ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ(Protest). ಪೊಲೀಸರ ಮಾತಿಗೂ ಜಗ್ಗದೆ ಅನಿರ್ಧಿಷ್ಟಾವಧಿ ಧರಣಿ. ಕಾರ್ಖಾನೆ ಬಂದ್‌ ಮಾಡಲೇಬೇಕೆಂದು ಹಠ ಹಿಡಿದು ಹೋರಾಟ. ಈ ದೃಶ್ಯ ಕಂಡು ಬಂದಿದ್ದು, ಹುಬ್ಬಳ್ಳಿ(Hubli) ನಗರದ  ಕೂಗಳತೆ ದೂರದಲ್ಲಿರುವ ಅಂಚಟಗೇರಿ ಗ್ರಾಮದಲ್ಲಿ. ದುರ್ವಾಸನೆ ಬೀರುವ ವಿಂಟೆಕ್ ಪ್ರೊಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪಿ ಕಾರ್ಖಾನೆ(LLP factory) ಬಂದ್ ಮಾಡುವಂತೆ ಇವರೆಲ್ಲಾ ಬೀದಿಗಿಳಿದಿದ್ದಾರೆ. ವಾಸನೆ.. ದುರ್ವಾಸನೆ.. ಮನೆಯಲ್ಲಿ ಇರೋಕಾಲ್ಲ.. ಬೀದಿಗೂ ಬರಕಾಗಲ್ಲ.. ದುರ್ಮಾಂಸ ದುರ್ನಾತ ಗ್ರಾಮಸ್ಥರ ಬದುಕು‌ ದುಸ್ತರ ಮಾಡಿದೆ. ಗ್ರಾಮದಲ್ಲಿ ಮಕ್ಕಳು, ವೃದ್ಧರು , ಅನಾರೋಗ್ಯ ತುತ್ತಾಗುವಂತಾಗಿದೆ. ಕೇರಳದ(Kerala) ಉದ್ಯಮಿಯೊಬ್ಬರು ಸ್ಥಾಪಿಸಿದ ವಿಂಟೆಕ್ ಪ್ರೊಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪಿ ಕಾರ್ಖಾನೆ  ಗ್ರಾಮಸ್ಥರರ ನೆಮ್ಮದಿ ಕಿತ್ತುಕೊಂಡಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಕಾರ್ಖಾನೆ ಬಂದ್ ಮಾಡಿಸಿ ಅಥವಾ ಬೇರೆಡೆ ಸ್ಥಳಾಂತರ ಮಾಡುವಂತೆ ಹೆದ್ದಾರಿ ತಡೆದು ಅನಿರ್ಧಿಷ್ಟಾವಧಿ ಧರಣಿ ನಡೆಸ್ತಿದ್ದಾರೆ. ಕೇರಳ, ಗೋವಾ ರಾಜ್ಯದ ಕಸಾಯಿಖಾನೆಗಳಲ್ಲಿ ದನದ ಮಾಂಸದ ತ್ಯಾಜ್ಯವನ್ನು  ಸಂಗ್ರಹಿಸ್ತಾರೆ. ಅಲ್ಲಿಂದ ತಂದ ಮಾಂಸಾವನ್ನು ಈ ಕಾರ್ಖಾನೆಯಲ್ಲಿ ಕುದಿಸಿ, ಅದರಿಂದ ಪ್ರಾಣಿಗಳ ಆಹಾರ ತಯಾರಿಸಲಾಗುತ್ತಿದೆ. ಇದರಿಂದ ಹೊರಹೊಮ್ಮುವ ದುರ್ನಾತ ಜನರ ನಿದ್ದೆಗೆಡಿಸಿದೆ. ಅಂಚಟಗೇರಿ ಗ್ರಾಮಸ್ಥರು ತಮ್ಮ ಹೊಲಗದ್ದೆಗಳಿಗೆ ಕೆಲಸ ಕಾರ್ಯಕ್ಕೂ ಹೋಗದ ಸ್ಥಿತಿ ಎದುರಾಗಿದೆ.. ಇಷ್ಟೆಲ್ಲಾ ಸಮಸ್ಯೆ ಇದ್ರೂ, ವಾಯುಮಾಲಿನ್ಯ ಮಂಡಳಿಯ ಅಧಿಕಾರಿಗಳು, ಧಾರವಾಡ ಜಿಲ್ಲಾಡಳಿತ ಮಾತ್ರ ಮೌನಕ್ಕೆ ಶರಣಾಗಿದೆ.. ಜಿಲ್ಲಾಡಳಿತದ ಮೌನ ಗ್ರಾಮಸ್ಥರ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ.

ಇದನ್ನೂ ವೀಕ್ಷಿಸಿ:  ಇಲ್ಲಿ ದುಡ್ಡುಕೊಟ್ರೆ ಪರೀಕ್ಷೆ ಪಾಸ್, ಫುಲ್ ಮಾರ್ಕ್ಸ್! ಇದು ಕರ್ನಾಟಕ ರಾಜ್ಯ ಮುಕ್ತ ವಿವಿ ಕರ್ಮಕಾಂಡ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more