ಗ್ರಾಮಸ್ಥರ ನೆಮ್ಮದಿ ಕೊಳ್ಳಿ ಇಟ್ಟ LLP ಕಾರ್ಖಾನೆ: ಕಾರ್ಖಾನೆ ದುರ್ವಾಸನೆಗೆ ಗ್ರಾಮಸ್ಥರ ಬದುಕೇ‌ ದುಸ್ಥರ !

ಗ್ರಾಮಸ್ಥರ ನೆಮ್ಮದಿ ಕೊಳ್ಳಿ ಇಟ್ಟ LLP ಕಾರ್ಖಾನೆ: ಕಾರ್ಖಾನೆ ದುರ್ವಾಸನೆಗೆ ಗ್ರಾಮಸ್ಥರ ಬದುಕೇ‌ ದುಸ್ಥರ !

Published : Sep 13, 2023, 09:56 AM IST

ಅವರೆಲ್ಲರೂ ಕೃಷಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಗ್ರಾಮಸ್ಥರು. ಖಾಸಗಿ ಕಂಪನಿಯಿಂದ ಬರುತ್ತಿರುವ ದುರ್ವಾಸನೆಗೆ ನಲುಗಿದ ಗ್ರಾಮಸ್ಥರು ಕೆಲಸ ಕಾರ್ಯವನ್ನು ಬಿಟ್ಟು ಹೋರಾಟಕ್ಕೆ ಇಳಿದಿದ್ದಾರೆ. ಊರಿಗೆ ಉದ್ಯೋಗದ ಭರವಸೆಯಲ್ಲಿದ್ದವರಿಗೆ ಜೀವ ಉಳಿಸಿಕೊಳ್ಳುವುದೇ ಕಷ್ಟದ ಕೆಲಸವಾಗಿದೆ.  
 

ಮುಖಕ್ಕೆ ಸೆರಗು ಸುತ್ತಿಕೊಂಡ ಮಹಿಳೆಯರು. ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ(Protest). ಪೊಲೀಸರ ಮಾತಿಗೂ ಜಗ್ಗದೆ ಅನಿರ್ಧಿಷ್ಟಾವಧಿ ಧರಣಿ. ಕಾರ್ಖಾನೆ ಬಂದ್‌ ಮಾಡಲೇಬೇಕೆಂದು ಹಠ ಹಿಡಿದು ಹೋರಾಟ. ಈ ದೃಶ್ಯ ಕಂಡು ಬಂದಿದ್ದು, ಹುಬ್ಬಳ್ಳಿ(Hubli) ನಗರದ  ಕೂಗಳತೆ ದೂರದಲ್ಲಿರುವ ಅಂಚಟಗೇರಿ ಗ್ರಾಮದಲ್ಲಿ. ದುರ್ವಾಸನೆ ಬೀರುವ ವಿಂಟೆಕ್ ಪ್ರೊಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪಿ ಕಾರ್ಖಾನೆ(LLP factory) ಬಂದ್ ಮಾಡುವಂತೆ ಇವರೆಲ್ಲಾ ಬೀದಿಗಿಳಿದಿದ್ದಾರೆ. ವಾಸನೆ.. ದುರ್ವಾಸನೆ.. ಮನೆಯಲ್ಲಿ ಇರೋಕಾಲ್ಲ.. ಬೀದಿಗೂ ಬರಕಾಗಲ್ಲ.. ದುರ್ಮಾಂಸ ದುರ್ನಾತ ಗ್ರಾಮಸ್ಥರ ಬದುಕು‌ ದುಸ್ತರ ಮಾಡಿದೆ. ಗ್ರಾಮದಲ್ಲಿ ಮಕ್ಕಳು, ವೃದ್ಧರು , ಅನಾರೋಗ್ಯ ತುತ್ತಾಗುವಂತಾಗಿದೆ. ಕೇರಳದ(Kerala) ಉದ್ಯಮಿಯೊಬ್ಬರು ಸ್ಥಾಪಿಸಿದ ವಿಂಟೆಕ್ ಪ್ರೊಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪಿ ಕಾರ್ಖಾನೆ  ಗ್ರಾಮಸ್ಥರರ ನೆಮ್ಮದಿ ಕಿತ್ತುಕೊಂಡಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಕಾರ್ಖಾನೆ ಬಂದ್ ಮಾಡಿಸಿ ಅಥವಾ ಬೇರೆಡೆ ಸ್ಥಳಾಂತರ ಮಾಡುವಂತೆ ಹೆದ್ದಾರಿ ತಡೆದು ಅನಿರ್ಧಿಷ್ಟಾವಧಿ ಧರಣಿ ನಡೆಸ್ತಿದ್ದಾರೆ. ಕೇರಳ, ಗೋವಾ ರಾಜ್ಯದ ಕಸಾಯಿಖಾನೆಗಳಲ್ಲಿ ದನದ ಮಾಂಸದ ತ್ಯಾಜ್ಯವನ್ನು  ಸಂಗ್ರಹಿಸ್ತಾರೆ. ಅಲ್ಲಿಂದ ತಂದ ಮಾಂಸಾವನ್ನು ಈ ಕಾರ್ಖಾನೆಯಲ್ಲಿ ಕುದಿಸಿ, ಅದರಿಂದ ಪ್ರಾಣಿಗಳ ಆಹಾರ ತಯಾರಿಸಲಾಗುತ್ತಿದೆ. ಇದರಿಂದ ಹೊರಹೊಮ್ಮುವ ದುರ್ನಾತ ಜನರ ನಿದ್ದೆಗೆಡಿಸಿದೆ. ಅಂಚಟಗೇರಿ ಗ್ರಾಮಸ್ಥರು ತಮ್ಮ ಹೊಲಗದ್ದೆಗಳಿಗೆ ಕೆಲಸ ಕಾರ್ಯಕ್ಕೂ ಹೋಗದ ಸ್ಥಿತಿ ಎದುರಾಗಿದೆ.. ಇಷ್ಟೆಲ್ಲಾ ಸಮಸ್ಯೆ ಇದ್ರೂ, ವಾಯುಮಾಲಿನ್ಯ ಮಂಡಳಿಯ ಅಧಿಕಾರಿಗಳು, ಧಾರವಾಡ ಜಿಲ್ಲಾಡಳಿತ ಮಾತ್ರ ಮೌನಕ್ಕೆ ಶರಣಾಗಿದೆ.. ಜಿಲ್ಲಾಡಳಿತದ ಮೌನ ಗ್ರಾಮಸ್ಥರ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ.

ಇದನ್ನೂ ವೀಕ್ಷಿಸಿ:  ಇಲ್ಲಿ ದುಡ್ಡುಕೊಟ್ರೆ ಪರೀಕ್ಷೆ ಪಾಸ್, ಫುಲ್ ಮಾರ್ಕ್ಸ್! ಇದು ಕರ್ನಾಟಕ ರಾಜ್ಯ ಮುಕ್ತ ವಿವಿ ಕರ್ಮಕಾಂಡ

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more