ಅಪಾಯದ ಹಂತದಲ್ಲಿ ಬಡಗಣಿ ನದಿ ಮೇಲಿನ ತೂಗು ಸೇತುವೆ..ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿರುವ ಜನ

ಅಪಾಯದ ಹಂತದಲ್ಲಿ ಬಡಗಣಿ ನದಿ ಮೇಲಿನ ತೂಗು ಸೇತುವೆ..ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿರುವ ಜನ

Published : Mar 17, 2024, 02:22 PM ISTUpdated : Mar 17, 2024, 02:23 PM IST

ತುಕ್ಕು ಹಿಡಿದ ಹಾಗೂ ತುಂಡಾದ ಹಲಗೆಗಳ ನಡುವೆಯೇ ಸರ್ಕಸ್ ಮಾಡ್ತಾ ಮಹಿಳೆಯರು, ಮಕ್ಕಳು, ವೃದ್ಧರು ಹೊನ್ನಾವರದ ಬಡಗಣಿ‌ ನದಿಯ ತೂಗು ಸೇತುವೆ ಮೇಲೆ ಸಾಗುತ್ತಿದ್ದಾರೆ. 

ಉತ್ತರಕನ್ನಡ: ಹೊನ್ನಾವರದ ಬಡಗಣಿ‌ ನದಿಯ ಮೇಲೆ ಹಾಕಿರೋ‌ ತೂಗು ಸೇತುವೆ ಅಪಾಯದಲ್ಲಿದೆ. ತುಕ್ಕು ಹಿಡಿದ ಹಾಗೂ ತುಂಡಾದ ಹಲಗೆಗಳ ನಡುವೆಯೇ ಸರ್ಕಸ್ ಮಾಡ್ತಾ ಮಹಿಳೆಯರು, ಮಕ್ಕಳು, ವೃದ್ಧರು ಸಾಗುತ್ತಿದ್ದಾರೆ. ಯಾವುದೇ ಕ್ಷಣದಲ್ಲಿ ತುಂಡಾಗಿ ಬಡಗಣಿ ನದಿಯ ಒಡಲನ್ನು ಈ ತೂಗು ಸೇತುವೆ ಸೇರುವ ಸಾಧ್ಯತೆ ಇದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ಹಾಗೂ ಪಾವಿನ ಕುರ್ವೆ ಗ್ರಾಮಕ್ಕೆ ಸ‌ಂಪರ್ಕದ ಕೊಂಡಿಯಾಗಿದೆ . ಸುಮಾರು 100 ರಿಂದ 150 ಮೀಟರ್ ಉದ್ದವಾಗಿದೆ ಬಡಗಣಿ ನದಿಯ ಮೇಲಿನ ಈ ತೂಗು ಸೇತುವೆ, ಪ್ರಸ್ತುತ ಬಲಿಗಾಗಿ ಕಾಯ್ತಿದೆ. ಸುಮಾರು 21 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದು, ಸುಮಾರು 30 ಮೀಟರ್ ಎತ್ತರವಿರುವ ಪಿಲ್ಲರ್‌ಗಳಲ್ಲಿ ಕೂಡ ಬಿರುಕು ಮೂಡಿದೆ. ಈ ಪರಿಸ್ಥಿತಿಯ ಅರಿವಿದ್ರೂ ಕಣ್ಣಿದ್ದು ಕುರುಡರಂತಾಗಿದ್ದಾರೆ ಜನಪ್ರತಿನಿಧಿಗಳು, ಅಧಿಕಾರಿಗಳು. 2002ರಲ್ಲಿ 14ರಿಂದ 17 ಲಕ್ಷ ರೂ. ವೆಚ್ಚದಲ್ಲಿ ಈ ತೂಗು ಸೇತುವೆ ನಿರ್ಮಾಣ ಮಾಡಲಾಗಿತ್ತು. 

ಇದನ್ನೂ ವೀಕ್ಷಿಸಿ:  ಮೋದಿಗೆ ಜಯಕಾರ..ಬಿಎಸ್‌ವೈಗೆ ಧಿಕ್ಕಾರ..! ಏನಿದು K S ಈಶ್ವರಪ್ಪ ರಣತಂತ್ರ..?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!